ನಂಜನಗೂಡು:ಇಬ್ಬರು ಮೇಕೆ ಕಳ್ಳರ ಬಂಧನ…ನಾಲ್ಕು ಮೇಕೆಗಳು ವಶ…

  • Crime
  • September 2, 2023
  • No Comment
  • 209

ನಂಜನಗೂಡು:ಇಬ್ಬರು ಮೇಕೆ ಕಳ್ಳರ ಬಂಧನ…ನಾಲ್ಕು ಮೇಕೆಗಳು ವಶ…

ನಂಜನಗೂಡು,ಸೆ2,Tv10 ಕನ್ನಡ

ನಂಜನಗೂಡಿನ ದೊಡ್ಡ ಕವಲಂದೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಇಬ್ಬರು ಮೇಕೆ ಕಳ್ಳರು ಸೆರೆಯಾಗಿದ್ದಾರೆ.ಕೊಟ್ಟಿಗೆಯಲ್ಲಿ ಕಟ್ಟಿಹಾಕಲಾಗಿದ್ದ ಮೇಕೆಗಳನ್ನ ಕದ್ದು ಕೇವಲ 24 ಗಂಟೆಯಲ್ಲಿ ಸಿಕ್ಕಿಬಿದ್ದಿದ್ದಾರೆ.ಮಂಡ್ಯ ಜಿಲ್ಲೆಯ ಲಿಖಿತ್ ಗೌಡ ಹಾಗೂ ವರುಣ ಬಂಧಿತರು. ಕೋಣನೂರು ಗ್ರಾಮದ ಬಿಳಿಗಿರಿ ರಂಗಯ್ಯ ಎಂಬವರಿಗೆ ಸೇರಿದ ನಾಲ್ಕು ಮೇಕೆಗಳನ್ನು ಕಳುವು ಮಾಡಿದ್ದರು.ಈ ಕುರಿತಂತೆ ದೊಡ್ಡ ಕವಲಂದೆ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿತ್ತು.
ತಕ್ಷಣವೇ ಕಾರ್ಯ ಪ್ರವೃತ್ತರಾದ ದೊಡ್ಡಕವಲಂದೆ ಪೊಲೀಸ್ ಪಡೆ ಖಚಿತ ಮಾಹಿತಿಯನ್ನು ಆದರಿಸಿ, ವಾಹನ ತಪಾಸನೆ ನಡೆಸುವ ವೇಳೆ, ಹನುಮನಪುರ ಗೇಟ್ ಬಳಿ ಹೈಟೆಕ್ ಕಾರಿನಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದಾಗ ಮಾಲು ಸಮೇತ ಮೇಕೆ ಕದ್ದಿದ್ದ ಖದೀಮರು ಸಿಕ್ಕಿಬಿದ್ದಿದ್ದಾರೆ.
ತಕ್ಷಣವೇ ಆರೋಪಿಗಳನ್ನು ಠಾಣೆಗೆ ಕರೆದು ತಂದು ವಿಚಾರಣೆ ನಡೆಸಿದಾಗ ಶೋಕಿಗಾಗಿ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿ ಕೊಂಡಿದ್ದಾರೆ.ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *