ಧರ್ಮದ ಉಳಿವಿಗೆ ಭಗವಂತನ ಅವತಾರ ನಿಶ್ಚಿತ…ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಮೈಸೂರು,ಸೆ8,Tv10 ಕನ್ನಡ

ದುಷ್ಟರ ಶಿಕ್ಷೆ, ಶಿಷ್ಟರ ರಕ್ಷಣೆಗೆ ಯುಗಯುಗಗಳಲ್ಲೂ ಅವತಾರ ಎತ್ತಿ ಬರುತ್ತೇನೆ ಎಂದು ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿರುವ ಮಾತು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದೆ. ಧರ್ಮದ ಉಳಿವಿಗೆ ಭಗವಂತನ ಅವತಾರ ಬೇರೆ ಬೇರೆ ರೂಪದಲ್ಲಿ ಆಗುತ್ತಲೇ ಇರುತ್ತದೆ ಎಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕೆ ಆರ್ ಮೊಹಲ್ಲಾದ ನಾಲಾ ಬೀದಿಯಲ್ಲಿರುವ ವೈಷ್ಣವಿ ಸೇವಾ ಪರಿಷತ್ ಹಮ್ಮಿಕೊಂಡಿದ್ದ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ದೇವರಿಗೆ ಸಮರ್ಪಿಸಲು ವಿವಿಧ ಭಕ್ಷ್ಯಗಳನ್ನು ಸಿದ್ಧಪಡಿಸಲಾಯಿತು.ವಿಶೇಷ ಪೂಜೆ ನಂತರ ಗೋಪೂಜೆ ಸಲ್ಲಿಸಿ ಮಾತನಾಡಿ ಶ್ರೀಗಳು
ಯುವಕರು ಧರ್ಮದ ಹಾದಿಯಲ್ಲಿ ನಡೆಯಬೇಕು. ಧರ್ಮಕ್ಕೆ ಆಪತ್ತು ಎದುರಾದಲ್ಲಿ ರಕ್ಷಣೆಗೂ ಸಿದ್ಧರಿರಬೇಕು ಎಂದು ಕರೆ ನೀಡಿದರು.
ಶ್ರೀಕೃಷ್ಣ ಆರಾಧ್ಯ ದೈವ. ಪಶುಪಾಲನೆ ವೃತ್ತಿ ಮಾಡುವ ಗೊಲ್ಲ ಜನಾಂಗದವರಿಗೆ ಗೋಪಾಲಕ ಎಂದು ಖ್ಯಾತಿ ಪಡೆದಿರುವ ಕೃಷ್ಣನೇ ಮುಖ್ಯದೇವರು. ಕೃಷ್ಣನಷ್ಟು ಕಷ್ಟಗಳನ್ನು ಎದುರಿಸಿದವರು ಮತ್ತೊಬ್ಬರು ಇರಲಾರರು. ತನಗೆ ಎದುರಾದ ಎಲ್ಲ ಕಷ್ಟಗಳನ್ನು ನಗುತ್ತಲೇ ಎದುರಿಸಿ ಜಗತ್ತಿಗೆ ಮಾದರಿಯಾದ ದೈವ. ಬೇರೆ ಧರ್ಮಗಳನ್ನು ಗೌರವಿಸೋಣ. ನಮ್ಮ ಧರ್ಮದ ಉನ್ನತಿಗೆ ಎಲ್ಲರೂ ಶ್ರಮಿಸೋಣ ಎಂದು ಹೇಳಿದರು.

ಈ ವೇಳೆ ವೆಂಗಿಪುರ ಮಠದ ಶ್ರೀ ಇಳೈ ಆಳ್ವಾರ್ ಸ್ವಾಮೀಜಿ, ವೈಷ್ಣವಿ ಸೇವಾ ಪರಿಷತ್ ಅಧ್ಯಕ್ಷರಾದ ಚಕ್ರಪಾಣಿ, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಪುಷ್ಪ ಅಯ್ಯಂಗಾರ್ , ವೈದೇಹಿ, ಸುಚಿಂದ್ರ, ಚಿತ್ರ, ನಾಗಶ್ರೀ, ವಿದ್ಯಾ, ಮುರುಳಿಧರ್ , ಗೀತ, ಜಗದೀಶ್, ಮಧುಸೂದನ್, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *