ULC ಜಮೀನು ಒತ್ತುವರಿದಾರರ ವಿರುದ್ದ ಜಿಲ್ಲಾಧಿಕಾರಿ ಸಮರ…20 ಕೋಟಿ ಮೌಲ್ಯದ ಆಸ್ತಿ ವಶಕ್ಕೆ…ಡಾ.ಕೆ.ವಿ.ರಾಜೇಂದ್ರ ಸುಗ್ರೀವಾಜ್ಞೆ ಪಾಲಿಸಿದ ಎಸಿ ಮತ್ತು ತಹಸೀಲ್ದಾರ್…

ULC ಜಮೀನು ಒತ್ತುವರಿದಾರರ ವಿರುದ್ದ ಜಿಲ್ಲಾಧಿಕಾರಿ ಸಮರ…20 ಕೋಟಿ ಮೌಲ್ಯದ ಆಸ್ತಿ ವಶಕ್ಕೆ…ಡಾ.ಕೆ.ವಿ.ರಾಜೇಂದ್ರ ಸುಗ್ರೀವಾಜ್ಞೆ ಪಾಲಿಸಿದ ಎಸಿ ಮತ್ತು ತಹಸೀಲ್ದಾರ್…

ULC ಜಮೀನು ಒತ್ತುವರಿದಾರರ ವಿರುದ್ದ ಜಿಲ್ಲಾಧಿಕಾರಿ ಸಮರ…20 ಕೋಟಿ ಮೌಲ್ಯದ ಆಸ್ತಿ ವಶಕ್ಕೆ…ಡಾ.ಕೆ.ವಿ.ರಾಜೇಂದ್ರ ಸುಗ್ರೀವಾಜ್ಞೆ ಪಾಲಿಸಿದ ಎಸಿ ಮತ್ತು ತಹಸೀಲ್ದಾರ್…

ಮೈಸೂರು,ಸೆ12,Tv10 ಕನ್ನಡ

ULC ಜಮೀನು ಒತ್ತುವರಿದಾರರಿಗೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ನಡುಕ ಹುಟ್ಟಿಸಿದ್ದಾರೆ.GRS ಫ್ಯಾಂಟಸಿ ಪಾರ್ಕ್ ಬಳಿ ಒತ್ತುವರಿಯಾಗಿದ್ದ 20 ಕೋಟಿ ಮೌಲ್ಯದ ULC ಜಮೀನು ವಶಪಡಿಸಿಕೊಳ್ಳುವ ಮೂಲಕ ಛಳಿ ಬಿಡಿಸಿದ್ದಾರೆ.ಮುಂದಿನ ದಿನಗಳಲ್ಲಿ ಒತ್ತುವರಿ ಆಗಿರುವ ULC ಜಮೀನುಗಳನ್ನ ವಶಪಡಿಸಿಕೊಳ್ಳುವುದಾಗಿ ಭೂಕಬಳಿಕೆದಾರರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ

ಮೈಸೂರು ನಗರ ಕಸಬಾ ಹೋಬಳಿ ಮೇಟಗಳ್ಳಿ ಗ್ರಾಮದ ಸರ್ವೆ ನಂ 62/3 ರಲ್ಲಿರುವ ಸುಮಾರು ಒಂದು ಎಕ್ರೆ ULC ಜಮೀನನ್ನ ವಶಪಡಿಸಿಕೊಳ್ಳಲಾಗಿದೆ.ಸದರಿ ಜಮೀನು 20 ಕೋಟಿ ಬೆಲೆ ಬಾಳುವುದೆಂದು ಅಂದಾಜಿಸಲಾಗಿದೆ.ಜಿಲ್ಲಾಧಿಕಾರಿಗಳು ಹೊರಡಿಸಿದ ಸುಗ್ರೀವಾಜ್ಞೆಯನ್ನ ಪಾಲಿಸಿದ ಉಪವಿಭಾಗಾಧಿಕಾರಿ ರಕ್ಷಿತ್ ಹಾಗೂ ತಹಸೀಲ್ದಾರ್ ಗಿರೀಶ್ ರವರು ಇಂದು ಒತ್ತುವರಿಯಾಗಿದ್ದ ULC ಜಮೀನು ವಶಪಡಿಸಿಕೊಂಡರು.ಮೇಟಗಳ್ಳಿ ಗ್ರಾಮದ ಸರ್ವೆ ನಂ68/1,68/3,69,64/2 ಹಾಗೂ 62/3 ಜಮೀನುಗಳನ್ನ ULC ಕಾಯ್ದೆ 11/84/76-77 ಅನ್ವಯದಂತೆ ಗೋವಿಂದೇಗೌಡ,ತಿಮ್ಮೇಗೌಡ,ಯಾಲಕ್ಕಿಗೌಡ,ನಾರಾಯಣ,ಜಯರಾಮು,ಪಾಪಣ್ಣ ರವರಿಂದ ಸ್ವಾಧೀನ ಪಡಿಸಿಕೊಳ್ಳಲಾಗಿತ್ತು.ಸದರಿ ಸರ್ವೆ ನಂ ಪೈಕಿ 62/3 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಕಟ್ಟಡಗಳನ್ನ ನಿರ್ಮಿಸಿ ಎಮ್.ಸ್ಯಾಂಡ್ ಮರಳು,ಜೆಲ್ಲಿ,ಇಟ್ಟಿಗೆಗಳ ವಹಿವಾಟು ನಡೆಯುತ್ತಿತ್ತು.ಈ ಮಾಹಿತಿ ಅರಿತ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ದಾಖಲೆಗಳನ್ನ ಪರಿಶೀಲಿಸಿ ಕೂಡಲೇ ಒತ್ತುವರಿಯನ್ನ ತೆರುವುಗೊಳಿಸಿ ವಶಕ್ಕೆ ಪಡೆಯುವಂತೆ

ಉಪವಿಭಾಗಾಧಿಕಾರಿಗಳಾದ ಕೆ.ಆರ್.ರಕ್ಷಿತ್ ಹಾಗೂ ತಹಸೀಲ್ದಾರ್ ಬಿ.ಎನ್.ಗಿರೀಶ್ ರವರಿಗೆ ಸುಗ್ರೀವಾಜ್ಞೆ ಹೊರಡಿಸಿದ್ದರು.ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಎಸಿ ಹಾಗೂ ತಹಸೀಲ್ದಾರ್ ರವರು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ KLR ಕಾಯ್ದೆ 192(A) ಪ್ರಕಾರ ಮೊಕದ್ದಮೆ ದಾಖಲಿಸುವಂತೆ ದೂರು ನೀಡಿ ನಂತರ ಇಂದು ಒತ್ತುವರಿ ತೆರುವುಗೊಳಿಸಿದ್ದಾರೆ.ಮೇಟಗಳ್ಳಿ ಠಾಣೆ ಪೊಲೀಸರ ಭದ್ರತೆಯೊಂದಿಗೆ ಇಂದು ಸುಮಾರು 20 ಕೋಟಿ ಮೌಲ್ಯದ ULC ಜಮೀನು ವಶಪಡಿಸಿಕೊಳ್ಳಲಾಗಿದೆ.ಒತ್ತುವರಿ ತೆರುವು ಕಾರ್ಯಾಚರಣೆಯಲ್ಲಿ ಆರ್.ಐ.ರಾಘವೇಂದ್ರ ನಾಯಕ್,ಗ್ರಾಮ ಆಡಳಿತ.

ಅಧಿಕಾರಿ ಮಹೇಶ್ ಹಾಗೂಸಿಟಿ ಸರ್ವೆ ಭೂಮಾಪಕರಾದ ಸುರೇಶ್ . ಗ್ರಾಮ ಆಡಳಿತ ಆಡಳಿತ ಅಧಿಕಾರಿಗಳಾದ ನಾಗೇಶ್ ಕುಮಾರ್ . ಗಿರೀಶ್ ಹಾಗೂ ಭಾಸ್ಕರ್ ಹೋಬಳಿಯ ಎಲ್ಲಾ ಗ್ರಾಮ ಸಹಾಯಕರು ಹಾಜರಿದ್ದರು ಇತರರು ಸಾಥ್ ನೀಡಿದ್ದಾರೆ.

ಇನ್ಮುಂದೆ ULC ಜಮೀನು ಒತ್ತುವರಿ ಮಾಡುವ ಭೂಕಬಳಿಕೆದಾರರಿಗೆ ಜಿಲ್ಲಾಧಿಕಾರಿಗಳು ಈ ಕಾರ್ಯಾಚರಣೆ ಮೂಲಕ ಎಚ್ಚರಿಕೆ ಗಂಟೆ ನೀಡಿದ್ದಾರೆ…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *