ನೌಕರರಿಗೆ ಸೆಟಲ್ ಮೆಂಟ್ ಮಾಡದ ಕಾರ್ಖಾನೆ… ಪೆಟ್ರೋಲ್ ಬಾಟಲ್ ಹಿಡಿದು ಆತ್ಮಹತ್ಯೆ ಬೆದರಿಕೆ…

ನೌಕರರಿಗೆ ಸೆಟಲ್ ಮೆಂಟ್ ಮಾಡದ ಕಾರ್ಖಾನೆ… ಪೆಟ್ರೋಲ್ ಬಾಟಲ್ ಹಿಡಿದು ಆತ್ಮಹತ್ಯೆ ಬೆದರಿಕೆ…

ನಂಜನಗೂಡು,ಆ28,Tv10 ಕನ್ನಡ

22 ವರ್ಷಗಳಿಂದ ಕೆಲಸ ಮಾಡಿದ ಇಬ್ಬರು ನೌಕರರಿಗೆ ಸೆಟಲ್ ಮೆಂಟ್ ಮಾಡಲು ವಿಳಂಬ ಧೋರಣೆ ತೋರಿದ ಕಾರ್ಖಾನೆ ವಿರುದ್ದ ಆಕ್ರೋಷ ವ್ಯಕ್ತವಾಗಿಧ. ಕಾರ್ಖಾನೆ ಮುಂದೆ ಪೆಟ್ರೋಲ್ ತುಂಬಿರುವ ಬಾಟಲ್ ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದಾರೆ.
ನಂಜನಗೂಡಿನ ಕಲ್ಲಹಳ್ಳಿ ಕೈಗಾರಿಕಾ ಬಡಾವಣೆಯಲ್ಲಿರುವ ನ್ಯೂ ಹಾರಿಜನ್ ಕಾರ್ಖಾನೆ ಮುಂಭಾಗ ಪ್ರತಿಭಟನೆಗೆ ಇಳಿದಿದ್ದಾರೆ.ಸೆಟಲ್ ಮೆಂಟ್ ಮಾಡದಿದ್ದಲ್ಲಿ ಆತ್ಮಹತ್ಯೆಯೇ ದಾರಿ ಎಂದು ನೋವನ್ನ ವ್ಯಕ್ತಪಡಿಸಿದ್ದಾರೆ.
ನಮ್ಮ ಸಾವಿಗೆ ಕಾರ್ಖಾನೆಯ ಮಾಲೀಕರೇ ಹೊಣೆಗಾರರು ಎಂದು ಆರೋಪಿಸಿದ್ದಾರೆ. ದಿನಗೂಲಿ ನೌಕರರಾಗಿ ದುಡಿಯುತ್ತಿರುವ ಸುರೇಶ್ ಮತ್ತು ನಾಗಣ್ಣ ಪೆಟ್ರೋಲ್ ಬಾಟಲಿ ಹಿಡಿದು ಆತ್ಮಹತ್ಯೆಗೆ ನಿರ್ಧರಿಸಿರುವ ಕಾರ್ಮಿಕರು. ಶಾಸಕ ದರ್ಶನ್ ಧ್ರುವನಾರಾಯಣ್ ರವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ.ಕಳೆದ 22 ವರ್ಷಗಳಿಂದ ದಿನಗೂಲಿ ನೌಕರರಾಗಿ ದುಡಿದಿರುವ ಇಬ್ಬರಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಿ ಇಲ್ಲದಿದ್ದಲ್ಲಿ ಸೆಟಲ್ ಮೆಂಟ್ ಮಾಡಿಕೊಳ್ಳುವಂತೆ ಆಡಳಿತಮಂಡಳಿ ಸೂಚಿಸಿದೆ. ಆಡಳಿತ ಮಂಡಳಿಯ ಸೂಚನೆಯಂತೆ ಸೆಟಲ್ ಮೆಂಟ್ ಮಾಡದೆ ಸತಾಯಿಸುತ್ತಿರುವ ಹಿನ್ನಲೆ ಬೇಸತ್ತ ನೌಕರರಿಬ್ಬರು ಪೆಟ್ರೋಲ್ ಬಾಟಲ್ ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *