ಸ್ವಂತ ಸೂರಿಗಾಗಿ ಮುಖ್ಯಮಂತ್ರಿಗೆ ಪತ್ರ ಬರೆದ ಬಡ ಕುಟುಂಬ…

ಸ್ವಂತ ಸೂರಿಗಾಗಿ ಮುಖ್ಯಮಂತ್ರಿಗೆ ಪತ್ರ ಬರೆದ ಬಡ ಕುಟುಂಬ…

ಚಿತ್ರದುರ್ಗ,ಸೆ13,Tv10 ಕನ್ನಡ

ಹತ್ತಾರು ವರ್ಷಗಳಿಂದ ಗುಡಿಸಿಲಿನಲ್ಲಿ ವಾಸಿಸುತ್ತಿರುವ ಬಡಕುಟುಂಬವೊಂದು ಸ್ವಂತ ಸೂರಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆ ಪತ್ರ ಬರೆದಿದೆ.ಚಿತ್ರದುರ್ಗ ಜಿಲ್ಲೆ ಭರಮಸಾಗರ ಗ್ರಾಮದ ಮಾರಪ್ಪ ಕುಟುಂಬ ಪತ್ರ ಬರೆದಿದೆ.ಮೀನು ಹಿಡಿಯುವ ಕಾಯಕ ಮಾಡುತ್ತಿರುವ ಮರಪ್ಪ 12 ಮಂದಿಯನ್ನ ಪೋಷಿಸುತ್ತಿದ್ದಾರೆ.ಸ್ವಂತ ನೆಲೆ ಇಲ್ಲದೆ ಗುಡಿಸಿಲಿನಲ್ಲಿ ಹಲವಾರು ವರ್ಷಗಳಿಂದ ಆಶ್ರಯ ಪಡೆದಿದ್ದಾರೆ.ಬಾಡಿಗೆ ಕಟ್ಟಲೂ ಸಹ ಶಕ್ತಿ ಇಲ್ಲದ ಮಾರಪ್ಪ ಮತ್ತೊಬ್ಬರ ಖಾಲಿ ಜಾಗದಲ್ಲಿ ಗುಡಿಸಿಲು ಕಟ್ಟಿಕೊಂಡು ವಾಸವಿದ್ದಾರೆ.ಜಾಗದ ಮಾಲೀಕರು ಗರಂ ಆದಾಗ ಮತ್ತೊಂದು ಜಾಗ ಹುಡುಕಿ ಗುಡಿಸಿಲು ಹಾಕಿಕೊಳ್ಳುತ್ತಿದ್ದಾರೆ.ಕಳೆದ ಹಲವು ವರ್ಷಗಳಿಂದ ಇದೇ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿರುವ ಮಾರಪ್ಪರವರ ಕುಟುಂಬಕ್ಕೆ ಸ್ವಂತ ಸೂರಿಗಾಗಿ ಸರ್ಕಾರದ ಯಾವುದೇ ಯೋಜನೆ ನೆರವಿಗೆ ಬಂದಿಲ್ಲ.ಯಾವ ಜನಪ್ರತಿನಿಧಿಯೂ ಇವರ ಅಳಲು ಕೇಳಿಲ್ಕ.ಇದೀಗ ಮುಖ್ಯಮಂತ್ರಿಗಳ ಮೊರೆ ಹೋಗಿರುವ ಮಾರಪ್ಪ ಭರಮಸಾಗರದಲ್ಲಿ ಮನೆ ನಿರ್ಮಿಸಿಕೊಡುವಂತೆ ಪತ್ರ ಬರೆದಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *