ಉಪನ್ಯಾಸಕನ ಪರಿಸರ ಪ್ರೇಮ…ಸಸ್ಯಕಾಶಿಯಾದ ಕಾಲೇಜು ಆವರಣ…

ಉಪನ್ಯಾಸಕನ ಪರಿಸರ ಪ್ರೇಮ…ಸಸ್ಯಕಾಶಿಯಾದ ಕಾಲೇಜು ಆವರಣ…

ಉಪನ್ಯಾಸಕನ ಪರಿಸರ ಪ್ರೇಮ…ಸಸ್ಯಕಾಶಿಯಾದ ಕಾಲೇಜು ಆವರಣ…

ನಂಜನಗೂಡು,ಸೆ7,Tv10 ಕನ್ನಡ

ವಿಧ್ಯಾರ್ಥಿಗಳ ಪ್ರಗತಿಗೆ ಕಾಲೇಜಿನ ಉತ್ತಮ ವಾತಾವರಣ ಸಹಕಾರಿ ಎಂಬ ಮಾತಿಗೆ ಸಾಕ್ಷಿಯಾಗಿದೆ ನಂಜನಗೂಡು ತಾಲೂಕಿನ ದೊಡ್ಡಕವಲಂದೆಯ ಸರ್ಕಾರಿ ಪದವಿ ಪೂರ್ವ ಕಾಲೇಜು.ಬರಡು ಬಯಲಾಗಿದ್ದ ಕಾಲೇಜಿನ ಆವರಣವೀಗ ಸಸ್ಯಕಾಶಿಯಾಗಿದೆ.ಕಾಲೇಜು ಉಪನ್ಯಾಸ ಹಾಗೂ ಎನ್.ಎಸ್.ಎಸ್.ಅಧಿಕಾರಿಯೂ ಆಗಿರುವ ವೆಂಕಟರಮಣ ಮತ್ತು ವಿಧ್ಯಾರ್ಥಿಗಳು,ಪ್ರಾಶುಪಾಲರು,ಸಹದ್ಯೋಗಿಗಳ ಸಹಕಾರದಿಂದ ಬರಡು ನೆಲವೀಗ ಕೆಲವೇ ವರ್ಷಗಳಲ್ಲಿ ಹಸಿರಿನಿಂದ ಕಂಗೊಳಿಸುತ್ತಿದೆ.ಎಲ್ಲರ ಪರಿಶ್ರಮದಿಂದಾಗಿ ಕಾಲೇಜಿನ ಆವರಣ ಮಲೆನಾಡಿನ ವಾತಾವರಣವನ್ನ ಸೃಷ್ಟಿಸಿದೆ.

ಕಾಲೇಜಿನ ವಿಧ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳ ಬೆಳವಣಿಗೆಗಾಗಿ ಮೀಸಲಾಗಿದ್ದ ಜಾಗ ಬರಡಾಗಿತ್ತು.ಆಟದ ಮೈದಾನ ಹೊರತುಪಡಿಸಿ ಉಳಿದ ಜಾಗವನ್ನ ಹಸಿರೀಕರಣ ಮಾಡಲು ಉಪನ್ಯಾಸಕರಾದ ವೆಂಕಟರಮಣ ನಿರ್ಧರಿಸಿ ಕಾರ್ಯೋನ್ಮುಖರಾದರು.ಈ ವಿಚಾರದಲ್ಲಿ ಸಹದ್ಯೋಗಿಗಳು ಅಪಹಾಸ್ಯ ಮಾಡಿದ್ದೂ ಉಂಟು.ಇದ್ಯಾವುದನ್ನ ಲೆಕ್ಕಿಸದ ವೆಂಕಟರಮಣ ವಿಧ್ಯಾರ್ಥಿಗಳ ನೆರವು ಹಾಗೂ ಪ್ರಾಂಶುಪಾಲ ಸಿದ್ದರಾಜು ಮಾರ್ಗದರ್ಶನ ಪಡೆದು ಕಾಲೇಜು ಆವರಣವನ್ನ ಹಸಿರುವಲಯವಾಗಿ ಪರಿವರ್ತಿಸಲು ಪಣತೊಟ್ಟರು.ಕೆಲವು ವರ್ಷಗಳ ಕಠಿಣ ಪರಿಶ್ರಮ ಇದೀಗ ಕಾಲೇಜು ಆವರಣ ಹಸಿರಿನಿಂದ ಕಂಗೊಳಿಸುತ್ತಿದೆ.ಕನ್ನಡ ಪಾಠದಲ್ಲಿ ವಿಧ್ಯಾರ್ಥಿಗಳ ಮನಸ್ಸನ್ನ ಗೆದ್ದ ಉಪನ್ಯಾಸಕ ವೆಂಕಟರಮಣ ಕಾಲೇಜು ಆವರಣದಲ್ಲಿ ಉತ್ತಮ ವಾತಾವರಣ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.ಈ ಬೆಳವಣಿಗೆಗೆ ತಮ್ಮ ಸ್ವಂತ ಹಣ ವಿನಯೋಗಿಸಿದ್ದಾರೆ.ಕಾಲೇಜಿನಿಂದಾಗಲಿ ದಾನಿಗಳಿಂದಾಗಲಿ ನಯಾಪೈಸೆ ನೆರವು ಪಡೆದಿಲ್ಲ.ಸ್ವಂತ ಖರ್ಚಿನಲ್ಲಿ ಸುಮಾರು ಎರಡು ಎಕ್ರೆ ಬರಡು ನೆಲವನ್ನ ಸಸ್ಯಕಾಶಿಯನ್ನಾಗಿ ಪರಿವರ್ತಿಸಿದ್ದಾರೆ.ಸುಮಾರು 15 ವರ್ಷಗಳ ಪರಿಶ್ರಮ ಫಲ ನೀಡಿದೆ. ಹಸಿರುವಲಯವಾಗಿರುವ ಕಾಲೇಜು ಆವರಣವನ್ನ ವಿಧ್ಯಾರ್ಥಿಗಳು ಖುಷಿಯಿಂದ ತಮ್ಮ ಪಠ್ಯೇತರ ಚಟುವಟಿಕೆಗಳಿಗೂ ಬಳಸಿಕೊಳ್ಳುತ್ತಿದ್ದಾರೆ.ಕನ್ನಡ ಉಪನ್ಯಾಸಕ ವೆಂಕಟರಮಣ ರವರ ಪ್ರಕೃತಿ ಪ್ರೇಮಕ್ಕೆ ಇಡೀ ಕಾಲೇಜು ಫಿದಾ ಆಗಿದೆ.ದೊಡ್ಡಕವಲಂದೆ ಜನರೂ ಸಹ ಪ್ರಶಂಸೆ ವ್ಯಕ್ತಪಡಿಸಿದ್ದಾರೆ…

Spread the love

Related post

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…

Leave a Reply

Your email address will not be published. Required fields are marked *