ಗ್ರಾಮ ಲೆಕ್ಕಿಗರು ಪಂಚಾಯ್ತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು: ಸಿಎಂ ಸೂಚನೆ

ಗ್ರಾಮ ಲೆಕ್ಕಿಗರು ಪಂಚಾಯ್ತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು: ಸಿಎಂ ಸೂಚನೆ

ಬೆಂಗಳೂರು ಸೆ 12 : ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ. ಆದ್ದರಿಂದ ಗ್ರಾಮ‌ ಲೆಕ್ಕಿಗರು ಗ್ರಾಮ ಪಂಚಾಯ್ತಿಗಳಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.‌

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಈ ರೀತಿ ಸೂಚನೆ ನೀಡಿದರು.

ಗ್ರಾಮ ಲೆಕ್ಕಿಗರನ್ನು ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವಂತೆ ಮತ್ತು ಅವರಿಗೆ ಗ್ರಾಮ ಪಂಚಾಯ್ತಿಯಲ್ಲೇ ಒಂದು ಕೊಠಡಿ ಇರುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಿಎಂ ನೀಡಿದ ಉಳಿದ ಸೂಚನೆಗಳು

ಸರ್ವೇ ಗೆ ಸಂಬಂಧಿಸಿದ ವ್ಯಾಜ್ಯಗಳು ಶೀಘ್ರ ವಿಲೇವಾರಿಗಾಗಿ ಕ್ರಮ

ಭೂ ಮಾಪಕರಿಂದ ಸರ್ವೇ ಪ್ರಕರಣಗಳು ಬಾಕಿ ಉಳಿಯಬಾರದು. ರೈತರು ಸರ್ವೇ ವ್ಯಾಜ್ಯಗಳಿಗಾಗಿ ಕಚೇರಿಗೆ ಅಲೆಯುವುದನ್ನು ತಕ್ಷಣದಿಂದ ತಪ್ಪಿಸಿ

ಕಂದಾಯ ಇಲಾಖೆಯಲ್ಲಿ ಕಡತಗಳು ಅನಲೈನ ನಲ್ಲಿ 5-10 ದಿನದೊಳಗೆ ವಿಲೇವಾರಿ ಆಗಬೇಕು

(ಕಾಪಿ 4)

ಗ್ರಾಮ ಲೆಕ್ಕಿಗರು ಪಂಚಾಯ್ತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು: ಸಿಎಂ ಸೂಚನೆ

ಬೆಂಗಳೂರು ಸೆ 12 : ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ. ಆದ್ದರಿಂದ ಗ್ರಾಮ‌ ಲೆಕ್ಕಿಗರು ಗ್ರಾಮ ಪಂಚಾಯ್ತಿಗಳಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.‌

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಈ ರೀತಿ ಸೂಚನೆ ನೀಡಿದರು.

ಗ್ರಾಮ ಲೆಕ್ಕಿಗರನ್ನು ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವಂತೆ ಮತ್ತು ಅವರಿಗೆ ಗ್ರಾಮ ಪಂಚಾಯ್ತಿಯಲ್ಲೇ ಒಂದು ಕೊಠಡಿ ಇರುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಿಎಂ ನೀಡಿದ ಉಳಿದ ಸೂಚನೆಗಳು

ಸರ್ವೇ ಗೆ ಸಂಬಂಧಿಸಿದ ವ್ಯಾಜ್ಯಗಳು ಶೀಘ್ರ ವಿಲೇವಾರಿಗಾಗಿ ಕ್ರಮ

ಭೂ ಮಾಪಕರಿಂದ ಸರ್ವೇ ಪ್ರಕರಣಗಳು ಬಾಕಿ ಉಳಿಯಬಾರದು. ರೈತರು ಸರ್ವೇ ವ್ಯಾಜ್ಯಗಳಿಗಾಗಿ ಕಚೇರಿಗೆ ಅಲೆಯುವುದನ್ನು ತಕ್ಷಣದಿಂದ ತಪ್ಪಿಸಿ

ಕಂದಾಯ ಇಲಾಖೆಯಲ್ಲಿ ಕಡತಗಳು ಅನಲೈನ ನಲ್ಲಿ 5-10 ದಿನದೊಳಗೆ ವಿಲೇವಾರಿ ಆಗಬೇಕು

ಸರ್ವೇ mismatch ಗಳನ್ನು ಭೂ ಮಾಪಕರು, ಎಸಿ, ತಹಸೀಲ್ದಾರ್ ಗಳ ಸರ್ವೇ ಮಾಡುವ ಬಗ್ಗೆ ಪಟ್ಟಿ ಮಾಡಿ, ಬಾಕಿ ಇರುವ ಸರ್ವೇ ಕಾರ್ಯವನ್ನು ವಿಲೀವಾರಿ ಮಾಡಬೇಕು

ನಿಗದಿತ ಅವಧಿಯೊಳಗೆ ಜೋಡಿ ಗ್ರಾಮಗಳ ಸರ್ವೇ ಕಾರ್ಯ ಪೂರ್ಣಗೊಳಿಸಬೇಕು

ಬೆಂಗಳೂರು ನಗರ ಸುತ್ತುಮುತ್ತ green belt ಪ್ರದೇಶದಲ್ಲಿ ಅನಧಿಕೃತ ಬಡಾವಣೆಗಳನ್ನು ನಿರ್ಮಿಸಲಾಗುತ್ತಿದ್ದು, ಇದಕ್ಕೆ ಸಹಕಾರ ನೀಡುತ್ತಿರುವ ಪಿಡಿಒ, ಕಂದಾಯ ಅಧಿಕಾರಿ, ಗ್ರಾಮ ಲೆಕ್ಕಿಗರ ವಿರುದ್ಧ ಕ್ರಮ ಕೈಗೊಳ್ಳಬೇಕು

ಅನಧಿಕೃತ ಬಡಾವಣೆಗಳ ನಿರ್ಮಾಣ ವಿಷ ವರ್ತುಲವಿದ್ದಂತೆ. ಜಿಲ್ಲಾಧಿಕಾರಿಗಳು, ಸಿ ಇ ಓ ಗಳು ಈ ವಿಷಯಗಳನ್ನು ಗಂಬೀರವಾಗಿ ಪರಿಗಣಿಸಬೇಕು

ಜಿಲ್ಲೆಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕಂದಾಯ ಭೂಮಿಯಲ್ಲಿ ಅನಧಿಕೃತ ಬಡಾವಣೆಗಳ ಹಾವಳಿಯನ್ನು ತಡೆಗಟ್ಟಲು ಅಗತ್ಯ ಗಮನ ಹರಿಸಬೇಕು

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಂತರ ಜಿಲ್ಲೆಯಲ್ಲಿ ಅನಧಿಕೃತ ಬಡಾವಣೆಗಳ ಹಾವಳಿಗೆ ಅಂತ್ಯ ಹಾಡಬೇಕಿದ್ದು, ಇದರ ತಡೆಗಟ್ಟುವಿಕೆಗೆ ಸಂಬಂಧಿಸಿದಂತೆ ಪ್ರತ್ಯೇಕ ಸಭೆ ನಡೆಸಬೇಕು

ಕಂದಾಯ ಭೂಮಿಯಲ್ಲಿ ಅನಧಿಕೃತ ಬಡಾವಣೆಗಳ ನಿರ್ಮಾಣಕ್ಕೆ ಅನುಮತಿ ನೀಡಲೆಬಾರದಂದು ಅಧಿಕಾರಿಗಳು ತೀರ್ಮಾನಿಸಬೇಕು

ಬೆಂಗಳೂರು ಸುತ್ತಮುತ್ತ ಹಸಿರು ವಲಯದಲ್ಲಿ ಖಾಸಗಿ ವ್ಯಕ್ತಿಗಳು ಬಡಾವಣೆಗಳನ್ನು ಮಾಡಿ, ನಿವೇಶನಗಳನ್ನು ಹಂಚಿಕೆ ಮನೆ ಕಟ್ಟಿಕೊಂಡಿದ್ದಾರೆ. ಇದನ್ನು ಪಿಡಿಓ, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳ ಸಹಕಾರ ಇಲ್ಲದ ಮಾಡಲು ಸಾಧ್ಯವಿಲ್ಲ. ಇದು ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಸೂಚನೆ ನೀಡಿದರು

ಇದಕ್ಕೆ ರಾಜಕೀಯ ಇಚ್ಛಾಶಕ್ತಿ ಮುಖ್ಯ. ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯಲು ಸಂಪೂರ್ಣ ಬೆಂಬಲ ನೀಡುತ್ತೇವೆ. ಅಕ್ರಮ ತಡೆಗಟ್ಟಿ ಎಂದು ಮುಖ್ಯಮಂತ್ರಿ ಸೂಚಿಸಿದರು

ಜಿಲ್ಲೆಗಳಲ್ಲಿ ರೆವೆನ್ಯೂ ಬಡಾವಣೆಗಳಿಗೆ ಅವಕಾಶ ನೀಡಬಾರದು. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅಕ್ರಮ ಬಡಾವಣೆಗಳ ಸಮಸ್ಯೆ ಕುರಿತು ಪ್ರತ್ಯೇಕ ಸಭೆ ನಡೆಸುವ ಅಗತ್ಯವಿದೆ. ಇತರ ಜಿಲ್ಲೆಗಳಲ್ಲಿ ಇದಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಾಗಿದೆ. ಅಧಿಕಾರಿಗಳು ಗಂಭೀರ ಸ್ವರೂಪದ ತಪ್ಪುಗಳನ್ನೆಸಗಿದಾಗ ಕ್ರಿಮಿನಲ್‌ ಪ್ರಕರಣಗಳನ್ನೇ ದಾಖಲಿಸಲು ಸೂಚಿಸಲಾಯಿತು

ಕಾಗೋಡು ತಿಮ್ಮಪ್ಪ ಅವರು ಕಂದಾಯ ಸಚಿವರಿದ್ದಾಗ, ಪೋಡಿಮುಕ್ತ ಗ್ರಾಮ ಅಭಿಯಾನ ನಡೆಸಿದ್ದರು. ಅದರ ಸ್ಥಿತಿಗತಿ ಏನು? 30.715 ಗ್ರಾಮಗಳಿವೆ. 175 ವಿಧಾನಸಭಾ ಕ್ಷೇತ್ರಗಳಲ್ಲಿ 16,850 ಗ್ರಾಮಗಳು ಪೋಡಿ ಮುಕ್ತ ಗ್ರಾಮಗಳಾಗಿವೆ. ಉಳಿದೆಡೆ ಕ್ರಮ ಆಗಬೇಕಿದೆ. 14,000 ಗ್ರಾಮಗಳನ್ನು ಕೈಗೆತ್ತಿಕೊಳ್ಳಬೇಕಾಗಿದೆ. ಈ ಅಭಿಯಾನವನ್ನು ಮತ್ತೆ ಕೈಗೆತ್ತಿಕೊಳ್ಳಲು ಸೂಚಿಸಿದರು

3292 ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ರೂಪಿಸುವ ನಿಟ್ಟಿನಲ್ಲಿ 812 ಗ್ರಾಮಗಳಿಗೆ ಅಧಿಸೂಚನೆ ಹೊರಡಿಸಲು ಇನ್ನೂ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ. ಈ ಪ್ರಕ್ರಿಯೆಯನ್ನು ಆರು ತಿಂಗಳೊಳಗೆ ಪೂರ್ಣಗೊಳಿಸಲು ಸೂಚಿಸಿದರು

ಸರ್ವೇ mismatch ಗಳನ್ನು ಭೂ ಮಾಪಕರು, ಎಸಿ, ತಹಸೀಲ್ದಾರ್ ಗಳ ಸರ್ವೇ ಮಾಡುವ ಬಗ್ಗೆ ಪಟ್ಟಿ ಮಾಡಿ, ಬಾಕಿ ಇರುವ ಸರ್ವೇ ಕಾರ್ಯವನ್ನು ವಿಲೀವಾರಿ ಮಾಡಬೇಕು

ನಿಗದಿತ ಅವಧಿಯೊಳಗೆ ಜೋಡಿ ಗ್ರಾಮಗಳ ಸರ್ವೇ ಕಾರ್ಯ ಪೂರ್ಣಗೊಳಿಸಬೇಕು

ಬೆಂಗಳೂರು ನಗರ ಸುತ್ತುಮುತ್ತ green belt ಪ್ರದೇಶದಲ್ಲಿ ಅನಧಿಕೃತ ಬಡಾವಣೆಗಳನ್ನು ನಿರ್ಮಿಸಲಾಗುತ್ತಿದ್ದು, ಇದಕ್ಕೆ ಸಹಕಾರ ನೀಡುತ್ತಿರುವ ಪಿಡಿಒ, ಕಂದಾಯ ಅಧಿಕಾರಿ, ಗ್ರಾಮ ಲೆಕ್ಕಿಗರ ವಿರುದ್ಧ ಕ್ರಮ ಕೈಗೊಳ್ಳಬೇಕು

ಅನಧಿಕೃತ ಬಡಾವಣೆಗಳ ನಿರ್ಮಾಣ ವಿಷ ವರ್ತುಲವಿದ್ದಂತೆ. ಜಿಲ್ಲಾಧಿಕಾರಿಗಳು, ಸಿ ಇ ಓ ಗಳು ಈ ವಿಷಯಗಳನ್ನು ಗಂಬೀರವಾಗಿ ಪರಿಗಣಿಸಬೇಕು

ಜಿಲ್ಲೆಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕಂದಾಯ ಭೂಮಿಯಲ್ಲಿ ಅನಧಿಕೃತ ಬಡಾವಣೆಗಳ ಹಾವಳಿಯನ್ನು ತಡೆಗಟ್ಟಲು ಅಗತ್ಯ ಗಮನ ಹರಿಸಬೇಕು

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಂತರ ಜಿಲ್ಲೆಯಲ್ಲಿ ಅನಧಿಕೃತ ಬಡಾವಣೆಗಳ ಹಾವಳಿಗೆ ಅಂತ್ಯ ಹಾಡಬೇಕಿದ್ದು, ಇದರ ತಡೆಗಟ್ಟುವಿಕೆಗೆ ಸಂಬಂಧಿಸಿದಂತೆ ಪ್ರತ್ಯೇಕ ಸಭೆ ನಡೆಸಬೇಕು

ಕಂದಾಯ ಭೂಮಿಯಲ್ಲಿ ಅನಧಿಕೃತ ಬಡಾವಣೆಗಳ ನಿರ್ಮಾಣಕ್ಕೆ ಅನುಮತಿ ನೀಡಲೆಬಾರದಂದು ಅಧಿಕಾರಿಗಳು ತೀರ್ಮಾನಿಸಬೇಕು

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *