ದಸರಾ ಹಿನ್ನಲೆ…ಪ್ರಥಮ ಪ್ರಜೆಯಿಂದ ರಾಜಮಾರ್ಗ ಪರಿಶೀಲನೆ…ನಗರ ಸೌಂದರ್ಯ ಹೆಚ್ಚಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ…

ದಸರಾ ಹಿನ್ನಲೆ…ಪ್ರಥಮ ಪ್ರಜೆಯಿಂದ ರಾಜಮಾರ್ಗ ಪರಿಶೀಲನೆ…ನಗರ ಸೌಂದರ್ಯ ಹೆಚ್ಚಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ…

ಮೈಸೂರು,ಸೆ12,Tv10 ಕನ್ನಡ

ವಿಶ್ವವಿಖ್ಯಾತ ದಸರಾ 2023 ಕ್ಕೆ ದಿನಗಣನೆ ಆರಂಭವಾಗಿದೆ.ಈಗಾಗಲೇ ದಸರಾ ಅಟ್ರಾಕ್ಷನ್ ಗಜಪಡೆ ಸಾಂಸ್ಕೃತಿಕ ನಗರಿ ಪ್ರವೇಶಿಸಿದೆ.ಜಂಬೂಸವಾರಿ ಸಾಗುವ ರಾಜಮಾರ್ಗದಲ್ಲಿ ತಾಲೀಮು ನಡೆಸುತ್ತಾ ಮೈಸೂರಿಗರಲ್ಲಿ ಕುತೂಹಲ ತಂದಿದೆ.ಲಕ್ಷಾಂತರ ಪ್ರವಾಸಿಗರ ಕೇಂದ್ರಬಿಂದುವಾದ ಜಂಬೂಸವಾರಿ ತೆರಳುವ ರಾಜಮಾರ್ಗವೂ ಅಚ್ಚುಕಟ್ಟಾಗಿರಬೇಕೆಂಬುದು ಮೈಸೂರು ಮಹಾನಗರ ಪಾಲಿಕೆಯ ಅಭಿಪ್ರಾಯ.ಈ ಹಿನ್ನಲೆ ಇಂದು ಮೇಯರ್ ಶಿವಕುಮಾರ್ ಜಂಬೂಸವಾರಿ ತೆರಳುವ ರಾಜಮಾರ್ಗ ಸೇರಿದಂತೆ ಅರಮನೆಯ ಸುತ್ತಮುತ್ತಲಿನ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ನಗರದ ಅಂದ ಹೆಚ್ಚುಸುವ ಕುರಿತಂತೆ ಮೇಯರ್ ಶಿವಕುಮಾರ್ ಒತ್ತು ನೀಡಿದ್ದಾರೆ.ಕೆ.ಆರ್.ವೃತ್ತ,ಚಾಮರಾಜ ವೃತ್ತಕ್ಕೆ ದೀಪಾಲಂಕಾರ,ವೃತ್ತದ ಆವರಣದಲ್ಲಿ ಸುಂದರ ಉದ್ಯಾನವನ ನಿರ್ಮಿಸುವ ಕುರಿತಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ರಾಜಮಾರ್ಗದ ಇಕ್ಕೆಲಗಳಲ್ಲಿ ಅಳವಡಿಸಿರುವ ಟೈಲ್ಸ್ ಗಳ ಪರಿಶೀಲನೆ ನಡೆಸಿದ್ದು ಮುರಿದ ಟೈಲ್ಸ್ ಗಳನ್ನ ಬದಲಾಯಿಸುವಂತೆ ಸೂಚನೆ ನೀಡಿದ್ದಾರೆ.ಡ್ಯಾಮೇಜ್ ಆಗಿರುವ ಬ್ಯಾರಿಕೇಡ್ ಗಳನ್ನ ಬದಲಾಯಿಸುವುದು,ಮುಚ್ಚಿರುವ ಸಬ್ ವೇ ತೆರುವುಗೊಳಿಸುವ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ.ಟೌನ್ ಹಾಲ್ ನಲ್ಲಿ ನೆನೆಗುದಿಗೆ ಬಿದ್ದ ಪಾರ್ಕಿಂಗ್ ವ್ಯವಸ್ಥೆಯನ್ನೂ ಪರಿಶೀಲಿಸಿ ಶೀಘ್ರದಲ್ಲಿ ಚಾಲ್ತಿಗೆ ಬರುವ ಕುರಿತಂತೆ ಚರ್ಚಿಸಿದ್ದಾರೆ.ಒಟ್ಟಾರೆ ದಸರಾ ಸಮಯದಲ್ಲಿ ಬರುವ ಪ್ರವಾಸಿಗರಿಗೆ ಆಕರ್ಷಣೀಯವಾಗಿ ಕಾಣುವಂತೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *