ಬಸ್ ಕಂಡಕ್ಟರ್ ಹಾಗೂ ಯುವತಿಯರಿಗೆ ಧಂಕಿ…ಇಬ್ಬರು ಕಿಡಿಗೇಡಿಗಳು ಅಂದರ್…

  • Crime
  • August 29, 2023
  • No Comment
  • 127

ನಂಜನಗೂಡು,ಆ29,Tv10 ಕನ್ನಡ

ಚಲಿಸುತ್ತಿದ್ದ ಕೆ.ಎಸ್ ಆರ್.ಟಿ.ಸಿ.ಬಸ್ ಅಡ್ಡಗಟ್ಟಿ ನಿಲ್ಲಿಸಿ ಪ್ರಯಾಣಿಸುತ್ತಿದ್ದ ಓರ್ವ ಯುವಕನ ಮೇಲೆ ಹಲ್ಲೆ ಮಾಡುತ್ತಿದ್ದ ವರ್ತನೆಯನ್ನ ಪ್ರಶ್ನಿಸಿದ ಕಂಡಕ್ಟರ್ ಜೊತೆ ಹಾಗೂ ಕೆಲವು ಯುವತಿಯರ ಜೊತೆ ಅನುಚಿತವಾಗಿ ವರ್ತಿಸಿದ ಇಬ್ಬರು ಕಿಡಿಗೇಡಿಗಳ ಹೆಡೆಮುರಿ ಕಟ್ಟುವಲ್ಲಿ ಹುಲ್ಲಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ನಂಜನಗೂಡು ತಾಲೂಕು ಕುರಿಹುಂಡಿ ಗ್ರಾಮದ ಶ್ರೀನಿವಾಸ್ ನಾಯಕ್ ಹಾಗೂ ಕೀರ್ತಿ ಬಂಧಿತ ಕಿಡಿಗೇಡಿಗಳು.ಕೆ.ಎಸ್.ಆರ್.ಟಿ.ಸಿ.ಬಸ್ ನಿರ್ವಾಹಕ ಪ್ರದೀಪ್ ನಾಯಕ್ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಹುಲ್ಲಹಳ್ಳಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.ಜುಲೈ 13 ರಂದು ಹುಲ್ಲಹಳ್ಳಿಯಿಂದ ಆಕಳ ಗ್ರಾಮಕ್ಕೆ ಕೆ.ಎಸ್.ಆರ್.ಟಿ.ಸಿ.ಬಸ್ ಪ್ರಯಾಣಿಕರನ್ನ ಕರೆದೊಯ್ಯುತ್ತಿದ್ದ ವೇಳೆ ಬೈಕ್ ನಿಂದ ಬಂದ ಮೂವರು ಬಸ್ ನ್ನ ಅಡ್ಡಗಟ್ಟಿ .ಓರ್ವ ಯುವಕ ಒಳಗೆ ಪ್ರವೇಶಿಸಿ ಏಕಾಏಕಿ ಭದ್ರ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾನೆ.ಇದನ್ನ ಪ್ರಶ್ನಿಸಿದ ಕಂಡಕ್ಟರ್ ಗೆ ಅವ್ಯಾಚ ಶಬ್ಧಗಳಿಂದ ನಿಂದಿಸಿದ್ದಾನೆ.ಕೆಲವು ಯುವತಿಯರಿಗೂ ನಿಂದಿಸಿದ್ದಾನೆ.ನಂತರ ತನ್ನ ಸ್ನೇಹಿತರ ಸಹಾಯದಿಂದ ಮತ್ತೆ ಬಸ್ ಮುಂದೆ ಸಾಗದಂತೆ ಅಡ್ಡಿಪಡಿಸಿ ಕಿರೀಕ್ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ.ಒಟ್ಟು 5 ಮಂದಿ ಸೇರಿ ಕಂಡಕ್ಟರ್ ಗೆ ಧಂಕಿ ಹಾಕಿದ್ದಾರೆ.ಶ್ರೀನಿವಾಸ್,ಕೀರ್ತಿ,ಕೃಷ್ಣಮೂರ್ತಿ,ಕುಮಾರ್ ಹಾಗೂ ಪ್ರಜ್ವಲ್ ಎಂಬುವರು ಕರ್ತವ್ಯಕ್ಕೆ ಅಡ್ಡಿಪಡಿಸಿ ಕಿರಿಕ್ ಮಾಡಿದ್ದಾರೆ.ನಂತರ ನಿರ್ವಾಹಕ ಪ್ರದೀಪ್ ನಾಯಕ್ ತನ್ನ ಹಿರಿಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿ ಹುಲ್ಲಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದಾರೆ.ಪ್ರಕರಣ ದಾಖಲಿಸಿಕೊಂಡ ಹುಲ್ಲಹಳ್ಳಿ ಠಾಣಾ ಪೊಲೀಸರು 5 ಮಂದಿ ಪೈಕಿ ಶ್ರೀನಿವಾಸ್ ಹಾಗೂ ಕೀರ್ತಿಯನ್ನ ಬಂಧಿಸಿದ್ದಾರೆ.ಉಳಿದ ಇಬ್ಬರು ಆರೋಪಿಗಳಿಗಾಗಿ ಜಾಲ ಬೀಸಿದ್ದಾರೆ.ಸಧ್ಯ ಕಂಡಕ್ಟರ್ ಹಾಗೂ ಯುವತಿಯರಿಗೆ ಅವ್ಯಾಚ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *