ಉಪನ್ಯಾಸಕನ ಪರಿಸರ ಪ್ರೇಮ…ಸಸ್ಯಕಾಶಿಯಾದ ಕಾಲೇಜು ಆವರಣ…

ಉಪನ್ಯಾಸಕನ ಪರಿಸರ ಪ್ರೇಮ…ಸಸ್ಯಕಾಶಿಯಾದ ಕಾಲೇಜು ಆವರಣ…

ಉಪನ್ಯಾಸಕನ ಪರಿಸರ ಪ್ರೇಮ…ಸಸ್ಯಕಾಶಿಯಾದ ಕಾಲೇಜು ಆವರಣ…

ನಂಜನಗೂಡು,ಸೆ7,Tv10 ಕನ್ನಡ

ವಿಧ್ಯಾರ್ಥಿಗಳ ಪ್ರಗತಿಗೆ ಕಾಲೇಜಿನ ಉತ್ತಮ ವಾತಾವರಣ ಸಹಕಾರಿ ಎಂಬ ಮಾತಿಗೆ ಸಾಕ್ಷಿಯಾಗಿದೆ ನಂಜನಗೂಡು ತಾಲೂಕಿನ ದೊಡ್ಡಕವಲಂದೆಯ ಸರ್ಕಾರಿ ಪದವಿ ಪೂರ್ವ ಕಾಲೇಜು.ಬರಡು ಬಯಲಾಗಿದ್ದ ಕಾಲೇಜಿನ ಆವರಣವೀಗ ಸಸ್ಯಕಾಶಿಯಾಗಿದೆ.ಕಾಲೇಜು ಉಪನ್ಯಾಸ ಹಾಗೂ ಎನ್.ಎಸ್.ಎಸ್.ಅಧಿಕಾರಿಯೂ ಆಗಿರುವ ವೆಂಕಟರಮಣ ಮತ್ತು ವಿಧ್ಯಾರ್ಥಿಗಳು,ಪ್ರಾಶುಪಾಲರು,ಸಹದ್ಯೋಗಿಗಳ ಸಹಕಾರದಿಂದ ಬರಡು ನೆಲವೀಗ ಕೆಲವೇ ವರ್ಷಗಳಲ್ಲಿ ಹಸಿರಿನಿಂದ ಕಂಗೊಳಿಸುತ್ತಿದೆ.ಎಲ್ಲರ ಪರಿಶ್ರಮದಿಂದಾಗಿ ಕಾಲೇಜಿನ ಆವರಣ ಮಲೆನಾಡಿನ ವಾತಾವರಣವನ್ನ ಸೃಷ್ಟಿಸಿದೆ.

ಕಾಲೇಜಿನ ವಿಧ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳ ಬೆಳವಣಿಗೆಗಾಗಿ ಮೀಸಲಾಗಿದ್ದ ಜಾಗ ಬರಡಾಗಿತ್ತು.ಆಟದ ಮೈದಾನ ಹೊರತುಪಡಿಸಿ ಉಳಿದ ಜಾಗವನ್ನ ಹಸಿರೀಕರಣ ಮಾಡಲು ಉಪನ್ಯಾಸಕರಾದ ವೆಂಕಟರಮಣ ನಿರ್ಧರಿಸಿ ಕಾರ್ಯೋನ್ಮುಖರಾದರು.ಈ ವಿಚಾರದಲ್ಲಿ ಸಹದ್ಯೋಗಿಗಳು ಅಪಹಾಸ್ಯ ಮಾಡಿದ್ದೂ ಉಂಟು.ಇದ್ಯಾವುದನ್ನ ಲೆಕ್ಕಿಸದ ವೆಂಕಟರಮಣ ವಿಧ್ಯಾರ್ಥಿಗಳ ನೆರವು ಹಾಗೂ ಪ್ರಾಂಶುಪಾಲ ಸಿದ್ದರಾಜು ಮಾರ್ಗದರ್ಶನ ಪಡೆದು ಕಾಲೇಜು ಆವರಣವನ್ನ ಹಸಿರುವಲಯವಾಗಿ ಪರಿವರ್ತಿಸಲು ಪಣತೊಟ್ಟರು.ಕೆಲವು ವರ್ಷಗಳ ಕಠಿಣ ಪರಿಶ್ರಮ ಇದೀಗ ಕಾಲೇಜು ಆವರಣ ಹಸಿರಿನಿಂದ ಕಂಗೊಳಿಸುತ್ತಿದೆ.ಕನ್ನಡ ಪಾಠದಲ್ಲಿ ವಿಧ್ಯಾರ್ಥಿಗಳ ಮನಸ್ಸನ್ನ ಗೆದ್ದ ಉಪನ್ಯಾಸಕ ವೆಂಕಟರಮಣ ಕಾಲೇಜು ಆವರಣದಲ್ಲಿ ಉತ್ತಮ ವಾತಾವರಣ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.ಈ ಬೆಳವಣಿಗೆಗೆ ತಮ್ಮ ಸ್ವಂತ ಹಣ ವಿನಯೋಗಿಸಿದ್ದಾರೆ.ಕಾಲೇಜಿನಿಂದಾಗಲಿ ದಾನಿಗಳಿಂದಾಗಲಿ ನಯಾಪೈಸೆ ನೆರವು ಪಡೆದಿಲ್ಲ.ಸ್ವಂತ ಖರ್ಚಿನಲ್ಲಿ ಸುಮಾರು ಎರಡು ಎಕ್ರೆ ಬರಡು ನೆಲವನ್ನ ಸಸ್ಯಕಾಶಿಯನ್ನಾಗಿ ಪರಿವರ್ತಿಸಿದ್ದಾರೆ.ಸುಮಾರು 15 ವರ್ಷಗಳ ಪರಿಶ್ರಮ ಫಲ ನೀಡಿದೆ. ಹಸಿರುವಲಯವಾಗಿರುವ ಕಾಲೇಜು ಆವರಣವನ್ನ ವಿಧ್ಯಾರ್ಥಿಗಳು ಖುಷಿಯಿಂದ ತಮ್ಮ ಪಠ್ಯೇತರ ಚಟುವಟಿಕೆಗಳಿಗೂ ಬಳಸಿಕೊಳ್ಳುತ್ತಿದ್ದಾರೆ.ಕನ್ನಡ ಉಪನ್ಯಾಸಕ ವೆಂಕಟರಮಣ ರವರ ಪ್ರಕೃತಿ ಪ್ರೇಮಕ್ಕೆ ಇಡೀ ಕಾಲೇಜು ಫಿದಾ ಆಗಿದೆ.ದೊಡ್ಡಕವಲಂದೆ ಜನರೂ ಸಹ ಪ್ರಶಂಸೆ ವ್ಯಕ್ತಪಡಿಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *