ಗೌರಿಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಹಿನ್ನಲೆ…ಖಾಕಿ ಪಡೆಯಿಂದ ಪಥಸಂಚಲನ…ಸಾರ್ವಜನಿಕರಿಗೆ ಅಭಯ…
- TV10 Kannada Exclusive
- September 18, 2023
- No Comment
- 373
ಗೌರಿಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಹಿನ್ನಲೆ…ಖಾಕಿ ಪಡೆಯಿಂದ ಪಥಸಂಚಲನ…ಸಾರ್ವಜನಿಕರಿಗೆ ಅಭಯ…
ನಂಜನಗೂಡು,ಸೆ18,Tv10 ಕನ್ನಡ
ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ವೇಳೆ ಶಾಂತಿ ಕಾಪಾಡುವಂತೆ ಜಿಲ್ಲಾ ಪೊಲೀಸರು ಇಂದು ದಕ್ಷಿಣಕಾಶಿ ನಂಜನಗೂಡಿನಲ್ಲಿ ಪಥಸಂಚಲನ ನಡೆಸಿದರು.ಆಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪಥಸಂಚಲನ ನಡೆಸಿ ಸಾರ್ವಜನಿಕರಿಗೆ ಅಭಯ ನೀಡಿದರು.ಸಮಾಜ ಘಾತುಕ ಶಕ್ತಿಗಳಿಗೆ ಎಚ್ಚರಿಕೆ ಗಂಟೆ ರವಾನಿಸಿದ ಪೊಲೀಸರು ಸಾರ್ವಜನಿಕರಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಪಥಸಂಚಲನ ನಡೆಯಿತು.ನಂಜನಗೂಡಿನ ಪ್ರಮುಖ ರಸ್ತೆಗಳಲ್ಲಿ ನೂರಾರು ಪೊಲೀಸ್ ಸಿಬ್ಬಂದಿಗಳು ಪಥಸಂಚಲನ ನಡೆಸಿದರು…