ಉಪನ್ಯಾಸಕನ ಪರಿಸರ ಪ್ರೇಮ…ಸಸ್ಯಕಾಶಿಯಾದ ಕಾಲೇಜು ಆವರಣ…

ಉಪನ್ಯಾಸಕನ ಪರಿಸರ ಪ್ರೇಮ…ಸಸ್ಯಕಾಶಿಯಾದ ಕಾಲೇಜು ಆವರಣ…

ಉಪನ್ಯಾಸಕನ ಪರಿಸರ ಪ್ರೇಮ…ಸಸ್ಯಕಾಶಿಯಾದ ಕಾಲೇಜು ಆವರಣ…

ನಂಜನಗೂಡು,ಸೆ7,Tv10 ಕನ್ನಡ

ವಿಧ್ಯಾರ್ಥಿಗಳ ಪ್ರಗತಿಗೆ ಕಾಲೇಜಿನ ಉತ್ತಮ ವಾತಾವರಣ ಸಹಕಾರಿ ಎಂಬ ಮಾತಿಗೆ ಸಾಕ್ಷಿಯಾಗಿದೆ ನಂಜನಗೂಡು ತಾಲೂಕಿನ ದೊಡ್ಡಕವಲಂದೆಯ ಸರ್ಕಾರಿ ಪದವಿ ಪೂರ್ವ ಕಾಲೇಜು.ಬರಡು ಬಯಲಾಗಿದ್ದ ಕಾಲೇಜಿನ ಆವರಣವೀಗ ಸಸ್ಯಕಾಶಿಯಾಗಿದೆ.ಕಾಲೇಜು ಉಪನ್ಯಾಸ ಹಾಗೂ ಎನ್.ಎಸ್.ಎಸ್.ಅಧಿಕಾರಿಯೂ ಆಗಿರುವ ವೆಂಕಟರಮಣ ಮತ್ತು ವಿಧ್ಯಾರ್ಥಿಗಳು,ಪ್ರಾಶುಪಾಲರು,ಸಹದ್ಯೋಗಿಗಳ ಸಹಕಾರದಿಂದ ಬರಡು ನೆಲವೀಗ ಕೆಲವೇ ವರ್ಷಗಳಲ್ಲಿ ಹಸಿರಿನಿಂದ ಕಂಗೊಳಿಸುತ್ತಿದೆ.ಎಲ್ಲರ ಪರಿಶ್ರಮದಿಂದಾಗಿ ಕಾಲೇಜಿನ ಆವರಣ ಮಲೆನಾಡಿನ ವಾತಾವರಣವನ್ನ ಸೃಷ್ಟಿಸಿದೆ.

ಕಾಲೇಜಿನ ವಿಧ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳ ಬೆಳವಣಿಗೆಗಾಗಿ ಮೀಸಲಾಗಿದ್ದ ಜಾಗ ಬರಡಾಗಿತ್ತು.ಆಟದ ಮೈದಾನ ಹೊರತುಪಡಿಸಿ ಉಳಿದ ಜಾಗವನ್ನ ಹಸಿರೀಕರಣ ಮಾಡಲು ಉಪನ್ಯಾಸಕರಾದ ವೆಂಕಟರಮಣ ನಿರ್ಧರಿಸಿ ಕಾರ್ಯೋನ್ಮುಖರಾದರು.ಈ ವಿಚಾರದಲ್ಲಿ ಸಹದ್ಯೋಗಿಗಳು ಅಪಹಾಸ್ಯ ಮಾಡಿದ್ದೂ ಉಂಟು.ಇದ್ಯಾವುದನ್ನ ಲೆಕ್ಕಿಸದ ವೆಂಕಟರಮಣ ವಿಧ್ಯಾರ್ಥಿಗಳ ನೆರವು ಹಾಗೂ ಪ್ರಾಂಶುಪಾಲ ಸಿದ್ದರಾಜು ಮಾರ್ಗದರ್ಶನ ಪಡೆದು ಕಾಲೇಜು ಆವರಣವನ್ನ ಹಸಿರುವಲಯವಾಗಿ ಪರಿವರ್ತಿಸಲು ಪಣತೊಟ್ಟರು.ಕೆಲವು ವರ್ಷಗಳ ಕಠಿಣ ಪರಿಶ್ರಮ ಇದೀಗ ಕಾಲೇಜು ಆವರಣ ಹಸಿರಿನಿಂದ ಕಂಗೊಳಿಸುತ್ತಿದೆ.ಕನ್ನಡ ಪಾಠದಲ್ಲಿ ವಿಧ್ಯಾರ್ಥಿಗಳ ಮನಸ್ಸನ್ನ ಗೆದ್ದ ಉಪನ್ಯಾಸಕ ವೆಂಕಟರಮಣ ಕಾಲೇಜು ಆವರಣದಲ್ಲಿ ಉತ್ತಮ ವಾತಾವರಣ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.ಈ ಬೆಳವಣಿಗೆಗೆ ತಮ್ಮ ಸ್ವಂತ ಹಣ ವಿನಯೋಗಿಸಿದ್ದಾರೆ.ಕಾಲೇಜಿನಿಂದಾಗಲಿ ದಾನಿಗಳಿಂದಾಗಲಿ ನಯಾಪೈಸೆ ನೆರವು ಪಡೆದಿಲ್ಲ.ಸ್ವಂತ ಖರ್ಚಿನಲ್ಲಿ ಸುಮಾರು ಎರಡು ಎಕ್ರೆ ಬರಡು ನೆಲವನ್ನ ಸಸ್ಯಕಾಶಿಯನ್ನಾಗಿ ಪರಿವರ್ತಿಸಿದ್ದಾರೆ.ಸುಮಾರು 15 ವರ್ಷಗಳ ಪರಿಶ್ರಮ ಫಲ ನೀಡಿದೆ. ಹಸಿರುವಲಯವಾಗಿರುವ ಕಾಲೇಜು ಆವರಣವನ್ನ ವಿಧ್ಯಾರ್ಥಿಗಳು ಖುಷಿಯಿಂದ ತಮ್ಮ ಪಠ್ಯೇತರ ಚಟುವಟಿಕೆಗಳಿಗೂ ಬಳಸಿಕೊಳ್ಳುತ್ತಿದ್ದಾರೆ.ಕನ್ನಡ ಉಪನ್ಯಾಸಕ ವೆಂಕಟರಮಣ ರವರ ಪ್ರಕೃತಿ ಪ್ರೇಮಕ್ಕೆ ಇಡೀ ಕಾಲೇಜು ಫಿದಾ ಆಗಿದೆ.ದೊಡ್ಡಕವಲಂದೆ ಜನರೂ ಸಹ ಪ್ರಶಂಸೆ ವ್ಯಕ್ತಪಡಿಸಿದ್ದಾರೆ…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *