ಸೆಪ್ಟೆಂಬರ್ 25 ಕ್ಕೆ ಎಲ್ಲಾ ಜಿಲ್ಲೆಗಳಲ್ಲೂ ಏಕಕಾಲಕ್ಕೆ ಜನತಾ ದರ್ಶನ…ಸಜ್ಜಾಗುವಂತೆ ಮುಖ್ಯಮಂತ್ರಿಗಳ ಕಾರ್ಯಾಲಯದಿಂದ ಸೂಚನೆ…
- TV10 Kannada Exclusive
- September 17, 2023
- No Comment
- 246

ಮೈಸೂರು,ಸೆ17,Tv10 ಕನ್ನಡ
ರಾಜ್ಯದ ಜನತೆಯ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ಸರ್ಕಾರ ಸಮರೋಪಾದಿಯಲ್ಲಿ ಸಜ್ಜಾಗುತ್ತಿದೆ.ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯದ ವಿವಿದ ಮೂಲೆಗಳಿಂದ ಬೆಂಗಳೂರಿಗೆ ಬಂದು ಅರ್ಜಿ ಸಲ್ಲಿಸುತ್ತಿದ್ದಾರೆ.ಅಹವಾಲುಗಳನ್ನ ಸ್ವೀಕರಿಸಿ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ಇನ್ಮುಂದೆ ಪ್ರತಿ ತಿಂಗಳು ಪ್ರತಿ ಜಿಲ್ಲೆಯಲ್ಲೂ ಆಯಾ ಉಸ್ತುವಾರಿ ಮಂತ್ರಿಗಳ ನೇತೃತ್ವದಲ್ಲಿ ಜನತಾ ದರ್ಶನ ನಡೆಸುವಂತೆ ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.ಜಿಲ್ಲಾ ಉಸ್ತುವಾರಿಗಳೊಂದಿಗರ ಸಮನ್ವಯ ಸಾಧಿಸಿ ಶಿಷ್ಠಾಚಾರಕ್ಕೆ ಅನುಗುಣವಾಗಿ ಜನತಾ ದರ್ಶನ ಕಾರ್ಯಕ್ರಮ ವ್ಯವಸ್ಥೆ ಮಾಡುವಂತೆ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಜನತಾ ದರ್ಶನ ವೇಳೆ ಎಲ್ಲಾ ವಿಭಾಗಗಳ ಅಧಿಕಾರಿಗಳು ಹಾಜರಿದ್ದು ಸ್ವೀಕೃತ ಅರ್ಜಿಗಳನ್ನ ತತ್ರಾಂಶದಲ್ಲಿ ದಾಖಲಿಸುವುದು ಹಾಗೂ ಪರಿಹಾರ ಕಲ್ಪಿಸುವತ್ತ ಗಮನ ಹರಿಸುವಂತೆ ತಿಳಿಸಿದ್ದಾರೆ.ಅಲ್ಲದೆ ಜಿಲ್ಲಾಧಿಕಾರಿಗಳು 15 ದಿನಗಳಿಗೆ ಒಮ್ಮೆ ತಾಲೂಕುಗಳಲ್ಲಿ ಜನತಾ ದರ್ಶನ ಹಮ್ಮಿಕೊಳ್ಳುತೆ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ…