ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ಆಂಬ್ಯುಲೆನ್ಸ್ ನಲ್ಲಿ ಬಂದ ಸರ್ವೆಯರ್…ತುರ್ತು ಚಿಕಿತ್ಸೆ ಪಡೆಯುತ್ತಿದ್ದರೂ ಇಂತಹ ಸಾಹಸ ಯಾಕೆ…?

ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ಆಂಬ್ಯುಲೆನ್ಸ್ ನಲ್ಲಿ ಬಂದ ಸರ್ವೆಯರ್…ತುರ್ತು ಚಿಕಿತ್ಸೆ ಪಡೆಯುತ್ತಿದ್ದರೂ ಇಂತಹ ಸಾಹಸ ಯಾಕೆ…?

ಮೈಸೂರು,ಸೆ3,Tv10 ಕನ್ನಡ

ಅಪೊಲೋ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದ ಸರ್ವೆಯರ್ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ಆಂಬ್ಯುಲೆನ್ಸ್ ನಲ್ಲಿ ಬಂದು ಅಚ್ಚರಿ ಮೂಡಿಸಿದ ಘಟನೆ ಮೈಸೂರು ಮಿನಿವಿಧಾನ ಸೌಧದ ಬಳಿ ಬೆಳಕಿಗೆ ಬಂದಿದೆ.ತುರ್ತು ಚಿಕಿತ್ಸೆಯಲ್ಲಿರುವ ಸಿಬ್ಬಂದಿಯ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ನಿರಾಕರಿಸಿ ಹಿಂದಕ್ಕೆ ಕಳಿಸಿದ ವಿಡಿಯೋ ವೈರಲ್ ಆಗಿದೆ.ಎಮರ್ಜೆನ್ಸ್ ಚಿಕಿತ್ಸೆಯಲ್ಲಿರುವ ಸಮಯದಲ್ಲಿ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳುವ ದರ್ದು ಏನಿತ್ತು ಎಂಬ ಯಕ್ಷ ಪ್ರಶ್ನೆ ಸಾರ್ವಜನಿಕರನ್ನ ಕಾಡಿದೆ.

ಆಂಬ್ಯುಲೆನ್ಸ್ ನಲ್ಲೇ ಮಲಗಿ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ಬಂದವರು ಸರ್ವೆಯರ್ ದೇವರಾಜ್.ಮಂಡ್ಯ ತಾಲೂಕು ಕಚೇರಿಯಲ್ಲಿ ಸರ್ವೆಯರ್ ಆಗಿ ಕರ್ತವ್ಯ ನಿರತವಹಿಸುತ್ತಿದ್ದ ದೇವರಾಜ್ ಗೆ ಮೈಸೂರು ತಾಲೂಕು ಕಚೇರಿಗೆ ವರ್ಗಾವಣೆ ಆಗಿದೆ.ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳುವ ಸಮಯಕ್ಕೆ ಸರಿಯಾಗಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.ಹಾಸಿಗೆ ಹಿಡಿದು ತುರ್ತು ಚಿಕಿತ್ಸೆ ಪಡೆಯುತ್ತಿದ್ದರೂ ಲೆಕ್ಕಿಸದೆ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ಮೈಸೂರು ತಾಲೂಕು ಕಚೇರಿಗೆ ಆಂಬ್ಯುಲೆನ್ಸ್ ನಲ್ಲೇ ಆಗಮಿಸಿದ್ದಾರೆ.

ದೇವರಾಜ್ ರವರು ಗುಣಮುಖರಾಗದೆ ಚಿಕಿತ್ಸೆ ಪಡೆಯುವ ವೇಳೆ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳುವ ಕಾರಣ ಏನು…?

ಗುಣಮುಖರಾಗುವ ಮುನ್ನವೇ ಡಿಸ್ಚಾರ್ಜ್ ಮಾಡದೆ ಆಸ್ಪತ್ರೆ ಅಧಿಕಾರಿಗಳು ಈ ಸಾಹಸಕ್ಕೆ ಅನುಮತಿ ನೀಡದ್ದು ಯಾಕೆ…?

ಅನಾರೋಗ್ಯದಲ್ಲಿರುವ ಸಿಬ್ಬಂದಿಯನ್ನ ರಿಲೀವ್ ಮಾಡಿದ ಕಾರಣಾದ್ರೂ ಏನು…?

ತುರ್ತು ಚಿಕಿತ್ಸೆ ಪಡೆಯುತ್ತಿದ್ದರೂ ಆಂಬ್ಯುಲೆನ್ಸ್ ನಲ್ಲಿ ಬಂದು ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳುವ ದರ್ದು ಏನಿತ್ತು…?

ಈ ಎಲ್ಲಾ ಪ್ರಶ್ನೆಗಳೂ ಸಾರ್ವಜನಿಕರನ್ನ ಕಾಡುತ್ತಿದೆ.ಸರ್ಕಾರಿ ಉದ್ಯೋಗಿಗಳ ಸ್ಥಿತಿ ಎಲ್ಲಿಗೆ ಬಂತು ಎಂಬ ಪ್ರಶ್ನೆಯೂ ಉದ್ಭವಿಸಿದೆ.

ಸಧ್ಯ ಇಂತಹ ಸ್ಥಿತಿಯಲ್ಲಿ ಎ.ಡಿ.ಎಲ್.ಆರ್.ಚಿಕ್ಕಣ್ಣ ಹಾಗೂ ಸರ್ವೆ ಸೂಪರಿಡೆಂಟ್ ಸಿದ್ದಯ್ಯ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ನಿರಾಕರಿಸಿದ್ದಾರೆ.ಬಂದ ದಾರಿಗೆ ಸಕವಿಲ್ಲವೆಂಬಂತೆ ಸರ್ವೆಯರ್ ದೇವರಾಜ್ ಹಿಂದಿರುಗಿದ್ದಾರೆ.ಈ ವಿಡಿಯೋ ವೈರಲ್ ಆಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *