ಆಟೋ ಚಾಲಕನ ಸಮಯಪ್ರಜ್ಞೆ…ತಪ್ಪಿಸಿಕೊಂಡಿದ್ದ ಬಾಲಕ ರಕ್ಷಣೆ…ದೇವರಾಜ ಠಾಣೆ ಪೊಲೀಸರಿಂದ ಅಭಿನಂದನೆ…

ಆಟೋ ಚಾಲಕನ ಸಮಯಪ್ರಜ್ಞೆ…ತಪ್ಪಿಸಿಕೊಂಡಿದ್ದ ಬಾಲಕ ರಕ್ಷಣೆ…ದೇವರಾಜ ಠಾಣೆ ಪೊಲೀಸರಿಂದ ಅಭಿನಂದನೆ…

ಮೈಸೂರು,ಸೆ12,Tv10 ಕನ್ನಡ

ಮನೆಯಿಂದ ತಪ್ಪಿಸಿಕೊಂಡು ಅಳುತ್ತಾ ನಿಂತಿದ್ದ ಬಾಲಕನೋರ್ವನನ್ನ ಆಟೋ ಚಾಲಕರೊಬ್ಬರು ರಕ್ಷಿಸಿದ ಘಟನೆ ಮೈಸೂರಿನ ನಗರ ಬಸ್ ನಿಲ್ದಾಣದ ಬಳಿ ನಡೆದಿದೆ.ಆಟೋಚಾಲಕನ ಸಮಯಪ್ರಜ್ಞೆಗೆ ದೇವರಾಜ ಠಾಣೆ ಪೊಲೀಸರು ಅಭಿನಂದಿಸಿದ್ದಾರೆ.ಮನೆಯಿಂದ ತಪ್ಪಿಸಿಕೊಂಡು ಬಂದಿದ್ದ ಬಾಲಕ ಪೋಷಕರನ್ನ ಸೇಫ್ ಆಗಿ ಸೇರಿದ್ದಾನೆ.
ರಕ್ಷಣೆಗೆ ಒಳಗಾದ ಬಾಲಕ ಬೆಳಗಾವಿಯ ಶಿವರಾಜ್ ಮಹಾಲಿಂಗ್ ಮೇಲಮಟ್ಟಿ(14).ಬಾಲಕನ ರಕ್ಷಣೆಗೆ ಬಂದವರು ಆಟೋಚಾಲಕ ಹರೀಶ್ ಕುಮಾರ್. ಬೆಳಿಗ್ಗೆ 10-30 ಗಂಟೆ ಸಮಯದಲ್ಲಿ ಮೈಸೂರು ನಗರ ಬಸ್ ನಿಲ್ದಾಣ ದ ಬಳಿ ಬಾಲಕ ಶಿವರಾಜ್ ಮಹಾಲಿಂಗ್ ಅಳುತ್ತ ನಿಂತಿದ್ದ.ಇದನ್ನ ಗಮನಿಸಿದ ಆಟೋ ಚಾಲಕ ಹರೀಶ್ ಕುಮಾರ್ ಬಾಲಕನ ವಿಚಾರ ಮಾಡಿ ಆತನ ಹೆಸರು ವಿಳಾಸ ಕೇಳಿದಾಗ ತಂದೆ ಹೆಸರು ಮಹಾಲಿಂಗ ಮೇಲಮಟ್ಟಿ, ಹಿಡಕಲ್ ಡ್ಯಾಮ್, ಬೆಳಗಾವಿ ಎಂದು ಹೇಳಿದ್ದಾನೆ.ಆಕಸ್ಮಿಕವಾಗಿ ಮನೆಯಿಂದ ತಪ್ಪಿಸಿಕೊಂಡು ಬಂದಿದ್ದ ಬಗ್ಗೆ ಖಚಿತಪಡಿಸಿಕೊಂಡ ಹರೀಶ್ ಕುಮಾರ್ ಕೂಡಲೇ ಮುತುವರ್ಜಿ ವಹಿಸಿ ಬಾಲಕನಿಗೆ ನೆನಪಿದ್ದ ಫೋನ್ ನಂಬರ್ ಗೆ ಕರೆ ಮಾಡಿ ಮಾಹಿತಿ ತಿಳಿಸಿ ನಂತರ ದೇವರಾಜ ಪೊಲೀಸ್ ಠಾಣೆಗೆ ಕರೆ ತಂದಿದ್ದಾರೆ. ನಂತರ ಬೆಳಗಾವಿ ಯ ಹುಕ್ಕೇರಿ ತಾಲ್ಲೂಕಿನ ಯಮಕನ ಮರಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ.ಮಾಹಿತಿ ತಿಳಿದ ಬಾಲಕನ ಮಾವ ನೀಲಕಂಠ ಪೋಡಿ ದೇವರಾಜ ಠಾಣೆಗೆ ಬಂದು ಶಿವರಾಜ್ ನ ಕರೆದೊಯ್ದಿದ್ದಾರೆ. ಮಗ ತಪ್ಪಿಸಿಕೊಂಡು ಕಂಗಾಲಾಗಿದ್ದ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಆಟೋ ಚಾಲಕ ಹರೀಶ್ ಕುಮಾರ್ ನ ಸಮಯ ಪ್ರಜ್ಞೆ ಗೆ ಬಾಲಕನ ಕುಟುಂಬಸ್ಥರು, ದೇವರಾಜ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಟಿ. ಬಿ. ಶಿವಕುಮಾರ್ ಹಾಗೂ ಪಿ ಎಸ್ ಐ- ಜೈ ಕೀರ್ತಿ ರವರುಗಳು ಅಭಿನಂದಿಸಿದ್ದಾರೆ.

ಎರಡು ದಿನಗಳ ಹಿಂದೆ ಟ್ಯೂಷನ್ ಗಾಗಿ ಮನೆ ಬಿಟ್ಟ ಬಾಲಕ ಆಕಸ್ಮಿಕವಾಗಿ ಬೆಳಗಾವಿ ಬಸ್ ಹತ್ತಿ ಗೊಂದಲಕ್ಕೆ ಸಿಲುಕಿದ್ದಾನೆ.ಸೂಕ್ತ ಮಾಹಿತಿ ಇಲ್ಲದೆ ಮೈಸೂರಿಗೆ ಬರುವ ಟ್ರೈನ್ ಹತ್ತಿದ್ದಾನೆ.ಮೈಸೂರಿಗೆ ಬಂದಿಳಿದ ನಂತರ ದಾರಿ ಕಾಣದೆ ಬಸ್ ನಿಲ್ದಾಣದ ಬಳಿ ಅಳುತ್ತಾ ನಿಂತಿದ್ದಾಗ ಆಟೋಚಾಲಕ ಹರೀಶ್ ಕುಮಾರ್ ನೆರವಿಗೆ ಬಂದಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *