8 ತಿಂಗಳ ಗರ್ಭಿಣಿಯ ಕುತ್ತಿಗೆ ಕೊಯ್ದು ಕೊಂದ ಪಾಪಿ ಗಂಡ…ಹಣಕ್ಕಾಗಿ ಪೀಡಿಸಿ ಕೊಲೆ…ಹೆತ್ತ ತಾಯಿ ಮುಂದೆ ದಾರುಣ ಹತ್ಯೆ…

8 ತಿಂಗಳ ಗರ್ಭಿಣಿಯ ಕುತ್ತಿಗೆ ಕೊಯ್ದು ಕೊಂದ ಪಾಪಿ ಗಂಡ…ಹಣಕ್ಕಾಗಿ ಪೀಡಿಸಿ ಕೊಲೆ…ಹೆತ್ತ ತಾಯಿ ಮುಂದೆ ದಾರುಣ ಹತ್ಯೆ…

ನಂಜನಗೂಡು,ಸೆ14,Tv10 ಕನ್ನಡ

ಹಣಕ್ಕಾಗಿ ಪೀಡಿಸುತ್ತಿದ್ದ ಪತಿರಾಯ 8 ತಿಂಗಳ ಗರ್ಭಿಣಿಯಾಗಿದ್ದ ಪತ್ನಿಯ ಕುತ್ತಿಗೆಯನ್ನ ಬ್ಲೇಡ್ ನಿಂದ ಕೊಯ್ದು ಕೊಂದ ಘಟನೆ ನಂಜನಗೂಡು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಚಾಮಲಾಪುರ ಹುಂಡಿಯಲ್ಲಿ ನಡೆದಿದೆ.ಹೆತ್ತ ತಾಯಿ ಮುಂದೆ ದಾರುಣವಾಗಿ ಕೊಂದ ಪಾಪಿ ಗಂಡನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಶೋಭಾ(26) ಮೃತ ದುರ್ದೈವಿ. ದಾರುಣವಾಗಿ ಹತ್ಯೆ ಮಾಡಿ ಪೊಲೀಸರ ಅತಿಥಿಯಾದ ಪತಿರಾಯ ಮಂಜು(27)
8 ವರ್ಷಗಳ ಹಿಂದೆ ಶೋಭಾ ಹಾಗೂ ಮಂಜು ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು.ಒಂದು ಮಗುವಿನ ತಾಯಿ ಆಗಿದ್ದ ಶೋಭಾ ಎರಡನೇ ಮಗುವಿಗೆ 8 ತಿಂಗಳ ಗರ್ಭಿಣಿಯಾಗಿದ್ದರು.ಮದುವೆಯಾದ ಪ್ರಾರಂಭದಲ್ಲಿ ಶೋಭಾಳನ್ನ ಮಂಜು ಚೆನ್ನಾಗಿ ನೋಡಿಕೊಂಡಿದ್ದ.ನಂತರದ ದಿನಗಳಲ್ಲಿ ಹಣದ ವ್ಯಾಮೋಹಕ್ಕೆ ಬಿದ್ದ ಮಂಜು ಪತ್ನಿಗೆ ಕಿರುಕುಳ ನೀಡುತ್ತಿದ್ದ.ಆಗಾಗ ಪತ್ನಿಯನ್ನ ತವರು ಮನೆಗೆ ಕಳುಹಿಸಿ ಹಣ ತರಿಸಿಕೊಳ್ಳುತ್ತಿದ್ದ.5 ವರ್ಷಗಳ ಹಿಂದೆ ಪತಿಯನ್ನ ಕಳೆದುಕೊಂಡ ಶೋಭಾಳ ತಾಯಿ ಪದ್ಮಾ ಗೆ ವಿಮೆ ಹಣ ಬಂದಿತ್ತು.ಆ ಹಣದ ಮೇಲೆ ಕಣ್ಣು ಹಾಕಿದ ಮಂಜು 3 ಲಕ್ಷ ಪೀಕಿದ್ದ.ಹೀಗಿದ್ದೂ ಹಣದ ದಾಹ ತೀರಿರಲಿಲ್ಲ.

ತುಂಬು ಗರ್ಭಿಣಿಯಾಗಿದ್ದ ಶೋಭಾಳನ್ನ ಹೆರಿಗೆಗಾಗಿ ತಾಯಿ ಪದ್ಮ ಮನೆಗೆ ಕರೆತಂದಿದ್ದರು.ಇಂದು ಬೆಳಿಗ್ಗೆ ಮನೆಗೆ ಬಂದ ಮಂಜು ತಾಯಿ ಪದ್ಮಾ ಹಾಗೂ ನೆರೆಹೊರೆ ಜನರ ಮುಂದೆ ಹಣಕ್ಕಾಗಿ ಕ್ಯಾತೆ ತೆಗೆದಿದ್ದಾನೆ.ದುಡ್ಡು ತಗೊಂಡು ಬಾ ಅಂದ್ರೆ ಇಲ್ಲೇ ಇದ್ಯಾ ಎಂದು ಕೂಗಾಡಿ ತುಂಬು ಗರ್ಭಿಣಿಯನ್ನ ಎಳೆದಾಡಿ ತಾಯಿ ಪದ್ಮ ಮುಂದೆಯೇ ಬ್ಲೇಡ್ ನಿಂದ ಕುತ್ತಿಗೆ ಕುಯ್ದಿದ್ದಾನೆ.ತೀವ್ರ ರಕ್ತಸ್ರಾವದಿಂದ ಬಳಲಿದ ಶೊಭಾಳನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ 8 ತಿಂಗಳ ಗರ್ಭಿಣಿ ಶೋಭಾ ಮೃತಪಟ್ಟಿದ್ದಾರೆ. ಕೃತ್ಯವೆಸಗಿದ ಆರೋಪಿ ಮಂಜುವನ್ನ ನಂಜನಗೂಡು ಟೌನ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *