ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ…ಇಬ್ಬರು ಸುಲಿಗೆಕೋರರ ಬಂಧನ…10 ಪ್ರಕರಣಗಳು ಪತ್ತೆ…

  • Crime
  • September 8, 2023
  • No Comment
  • 215

ಮೈಸೂರು,ಸೆ8,Tv10 ಕನ್ನಡ

ಮೈಸೂರು ದಕ್ಷಿಣ ಗ್ರಾಮಾಂತರ ಠಾಣಾ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಇಬ್ಬರು ಸುಲಿಗೆಕೋರರ ಬಂಧನವಾಗಿದೆ.ಬಂಧಿತರಿಂದ ಆಟೋ ಹಾಗೂ ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಆರೋಪಿಗಳ ಬಂಧನದಿಂದ ವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 10 ಪ್ರಕರಣಗಳು ಪತ್ತೆಯಾಗಿದೆ.

ಕೆಂಪಿ ಸಿದ್ದನಹುಂಡಿ ಗ್ರಾಮದ ಉಮೇಶ್(23) ಹಾಗೂ ಮಂಚಳ್ಳಿಹುಂಡಿಯ ಶಿವಾನಂದ(21) ಬಂಧಿತರು.6 ಆರೋಪಿಗಳ ತಂಡ ಕೃತ್ಯವೆಸಗಿದ್ದು ಈ ಪೈಕಿ ಇಬ್ಬರನ್ನ ಬಂಧಿಸಲಾಗಿದೆ.ತಲೆ ಮರೆಸಿಕೊಂಡ ಉಳಿದ ನಾಲ್ವರ ಆರೋಪಿಗಳ ಬಂಧನಕ್ಕಾಗಿ ಜಾಲ ಬೀಸಲಾಗಿದೆ.ಆಟೋ ಬಾಡಿಗೆ ಪಡೆದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಾಲಕನಿಗೆ ಹಲ್ಲೆ ನಡೆಸಿ ಕದ್ದೊಯ್ತುತ್ತಿದ್ದ ತಂಡದ ಹೆಡೆಮುರಿಯನ್ನ ಗ್ರಾಮಾಂತರ ಠಾಣೆ ಪೊಲೀಸರು ಕಟ್ಟಿಹಾಕಿದ್ದಾರೆ.ಆರೋಪಿಗಳು 5 ಸುಲಿಗೆ,2 ದೇವಸ್ಥಾನ ಕಳುವು ಹಾಗೂ ಮೂರು ಬೈಕ್ ಗಳನ್ನ ಕಳುವು ಮಾಡಿರುವುದು ತನಿಖೆಯಲ್ಲಿ ತಿಳಿದುಬಂದಿದೆ.ಬಿಳಿಗೆರೆ ಪೊಲೀಸ್ ಠಾಣೆಯ 1 ಪ್ರಕರಣ,ವರುಣ ಪೊಲೀಸ್ ಠಾಣೆಯ 2 ಪ್ರಕರಣ,ನಂಜನಗೂಡು ಗ್ರಾಮಾಂತರ ಠಾಣೆಯ 3 ಪ್ರಕರಣ,ಜಯಪುರ ಠಾಣೆಯ 1 ಪ್ರಕರಣ,ಹುಲ್ಲಹಳ್ಳಿ ಠಾಣೆಯ 1 ಹಾಗೂ ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆಯ 2 ಪ್ರಕರಣಗಳನ್ನ ಭೇದಿಸಿದಂತಾಗಿದೆ

ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್,ಅಡಿಷನಲ್ ಎಸ್ಪಿ ನಂದಿನಿ,ಡಿವೈಎಸ್ಪಿ ಡಾ.ಸುಮಿತ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಶೇಖರ್,ಪಿಎಸ್ಸೈ ಗಳಾದ ಚಂದ್ರ,ಬಸಪ್ಪ ಕೊರವಿ ಹಾಗೂ ಸಿಬ್ಬಂದಿಗಳಾದ ಮಹೇಶ್,ಪ್ರಸನ್ನ ಕುಮಾರ್,ಸುನಿಲ್ ಕುಮಾರ್,ಪವನ್ ಕುಮಾರ್,ವಿಶ್ವನಾಥ್,ಮಹಿಳಾ ಸಿಬ್ಬಂದಿ ಗೀತಾ,ಸಂಜಯ್ ಹಾಗೂ ಕೃಷ್ಣಮೂರ್ತಿ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *