ರಸ್ತೆ ಅಪಘಾತ:ರೈತ ಸಾವು…ರಸ್ತೆ ತಡೆ ನಡೆಸಿ ಪ್ರತಿಭಟನೆ…

  • Crime
  • August 26, 2023
  • No Comment
  • 90

ಮೈಸೂರು,ಆ26,Tv10 ಕನ್ನಡ

ರಸ್ತೆ ಅಪಘಾತದಲ್ಲಿ ರೈತರೊಬ್ಬರು ಮೃತಪಟ್ಟ ಹಿನ್ನಲೆ ಅನ್ನದಾತರು ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ಘಟನೆ ಮೈಸೂರು-ಟಿ.ನರಸೀಪುರ ಹೆದ್ದಾರಿಯ ಕುರುಬೂರು ಗ್ರಾಮದ ಬಳಿ ನಡೆಯಿತು.ನಾಗರಾಜ್ (80) ಅಪಘಾತದಲ್ಲಿ ಮೃತಪಟ್ಟ ರೈತ.ಪುತ್ರ ರಾಜೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ನಾಗರಾಜ್ ಹಾಗೂ ಪುತ್ರ ರಾಜೇಶ್ ಜಮೀನಿನ ಕೆಲಸ ಮುಗಿಸಿ ತಮ್ಮ ಬೈಕ್ ನಲ್ಲಿ ಬರುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಮತ್ತೊಂದು ಬೈಕ್ ಢಿಕ್ಕಿ ಹೊಡೆದಿದೆ.ಇದರ ಪರಿಣಾಮ ನಾಗರಾಜ್ ಮೃತಪಟ್ಟಿದ್ದಾರೆ.ರಾಜೇಶ್ ಗೆ ಗಂಭೀರ ಗಾಯವಾಗಿದೆ.ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ ಮರಗಿಡಗಳು ಹಾಗೂ ಪೊದೆಗಳನ್ನ ಕತ್ತರಿಸಿ ಟ್ರಿಮ್ ಮಾಡುವಲ್ಲಿ ಜಿಲ್ಲಾಡಳಿತ ವಿಫಲವಾದ ಕಾರಣ ಅಪಘಾತ ನಡೆದಿದೆ ಎಂದು ಆಕ್ರೋಷ ವ್ಯಕ್ತಪಡಿಸಿದ ರೈತರು ನಾಗರಾಜ್ ರವರ ಮೃತದೇಹವನ್ನ ಇಟ್ಟು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಕೆಲವು ದಿನಗಳ ಹಿಂದೆ ನಡೆದ ಭೀಕರ ಅಪಘಾತದಲ್ಲಿ ಬಳ್ಳಾರಿಯ 9 ಮಂದಿ ಮೃತಪಟ್ಟಿದ್ದರು.ಹೀಗಿದ್ದೂ ಜಿಲ್ಲಾಡಳಿತ ಎಚ್ಚೆತ್ತುಕೊಂಡಿಲ್ಲ.ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಂಡಿಲ್ಲ.ಹೀಗಾಗಿ ಅಪಘಾತಗಳು ನಡೆಯುತ್ತಿವೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಆಕ್ರೋಷ ವ್ಯಕ್ತಪಡಿಸಿದರು….

Spread the love

Related post

ಹಳೇ ವೈಷಮ್ಯ.. ಯುವಕನಿಗೆ ಚಾಕು ಇರಿತ…

ಹಳೇ ವೈಷಮ್ಯ.. ಯುವಕನಿಗೆ ಚಾಕು ಇರಿತ…

ಹಳೇ ವೈಷಮ್ಯ.. ಯುವಕನಿಗೆ ಚಾಕು ಇರಿತ… ಹುಣಸೂರು,ಅ18,Tv10 ಕನ್ನಡ ಹಳೇ ವೈಷಮ್ಯ ಹಿನ್ನಲೆ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ಹುಣಸೂರು ತಾಲ್ಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.ಕೃಷಿ ಕೂಲಿ ಕಾರ್ಮಿಕ…
ರಾಬರಿ ಪ್ರಕರಣ…ಆರೋಪಿ ಅಂದರ್…ಮೈಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ರಾಬರಿ ಪ್ರಕರಣ…ಆರೋಪಿ ಅಂದರ್…ಮೈಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮೈಸೂರು,ಅ17,Tv10 ಕನ್ನಡ ಬಾಡಿಗೆ ನೆಪದಲ್ಲಿ ಚಾಲಕನಿಗೆ ಹಲ್ಲೆ ನಡೆಸಿ ಆಟೋ,ನಗದು ಹಾಗೂ ಮೊಬೈಲ್ ದೋಚಿ ಪರಾರಿಯಾದ ಪ್ರಮುಖ ಆರೋಪಿಯನ್ನ ಬಂಧಿಸುವಲ್ಲಿ ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಆರೋಪಿಯಿಂದ ಆಟೋ…
ಮುಡಾ ಅಧ್ಯಕ್ಷ ಕೆ.ಮರಿಗೌಡ ರಾಜಿನಾಮೆ…ಆಡಳಿತಾಧಿಕಾರಿ ನೇಮಕಕ್ಕೆ ನಿರ್ಧಾರ…

ಮುಡಾ ಅಧ್ಯಕ್ಷ ಕೆ.ಮರಿಗೌಡ ರಾಜಿನಾಮೆ…ಆಡಳಿತಾಧಿಕಾರಿ ನೇಮಕಕ್ಕೆ ನಿರ್ಧಾರ…

ಮೈಸೂರು,ಅ16,Tv10 ಕನ್ನಡ ಮುಡಾದ ಅಧ್ಯಕ್ಷ ಕೆ ಮರೀಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ಬೆಂಗಳೂರಿನ ನಗರಾಭಿವೃದ್ಧಿ ಸಚಿವಾಲಯದಲ್ಲಿ ರಾಜೀನಾಮೆ ನೀಡಿದ್ದಾರೆ.ಮುಡಾಗೆ ಆಡಳಿತಾಧಿಕಾರಿ ನೇಮಕಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ…

Leave a Reply

Your email address will not be published. Required fields are marked *