ಏಳು ದೇವರುಗಳ ಒಲಿಸಿಕೊಂಡ ದೇವಮಾನವ ಗುಡ್ಡಪ್ಪ ಸೂಸೈಡ್…ಲಕ್ಷಲಕ್ಷ ಸಾಲ ಕೊಟ್ಟ ಭಕ್ತರು ಅತಂತ್ರ…ಕಣ್ಣೀರಲ್ಲಿ ಮುಳುಗಿರುವ ಸಾಲ ಕೊಟ್ಟ ಭಕ್ತವೃಂದ…

  • Crime
  • August 29, 2023
  • No Comment
  • 391

ಏಳು ದೇವರುಗಳ ಒಲಿಸಿಕೊಂಡ ದೇವಮಾನವ ಗುಡ್ಡಪ್ಪ ಸೂಸೈಡ್…ಲಕ್ಷಲಕ್ಷ ಸಾಲ ಕೊಟ್ಟ ಭಕ್ತರು ಅತಂತ್ರ…ಕಣ್ಣೀರಲ್ಲಿ ಮುಳುಗಿರುವ ಸಾಲ ಕೊಟ್ಟ ಭಕ್ತವೃಂದ…

ಬನ್ನೂರು,ಆ29,Tv10 ಕನ್ನಡ

ದೇವರ ಹೆಸರಿನಲ್ಲಿ ಭಕ್ತರಿಗೆ ಲಕ್ಷಾಂತರ ಹಣಕ್ಕೆ ಪಂಗನಾಮ ಹಾಕಿ ರಾತ್ರೋರಾತ್ರಿ ಎಸ್ಕೇಪ್ ಆಗಿದ್ದ ಏಳುದೇವರ ಒಲಿಸಿಕೊಂಡಿದ್ದ ದೇವಮಾನವ ಗುಡ್ಡಪ್ಪ ಆತ್ಮಹತ್ಯೆಗೆ ಶರಣಾಗಿದ್ದಾನೆ.ಗುಡ್ಡಪ್ಪನ ಮಾತಿಗೆ ಮರುಳಾಗಿ ಲಕ್ಷಾಂತರ ಸಾಲ ಕೊಟ್ಟ ಭಕ್ತರು ಅತಂತ್ರಕ್ಕೆ ಸಿಲುಕಿದ್ದಾರೆ. ಲಕ್ಷಾಂತರ ಹಣಕ್ಕೆ ಉಂಡೆನಾಮ ಹಾಕಿಸಿಕೊಂಡ ಭಕ್ತರು ಕಣ್ಣೀರಿನಲ್ಲಿ ಮುಳುಗಿದ್ದಾರೆ.

ಬನ್ನೂರಿನ ರಂಗಸಮುದ್ರದ ರಾಜಾಪರಮೇಶ್ವರಿ ನಾಲೆ ದಂಡೆಯಲ್ಲಿ ನಿರ್ಮಿಸಲಾದ ಜಲ್ ಜಲ್ ಶಾಂತಿ ಮಾದಪ್ಪ ದೇವಸ್ಥಾನದ ಗುಡ್ಡಪ್ಪ ವಿಜಯ್ ಕುಮಾರ್ ಆತ್ಮಹತ್ಯೆಗೆ ಶರಣಾದವರು.ಜಲ್ ಜಲ್ ಮಾದಪ್ಪ,ಗಂಗಾಮಾತೆ,ಗಿರಿಜಾಮಾತೆ,ಲಕ್ಷ್ಮೀದೇವಿ,ಕರಿಮಾರಮ್ಮ,ಬೆಟ್ಟಳ್ಳಿ ಮಾರಮ್ಮ ಹಾಗೂ ಮುನೇಶ್ವರ ದೇವರುಗಳು ಒಂದೇ ದಿನ ಗುಡ್ಡಪ್ಪನ ಮೈಮೇಲೆ ಬರುತ್ತಿತ್ತು.ಈ ವೇಳೆ ಭಕ್ತರಿಗೆ ಹಣ ನೀಡುವಂತೆ ಆಜ್ಞೆ ಮಾಡುತ್ತಿದ್ದ.ಅಲ್ಲದೆ ದೇವಸ್ಥಾನದಲ್ಲಿ ಹುತ್ತ ನಿರ್ಮಿಸಿ ನಿಧಿ ಇರುವುದಾಗಿ ಆಸೆ ಹುಟ್ಟಿಸಿ ಭಕ್ತರಿಂದ ಲಕ್ಷಾಂತರ ಹಣ ಸಾಲ ಪಡೆದಿದ್ದ.ಸರ್ಕಾರದ ಗಮನಕ್ಕೆ ಹೋದ್ರೆ ನಿಧಿಯನ್ನ ವಶಪಡಿಸಿಕೊಳ್ಳುತ್ತೆ ಎಂಬ ಸಬೂಬು ಹೇಳಿ ಹಣ ಹಿಂದಿರುಗಿಸದೆ ಸತಾಯಿಸುತ್ತಿದ್ದ.ಲಕ್ಷ ಲಕ್ಷಗಳಲ್ಲಿ ಹಣ ಕೊಟ್ಟ ಭಕ್ತರಾದ ಮಹದೇವಮ್ಮ,ಶಿವಮ್ಮ,ಜಯಮ್ಮ,ವಡ್ಗಲ್ಲೇಗೌಡ,ನಾರಾಯಣ,ಅಶ್ವಿನಿ,ಆನಂದ್,ಸುನಂದ,ಮೋಹನ್ ಲಾಲ್ ಎಂಬುವರು ಪೊಲೀಸರ ಮೊರೆ ಹೋಗಿದ್ದರು.ಪೊಲೀಸರ ವಿಚಾರಣೆ ಹಾಗೂ ಸಾಲಗಾರ ಭಕ್ತರ ಒತ್ತಡಕ್ಕೆ ಹೆದರಿದ ಗುಡ್ಡಪ್ಪ ವಿಜಯ್ ಕುಮಾರ್ ಕಳೆದ ವರ್ಷ ನಾಪತ್ತೆಯಾದ. ಗುಡ್ಡಪ್ಪನ ಪತ್ತೆಗಾಗಿ ಭಕ್ತರು ಹುಡುಕಾಟದಲ್ಲಿದ್ದಾಗಲೇ ಶಾಕಿಂಗ್ ನ್ಯೂಸ್ ತಲುಪಿದೆ.ಮಂಡ್ಯದ ಹೊಸೂರುಕಾಲೋನಿ ಹಳ್ಳಿಯ ತೋಟದ ಮನೆಯೊಂದರಲ್ಲಿ ಗುಡ್ಡಪ್ಪ ವಿಜಯ್ ಕುಮಾರ್ ನೇಣಿಗೆ ಶರಣಾಗಿದ್ದಾನೆ.ರಂಗಸಮುದ್ರದಿಂದ ನಾಪತ್ತೆಯಾದ ಏಳುದೇವರ ಒಲಿಸಿಕೊಂಡ ಗುಡ್ಡಪ್ಪ ವಿಜಯ್ ಕುಮಾರ್ ಖಾಸಗಿ ವ್ಯಕ್ತಿಯೊಬ್ಬರ ತೋಟದ ಮನೆ ಸೇರಿಕೊಂಡು ಹಸುಗಳನ್ನ ಸಾಕುತ್ತಾ ತೋಟದ ನಿರ್ವಹಣೆಯಲ್ಲಿ ಮುಳುಗಿದ್ದ.ಜುಲೈ 13 ರಂದು ವಿಜಯ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾನೆ.ನಿಧಿ ಆಸೆಗೆ ಲಕ್ಷಾಂತರ ಹಣ ನೀಡಿ ವಂಚನೆಗೆ ಒಳಗಾದ ಭಕ್ತರು ಕಣ್ಣೀರಿನಲ್ಲಿ ಮುಳುಗಿದ್ದಾರೆ.ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಜಲ್ ಜಲ್ ಶಾಂತಿ ಮಾದಪ್ಪ ದೇವಾಲಯವೂ ಅನಾಥವಾಗಿದೆ.ಹಣ ಕಳೆದುಕೊಂಡು ಕಣ್ಣೀರಿನಲ್ಲಿ ಮುಳುಗಿರುವ ಭಕ್ತರ ಪರಿಸ್ಥಿತಿ ಶೋಚನೀಯವಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *