ಅಪ್ರಾಪ್ತಳನ್ನ ಮದುವೆಯಾದ ಗ್ರಾ.ಪಂ.ಅಧ್ಯಕ್ಷ…ಆಧಾರ್ ಕಾರ್ಡ್ ತಿದ್ದುಪಡಿ ಆರೋಪ…ಗ್ರಾಮಸ್ಥರಿಂದಲೇ ದೂರು…

ಅಪ್ರಾಪ್ತಳನ್ನ ಮದುವೆಯಾದ ಗ್ರಾ.ಪಂ.ಅಧ್ಯಕ್ಷ…ಆಧಾರ್ ಕಾರ್ಡ್ ತಿದ್ದುಪಡಿ ಆರೋಪ…ಗ್ರಾಮಸ್ಥರಿಂದಲೇ ದೂರು…

  • Crime
  • September 12, 2023
  • No Comment
  • 265

ನಂಜನಗೂಡು,ಸೆ12,Tv10 ಕನ್ನಡ

ಆಧಾರ್ ಕಾರ್ಡ್ ತಿದ್ದುಪಡಿ ಮಾಡಿದ ಗ್ರಾಮ ಪಂಚಾಯ್ತಿ ಅಧ್ಯಕ್ಷ ಅಪ್ರಾಪ್ತಳನ್ನ ವಿವಾಹವಾದ ಆರೋಪ ನಂಜನಗೂಡು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.ಶಾಲಾ ದಾಖಲಾತಿಗಳನ್ನ ಒದಗಿಸಿದ ಗ್ರಾಮಸ್ಥರು ಅಪ್ರಾಪ್ತಳನ್ನ ವಿವಾಹವಾದ ಗ್ರಾಮ ಪಂಚಾಯ್ತಿ ಅಧ್ಯಕ್ಷನ ವಿರುದ್ದ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದಾರೆ.ಹಾಡ್ಯ ಗ್ರಾಮ ಪಂಚಾಯ್ತು ಅಧ್ಯಕ್ಷ ಹರೀಶ್ ಕುಮಾರ್ ಮೇಲೆ ಇಂತಹ ಆರೋಪ ಕೇಳಿ ಬಂದಿದೆ.ಫೆಬ್ರವರಿ 2023 ರಲ್ಲಿ ಅರಿಯೂರು ಗ್ರಾಮದ ಅಪ್ರಾಪ್ತ ಬಾಲಕಿಯ ಜೊತೆ ನಂಜನಗೂಡಿನ ಕಲ್ಯಾಣಮಂಟಪದಲ್ಲಿ ಅದ್ದೂರಿ ವಿವಾಹ ನಡೆದಿತ್ತು.ಶಾಲಾ ದಾಖಲಾತಿಗಳ ಪ್ರಕಾರ ಮಧುಮಗಳು ಇನ್ನೂ ಅಪ್ರಾಪ್ತೆ.ಆದರೆ ಆಧಾರ್ ಕಾರ್ಡ್ ನಲ್ಲಿ ವಯಸ್ಸನ್ನ ತಿದ್ದುಪಡಿ ಮಾಡಿ ವಯಸ್ಕಳಂತೆ ತಿದ್ದುಪಡಿ ಮಾಡಿದ್ದಾರೆಂದು ಅರಿಯೂರು ಗ್ರಾಮಸ್ಥರೇ ದೂರು ನೀಡಿದ್ದಾರೆ.ಶಾಲಾ ದಾಖಲಾತಿಗಳನ್ನ ಒದಗಿಸಿರುವ ಗ್ರಾಮಸ್ಥರು ಹರೀಶ್ ಕುಮಾರ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *