*ಓಜೋನ್ ಪದರದ ರಕ್ಷಣೆ ನಮ್ಮೆಲ್ಲರ ಅಧ್ಯ ಕರ್ತವ್ಯ -ಅಶ್ವತ್ಥ ನಾರಾಯಣ ಗೌಡ *


ನಂಜನಗೂಡುspt16 Tv10 ಕನ್ನಡಓಜೋನ್ ಅತಿಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲ ವೆಂದು ತಿಳಿದು ಬಂದಿದ್ದರು ಸಹ ಓಝೋನ್ ಪದರದ ಬಗ್ಗೆ ನಿರಂತರವಾಗಿ ದಿವ್ಯ ನಿರ್ಲಕ್ಷ್ಯ ಮುಂದುವರಿಯುತ್ತದೆ. ಇನ್ನು ಮುಂದಾದರೂ ನಾವು ಎತ್ತುಕೊಳ್ಳದಿದ್ದಲ್ಲಿ ಪರಿಸರ ಸಮತೋಲನ ಕಳೆದು ಹೋಗಿ ಭೂಮಿಯು ಬರಡಾಗಿ ಮನುಷ್ಯ ಹಲವು ರೋಗಗಳಿಗೆ ತುತ್ತಾಗಿ ಜೀವ ವೈವಿಧ್ಯಗಳು ನಾಶವಾಗುವ ಸಾಧ್ಯತೆ ಹೆಚ್ಚು ಎಂದು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಹಸಿರು ಪಡೆ ಮತ್ತು ವಿಜ್ಞಾನ ಸಂಘದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಓಜೋನ್ ದಿನಾಚರಣೆಯ ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕರಾದ ಅಶ್ವಥ್ ನಾರಾಯಣಗೌಡರವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಭೌತಶಾಸ್ತ್ರ ಉಪನ್ಯಾಸಕರಾದ ನಾಗರಾಜ ರೆಡ್ಡಿ ಓಝೋನ್ ಪದರವು ಕರಗಲು ಮುಖ್ಯ ಕಾರಣ ಪರಿಸರ ವಿರೋಧಿ ಕೈಗಾರಿಕೆಗಳು. ಇವುಗಳಿಗೆ ಹೆಚ್ಚು ಹೊತ್ತು ನೀಡುವುದರಿಂದ ಇಂತಹ ಕಾರ್ಖಾನೆಗಳಿಂದ ಹೊರಹೊಮ್ಮುವ ವಿಷಕಾರಣ ಅನಿಲಗಳು , ವಾಹನಗಳಿಂದ ಹೊಗೆ, ಹವಾ ನಿಯಂತ್ರಕ ಯಂತ್ರಗಳಿಂದ ಹೊರಸೂಸುವ ವಿಷಾನಿಲ, ಶಿತಲೀಕರಣ ಯಂತ್ರದಿಂದ ಹೊರಹೊಮ್ಮುವ ಅನಿಲಗಳಾದ ಮಿಥೇನ್ , ಕಾರ್ಬನ್ ಮೋನಾಕ್ಸೈಡ್ ಮುಂತಾದ ಅನಿಲಗಳು ಓಝೋನ್ ಪದರವನ್ನು ತೆಳುವಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ .
ತಾಲೂಕು ಸರ್ಕಾರಿ ನೌಕರರ ಅಧ್ಯಕ್ಷರಾದ ರಂಗಸ್ವಾಮಿಯವರು ಮಾತನಾಡಿ ಓಝೋನ್ ಪದರವು ಕೇವಲ ಭೂಮಿಯನ್ನು ಸೂರ್ಯನ ಶಾಖದಿಂದ ರಕ್ಷಿಸುವ ಕೊಡೆ ಮಾತ್ರವಲ್ಲ ಇಡೀ ಭೂಮಂಡಲದ ಜೀವ ಸಂಕುಲವನ್ನು ರಕ್ಷಿಸುವ ಪದರವಾಗಿ ಕೆಲಸ ಮಾಡುತ್ತದೆ.
ವಿದ್ಯಾರ್ಥಿ ಸಂಜನಾ ಮಾತನಾಡಿ ಮುಂದಿನ ತಲೆಮಾರಿಗೆ ಆರೋಗ್ಯದ ಬದುಕಲು ಯೋಗ್ಯವಾದ ಭೂಮಿಯನ್ನು ಕೊಡುವುದು ನಮ್ಮೆಲ್ಲರ ಜವಾಬ್ದಾರಿ ಹಾಗಾಗಿ ಈ ಓಜೋನ್ ಪದರವನ್ನು ರಕ್ಷಿಸುವ ಕಾರ್ಯ ಮಾಡಲೇಬೇಕು.
ವಿದ್ಯಾರ್ಥಿ ಧ್ಯಾನ ಮಾತನಾಡಿ ಗಿಡಗಳನ್ನು ನಡೆಸುವ ಮೂಲಕ ಸುಂದರ ಪರಿಸರವನ್ನು ಕಾಯ್ದುಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಾದ ನಾವು ನಮ್ಮ ಮನಸ್ಸಿಗೆ ಪ್ರತಿಜ್ಞೆ ಮಾಡಿಕೊಳ್ಳಬೇಕು .
ಕಾರ್ಯಕ್ರಮದಲ್ಲಿ ಲಿಂಗಣ್ಣ ಸ್ವಾಮಿ, ದಿನೇಶ್ ,ಡಾ .ಟಿ ಕೆ ರವಿ ,ಸುಮಾ, ವಸಂತಕುಮಾರಿ ,ಸ್ವಾಮಿ ಗೌಡ , ಹರೀಶ್ ,ರಾಮನುಜಮ್ ,ಮೀನಾ ಬಿಂದು ,ಸುಮಿತ್ರಾ, ನಾಗವೇಣಿ ಉಪಸ್ಥಿತರಿದ್ದರು.

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *