*ಓಜೋನ್ ಪದರದ ರಕ್ಷಣೆ ನಮ್ಮೆಲ್ಲರ ಅಧ್ಯ ಕರ್ತವ್ಯ -ಅಶ್ವತ್ಥ ನಾರಾಯಣ ಗೌಡ *


ನಂಜನಗೂಡುspt16 Tv10 ಕನ್ನಡಓಜೋನ್ ಅತಿಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲ ವೆಂದು ತಿಳಿದು ಬಂದಿದ್ದರು ಸಹ ಓಝೋನ್ ಪದರದ ಬಗ್ಗೆ ನಿರಂತರವಾಗಿ ದಿವ್ಯ ನಿರ್ಲಕ್ಷ್ಯ ಮುಂದುವರಿಯುತ್ತದೆ. ಇನ್ನು ಮುಂದಾದರೂ ನಾವು ಎತ್ತುಕೊಳ್ಳದಿದ್ದಲ್ಲಿ ಪರಿಸರ ಸಮತೋಲನ ಕಳೆದು ಹೋಗಿ ಭೂಮಿಯು ಬರಡಾಗಿ ಮನುಷ್ಯ ಹಲವು ರೋಗಗಳಿಗೆ ತುತ್ತಾಗಿ ಜೀವ ವೈವಿಧ್ಯಗಳು ನಾಶವಾಗುವ ಸಾಧ್ಯತೆ ಹೆಚ್ಚು ಎಂದು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಹಸಿರು ಪಡೆ ಮತ್ತು ವಿಜ್ಞಾನ ಸಂಘದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಓಜೋನ್ ದಿನಾಚರಣೆಯ ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕರಾದ ಅಶ್ವಥ್ ನಾರಾಯಣಗೌಡರವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಭೌತಶಾಸ್ತ್ರ ಉಪನ್ಯಾಸಕರಾದ ನಾಗರಾಜ ರೆಡ್ಡಿ ಓಝೋನ್ ಪದರವು ಕರಗಲು ಮುಖ್ಯ ಕಾರಣ ಪರಿಸರ ವಿರೋಧಿ ಕೈಗಾರಿಕೆಗಳು. ಇವುಗಳಿಗೆ ಹೆಚ್ಚು ಹೊತ್ತು ನೀಡುವುದರಿಂದ ಇಂತಹ ಕಾರ್ಖಾನೆಗಳಿಂದ ಹೊರಹೊಮ್ಮುವ ವಿಷಕಾರಣ ಅನಿಲಗಳು , ವಾಹನಗಳಿಂದ ಹೊಗೆ, ಹವಾ ನಿಯಂತ್ರಕ ಯಂತ್ರಗಳಿಂದ ಹೊರಸೂಸುವ ವಿಷಾನಿಲ, ಶಿತಲೀಕರಣ ಯಂತ್ರದಿಂದ ಹೊರಹೊಮ್ಮುವ ಅನಿಲಗಳಾದ ಮಿಥೇನ್ , ಕಾರ್ಬನ್ ಮೋನಾಕ್ಸೈಡ್ ಮುಂತಾದ ಅನಿಲಗಳು ಓಝೋನ್ ಪದರವನ್ನು ತೆಳುವಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ .
ತಾಲೂಕು ಸರ್ಕಾರಿ ನೌಕರರ ಅಧ್ಯಕ್ಷರಾದ ರಂಗಸ್ವಾಮಿಯವರು ಮಾತನಾಡಿ ಓಝೋನ್ ಪದರವು ಕೇವಲ ಭೂಮಿಯನ್ನು ಸೂರ್ಯನ ಶಾಖದಿಂದ ರಕ್ಷಿಸುವ ಕೊಡೆ ಮಾತ್ರವಲ್ಲ ಇಡೀ ಭೂಮಂಡಲದ ಜೀವ ಸಂಕುಲವನ್ನು ರಕ್ಷಿಸುವ ಪದರವಾಗಿ ಕೆಲಸ ಮಾಡುತ್ತದೆ.
ವಿದ್ಯಾರ್ಥಿ ಸಂಜನಾ ಮಾತನಾಡಿ ಮುಂದಿನ ತಲೆಮಾರಿಗೆ ಆರೋಗ್ಯದ ಬದುಕಲು ಯೋಗ್ಯವಾದ ಭೂಮಿಯನ್ನು ಕೊಡುವುದು ನಮ್ಮೆಲ್ಲರ ಜವಾಬ್ದಾರಿ ಹಾಗಾಗಿ ಈ ಓಜೋನ್ ಪದರವನ್ನು ರಕ್ಷಿಸುವ ಕಾರ್ಯ ಮಾಡಲೇಬೇಕು.
ವಿದ್ಯಾರ್ಥಿ ಧ್ಯಾನ ಮಾತನಾಡಿ ಗಿಡಗಳನ್ನು ನಡೆಸುವ ಮೂಲಕ ಸುಂದರ ಪರಿಸರವನ್ನು ಕಾಯ್ದುಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಾದ ನಾವು ನಮ್ಮ ಮನಸ್ಸಿಗೆ ಪ್ರತಿಜ್ಞೆ ಮಾಡಿಕೊಳ್ಳಬೇಕು .
ಕಾರ್ಯಕ್ರಮದಲ್ಲಿ ಲಿಂಗಣ್ಣ ಸ್ವಾಮಿ, ದಿನೇಶ್ ,ಡಾ .ಟಿ ಕೆ ರವಿ ,ಸುಮಾ, ವಸಂತಕುಮಾರಿ ,ಸ್ವಾಮಿ ಗೌಡ , ಹರೀಶ್ ,ರಾಮನುಜಮ್ ,ಮೀನಾ ಬಿಂದು ,ಸುಮಿತ್ರಾ, ನಾಗವೇಣಿ ಉಪಸ್ಥಿತರಿದ್ದರು.

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *