ದಸರಾ ಹಿನ್ನಲೆ…ಪ್ರಥಮ ಪ್ರಜೆಯಿಂದ ರಾಜಮಾರ್ಗ ಪರಿಶೀಲನೆ…ನಗರ ಸೌಂದರ್ಯ ಹೆಚ್ಚಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ…

ದಸರಾ ಹಿನ್ನಲೆ…ಪ್ರಥಮ ಪ್ರಜೆಯಿಂದ ರಾಜಮಾರ್ಗ ಪರಿಶೀಲನೆ…ನಗರ ಸೌಂದರ್ಯ ಹೆಚ್ಚಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ…

ಮೈಸೂರು,ಸೆ12,Tv10 ಕನ್ನಡ

ವಿಶ್ವವಿಖ್ಯಾತ ದಸರಾ 2023 ಕ್ಕೆ ದಿನಗಣನೆ ಆರಂಭವಾಗಿದೆ.ಈಗಾಗಲೇ ದಸರಾ ಅಟ್ರಾಕ್ಷನ್ ಗಜಪಡೆ ಸಾಂಸ್ಕೃತಿಕ ನಗರಿ ಪ್ರವೇಶಿಸಿದೆ.ಜಂಬೂಸವಾರಿ ಸಾಗುವ ರಾಜಮಾರ್ಗದಲ್ಲಿ ತಾಲೀಮು ನಡೆಸುತ್ತಾ ಮೈಸೂರಿಗರಲ್ಲಿ ಕುತೂಹಲ ತಂದಿದೆ.ಲಕ್ಷಾಂತರ ಪ್ರವಾಸಿಗರ ಕೇಂದ್ರಬಿಂದುವಾದ ಜಂಬೂಸವಾರಿ ತೆರಳುವ ರಾಜಮಾರ್ಗವೂ ಅಚ್ಚುಕಟ್ಟಾಗಿರಬೇಕೆಂಬುದು ಮೈಸೂರು ಮಹಾನಗರ ಪಾಲಿಕೆಯ ಅಭಿಪ್ರಾಯ.ಈ ಹಿನ್ನಲೆ ಇಂದು ಮೇಯರ್ ಶಿವಕುಮಾರ್ ಜಂಬೂಸವಾರಿ ತೆರಳುವ ರಾಜಮಾರ್ಗ ಸೇರಿದಂತೆ ಅರಮನೆಯ ಸುತ್ತಮುತ್ತಲಿನ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ನಗರದ ಅಂದ ಹೆಚ್ಚುಸುವ ಕುರಿತಂತೆ ಮೇಯರ್ ಶಿವಕುಮಾರ್ ಒತ್ತು ನೀಡಿದ್ದಾರೆ.ಕೆ.ಆರ್.ವೃತ್ತ,ಚಾಮರಾಜ ವೃತ್ತಕ್ಕೆ ದೀಪಾಲಂಕಾರ,ವೃತ್ತದ ಆವರಣದಲ್ಲಿ ಸುಂದರ ಉದ್ಯಾನವನ ನಿರ್ಮಿಸುವ ಕುರಿತಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ರಾಜಮಾರ್ಗದ ಇಕ್ಕೆಲಗಳಲ್ಲಿ ಅಳವಡಿಸಿರುವ ಟೈಲ್ಸ್ ಗಳ ಪರಿಶೀಲನೆ ನಡೆಸಿದ್ದು ಮುರಿದ ಟೈಲ್ಸ್ ಗಳನ್ನ ಬದಲಾಯಿಸುವಂತೆ ಸೂಚನೆ ನೀಡಿದ್ದಾರೆ.ಡ್ಯಾಮೇಜ್ ಆಗಿರುವ ಬ್ಯಾರಿಕೇಡ್ ಗಳನ್ನ ಬದಲಾಯಿಸುವುದು,ಮುಚ್ಚಿರುವ ಸಬ್ ವೇ ತೆರುವುಗೊಳಿಸುವ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ.ಟೌನ್ ಹಾಲ್ ನಲ್ಲಿ ನೆನೆಗುದಿಗೆ ಬಿದ್ದ ಪಾರ್ಕಿಂಗ್ ವ್ಯವಸ್ಥೆಯನ್ನೂ ಪರಿಶೀಲಿಸಿ ಶೀಘ್ರದಲ್ಲಿ ಚಾಲ್ತಿಗೆ ಬರುವ ಕುರಿತಂತೆ ಚರ್ಚಿಸಿದ್ದಾರೆ.ಒಟ್ಟಾರೆ ದಸರಾ ಸಮಯದಲ್ಲಿ ಬರುವ ಪ್ರವಾಸಿಗರಿಗೆ ಆಕರ್ಷಣೀಯವಾಗಿ ಕಾಣುವಂತೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *