ಮೈಸೂರು:ಬಿಸಿಎಂ ಹಾಸ್ಟೆಲ್ ಹೆಣ್ಣುಮಕ್ಕಳಿಗೆ ಟಾರ್ಚರ್…ಸಿಎಂ ಗೆ ಪತ್ರ ಬರೆದ್ರೂ ಡೋಂಟ್ ಕೇರ್…ವಿಧ್ಯಾರ್ಥಿನಿಯರ ಗೋಳು ಕೇಳುವವರಾರು…?

ಮೈಸೂರು:ಬಿಸಿಎಂ ಹಾಸ್ಟೆಲ್ ಹೆಣ್ಣುಮಕ್ಕಳಿಗೆ ಟಾರ್ಚರ್…ಸಿಎಂ ಗೆ ಪತ್ರ ಬರೆದ್ರೂ ಡೋಂಟ್ ಕೇರ್…ವಿಧ್ಯಾರ್ಥಿನಿಯರ ಗೋಳು ಕೇಳುವವರಾರು…?

ಮೈಸೂರು,ಆ28,Tv10 ಕನ್ನಡ

ಮೈಸೂರಿನ ಗಾಯಿತ್ರಿಪುರಂ ನಲ್ಲಿರುವ ಬಿಸಿಎಂ ಹಾಸ್ಟೆಲ್ ನಲ್ಲಿರುವ ವಿಧ್ಯಾರ್ಥಿನಿಯರ ಗೋಳು ಕೇಳುವವರೇ ಇಲ್ಲದಂತಾಗಿದೆ.ಅಲ್ಲಿನ ಸಿಬ್ಬಂದಿಗಳ ದೌರ್ಜನ್ಯಕ್ಕೆ ವಿಧ್ಯಾರ್ಥನಿಯರು ಹೈರಾಣರಾಗಿದ್ದಾರೆ.ಬಡತನದ ಬೇಗೆಯಲ್ಲಿ ವಿವಿದ ಭಾಗಗಳಿಂದ ಓದಲು ಬಂದ ವಿಧ್ಯಾರ್ಥಿನಿಯರು ಸಿಬ್ಬಂದಿಗಳ ಟಾರ್ಚರ್ ಗೆ ತತ್ತರಿಸಿದ್ದಾರೆ.ವಿಧ್ಯಾರ್ಥಿನಿಯರ ನೆರವಿಗೆ ಆರ್.ಟಿ.ಐ.ಕಾರ್ಯಕರ್ತರೊಬ್ಬರು ಬಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರೂ ಸಿಬ್ಬಂದಿಗಳು ಕ್ಯಾರೆ ಎನ್ನುತ್ತಿಲ್ಲ.ಅಲ್ಲಿನ ಫೋಟೋಗಳು ವಿಧ್ಯಾರ್ಥಿನಿಯರ ಬವಣೆಯನ್ನ ಪ್ರದರ್ಶಿಸುತ್ತಿದೆ

ಸಿಬ್ಬಂದಿಗಳು ಮಾಡಬೇಕಾದ ಕೆಲಸಗಳನ್ನ ವಿಧ್ಯಾರ್ಥಿನಿಯರು ಮಾಡಬೇಕಾದ ದುಃಸ್ಥಿತಿ ಇಲ್ಲಿಯದು.ಹಾಸ್ಟೆಲ್ ಸ್ವಚ್ಛಗೊಳಿಸುವುದು,ಅಡಿಗೆ ಕೆಲಸ ಮಾಡಿಸುವುದು,ಪಾತ್ರೆಗಳನ್ನ ತೊಳೆಸುವುದು,ಮುಖ್ಯವಾಗಿ ಶೌಚಾಲಯಗಳನ್ನೂ ಸಹ ಸ್ವಚ್ಛಗೊಳಿಸುವ ಕೆಲಸಗಳನ್ನ ವಿಧ್ಯಾರ್ಥಿನಿಯರೇ ಮಾಡುತ್ತಿದ್ದಾರೆ.ಇದು ಸಾಲದೆಂಬಂತೆ ಊಟ ನೀಡದೆ ಸತಾಯಿಸುತ್ತಿರುವುದೂ ಸಹ ಕೇಳಿ ಬರುತ್ತಿದೆ.ಕುಂಟುನೆಪ ನೀಡಿ ಊಟ ಹಾಕದೆ ತೊಂದರೆ ಕೊಡುತ್ತಿದ್ದಾರೆ.ಈ ಬಗ್ಗೆ ಯಾವುದೇ ವಿಧ್ಯಾರ್ಥಿನಿಯರು ಪ್ರಶ್ನಿಸಲು ಧೈರ್ಯ ಸಾಲದೇ ಹೆದರಿ ಕಾಲ ದೂಡುತ್ತಿದ್ದಾರೆ.ಮೈಸೂರಿನ

ಆರ್.ಟಿ.ಐ.ಕಾರ್ಯಕರ್ತ ಮೋಹನ್ ಕುಮಾರ್ ಎಂಬುವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ರವರಿಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.ಉಡಾಫೆ ವರ್ತನೆ ತೋರುತ್ತಿರುವ ಸಿಬ್ಬಂದಿಗಳು ಯಾರಿಗೆ ಬೇಕಾದ್ರೂ ದೂರು ನೀಡುವಂತೆ ನಿರ್ಲಕ್ಷಿಸುತ್ತಿರುವುದಾಗಿ ಆರೋಪ ಕೇಳಿ ಬಂದಿದೆ.ಸಂಭಂಧಪಟ್ಟ ಅಧಿಕಾರಿಗಳು ಕೂಡಲೇ ಹಾಸ್ಟೆಲ್ ಗೆ ಭೇಟಿ ನೀಡಿ ವಿಧ್ಯಾರ್ಥಿನಿಯರ ನೆರವಿಗೆ ಧಾವಿಸಬೇಕಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *