ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ…ಇಬ್ಬರು ಸುಲಿಗೆಕೋರರ ಬಂಧನ…10 ಪ್ರಕರಣಗಳು ಪತ್ತೆ…

  • Crime
  • September 8, 2023
  • No Comment
  • 217

ಮೈಸೂರು,ಸೆ8,Tv10 ಕನ್ನಡ

ಮೈಸೂರು ದಕ್ಷಿಣ ಗ್ರಾಮಾಂತರ ಠಾಣಾ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಇಬ್ಬರು ಸುಲಿಗೆಕೋರರ ಬಂಧನವಾಗಿದೆ.ಬಂಧಿತರಿಂದ ಆಟೋ ಹಾಗೂ ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಆರೋಪಿಗಳ ಬಂಧನದಿಂದ ವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 10 ಪ್ರಕರಣಗಳು ಪತ್ತೆಯಾಗಿದೆ.

ಕೆಂಪಿ ಸಿದ್ದನಹುಂಡಿ ಗ್ರಾಮದ ಉಮೇಶ್(23) ಹಾಗೂ ಮಂಚಳ್ಳಿಹುಂಡಿಯ ಶಿವಾನಂದ(21) ಬಂಧಿತರು.6 ಆರೋಪಿಗಳ ತಂಡ ಕೃತ್ಯವೆಸಗಿದ್ದು ಈ ಪೈಕಿ ಇಬ್ಬರನ್ನ ಬಂಧಿಸಲಾಗಿದೆ.ತಲೆ ಮರೆಸಿಕೊಂಡ ಉಳಿದ ನಾಲ್ವರ ಆರೋಪಿಗಳ ಬಂಧನಕ್ಕಾಗಿ ಜಾಲ ಬೀಸಲಾಗಿದೆ.ಆಟೋ ಬಾಡಿಗೆ ಪಡೆದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಾಲಕನಿಗೆ ಹಲ್ಲೆ ನಡೆಸಿ ಕದ್ದೊಯ್ತುತ್ತಿದ್ದ ತಂಡದ ಹೆಡೆಮುರಿಯನ್ನ ಗ್ರಾಮಾಂತರ ಠಾಣೆ ಪೊಲೀಸರು ಕಟ್ಟಿಹಾಕಿದ್ದಾರೆ.ಆರೋಪಿಗಳು 5 ಸುಲಿಗೆ,2 ದೇವಸ್ಥಾನ ಕಳುವು ಹಾಗೂ ಮೂರು ಬೈಕ್ ಗಳನ್ನ ಕಳುವು ಮಾಡಿರುವುದು ತನಿಖೆಯಲ್ಲಿ ತಿಳಿದುಬಂದಿದೆ.ಬಿಳಿಗೆರೆ ಪೊಲೀಸ್ ಠಾಣೆಯ 1 ಪ್ರಕರಣ,ವರುಣ ಪೊಲೀಸ್ ಠಾಣೆಯ 2 ಪ್ರಕರಣ,ನಂಜನಗೂಡು ಗ್ರಾಮಾಂತರ ಠಾಣೆಯ 3 ಪ್ರಕರಣ,ಜಯಪುರ ಠಾಣೆಯ 1 ಪ್ರಕರಣ,ಹುಲ್ಲಹಳ್ಳಿ ಠಾಣೆಯ 1 ಹಾಗೂ ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆಯ 2 ಪ್ರಕರಣಗಳನ್ನ ಭೇದಿಸಿದಂತಾಗಿದೆ

ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್,ಅಡಿಷನಲ್ ಎಸ್ಪಿ ನಂದಿನಿ,ಡಿವೈಎಸ್ಪಿ ಡಾ.ಸುಮಿತ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಶೇಖರ್,ಪಿಎಸ್ಸೈ ಗಳಾದ ಚಂದ್ರ,ಬಸಪ್ಪ ಕೊರವಿ ಹಾಗೂ ಸಿಬ್ಬಂದಿಗಳಾದ ಮಹೇಶ್,ಪ್ರಸನ್ನ ಕುಮಾರ್,ಸುನಿಲ್ ಕುಮಾರ್,ಪವನ್ ಕುಮಾರ್,ವಿಶ್ವನಾಥ್,ಮಹಿಳಾ ಸಿಬ್ಬಂದಿ ಗೀತಾ,ಸಂಜಯ್ ಹಾಗೂ ಕೃಷ್ಣಮೂರ್ತಿ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *