ನಾವು ಆಪರೇಷನ್ ಹಸ್ತ ಮಾಡಿಲ್ಲ…ಅವರಾಗಿಯೇ ಬರುತ್ತಿದ್ದಾರೆ…ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ…
- Politics
- August 24, 2023
- No Comment
- 87
ಮೈಸೂರು,ಆ24,Tv10 ಕನ್ನಡ
ಜೆಡಿಎಸ್ ಶಾಸಕರನ್ನ ಪಕ್ಷಕ್ಕೆ ಸೆಳೆಯಲಾಗುತ್ತಿದೆ ಎಂಬ ಆರೋಪಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.ನಾವು ಆಪರೇಷನ್ ಹಸ್ತ ಮಾಡುತ್ತಿಲ್ಲ.
ಅವರಾಗಿ ಅವರೇ ಪಕ್ಷಕ್ಕೆ ಬರುತ್ತೇವರ ಅಂತಿದ್ದಾರೆ.ಬರುವವರಿಗೆ ಸ್ವಾಗತ ಕೋರುತ್ತಿದ್ದೇವೆ.ನಾವಾಗಿ ನಾವೇ ಯಾರನ್ನೂ ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡ್ತಿಲ್ಲ.
ಅವರ ಭವಿಷ್ಯದ ದೃಷ್ಟಿಯಿಂದ ನಮ್ಮ ಪಕ್ಷದ ವರ್ಚಸ್ ನೋಡಿ ಅವರೇ ನಿರ್ಧಾರ ಮಾಡ್ತಿದ್ದಾರೆ.
ಎಷ್ಟು ಜನ ಬರ್ತಾರೆ ಎಂಬುದನ್ನ ಈಗಲೇ ನಾನು ಹೇಳಲು ಸಾಧ್ಯವಿಲ್ಲ.
ಎಲ್ಲದಕ್ಕೂ ಕಾಲ, ಸಮಯ ಗಳಿಗೆ ಎಂಬುದು ಇರುತ್ತದೆ.
ಆ ಘಳಿಗೆ ಬಂದಾಗ ಎಲ್ಲವೂ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದರು.ಶಾಸಕರನ್ನ ಸೆಳೆಯುತ್ತಿದ್ದಾರೆ ಎಂಬ ಮಾತುಗಳನ್ನು ನಾನು ಹೇಳುತ್ತಾ ಹೋದರೆ ಅದು ಬಹಳ ದೊಡ್ಡದಾಗುತ್ತದೆ.
ಈಗ ಅದರ ಬಗ್ಗೆ ಚರ್ಚೆ ಬೇಡ ಎಂದು ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ…