ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಸಿಎಂ ಸಿದ್ದರಾಮಯ್ಯ ಶಾಕ್…ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚನೆ…
- TV10 Kannada Exclusive
- September 19, 2023
- No Comment
- 319

ಬೆಂಗಳೂರು,ಸೆ19,Tv10 ಕನ್ನಡ
ಬೆಂಗಳೂರು ಹಾಗೂ ಸುತ್ತಮುತ್ತ ಸರ್ಕಾರಿ ಭೂಮಿ ಕಬಳಿಸಿದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕ್ ನೀಡಿದ್ದಾರೆ.ದಾಖಲೆಗಳನ್ನ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.
ರಾಜ್ಯ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶದ ಭೂಮಿ ಬೆಲೆ ಗಗನಕ್ಕೆ ಏರಿದೆ.ಅಕ್ರಮ ದಾಖಲೆ ಸೃಷ್ಟಿಸಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ದೂರುಗಳು ಬಂದಿವೆ.ನೂರು ಕಿ.ಮೀ.ವ್ಯಾಪ್ತಿಯಲ್ಲಿ ರೆಸಾರ್ಟ್ಸ ಮತ್ತು ತಂಗುದಾಣಗಳು ಸರ್ಕಾರಿ ಭೂಮಿಯನ್ನ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ.ಸುಮಾರು 75 ಸಾವಿರ ಎಕ್ರೆ ಭೂಮಿ ಮತ್ತು ತಂಗುದಾಣಗಳಿಂದ 5-6 ಸಾವಿರ ಎಕ್ರೆ ಭೂಮಿ ಒತ್ತುವರಿ ಆಗಿದೆ ಎಂ ಬಗ್ಗೆ ದೂರುಗಳು ಬಂದಿದೆ.ಈ ಬಗ್ಗೆ ಮಾಜಿ ವಿಧಾನ ಪರಿಷತ್ ಸದಸ್ಯರಾದ ರಮೇಶ್ ಬಾಬು ದೂರು ನೀಡಿರುವ ಹಿನ್ನಲೆ ಲ್ಯಾಂಡ್ ಆಡಿಟಿಂಗ್ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ…