ಕೇರಳಾಕ್ಕೆ ಸಾಗಿಸಲಾಗುತ್ತಿದ್ದ 100 ಕ್ಕೂ ಹೆಚ್ಚು ರಾಸುಗಳ ರಕ್ಷಣೆ…ಅಂತರಸಂತೆ ಪೊಲೀಸರ ಕಾರ್ಯಾಚರಣೆ…

ಕೇರಳಾಕ್ಕೆ ಸಾಗಿಸಲಾಗುತ್ತಿದ್ದ 100 ಕ್ಕೂ ಹೆಚ್ಚು ರಾಸುಗಳ ರಕ್ಷಣೆ…ಅಂತರಸಂತೆ ಪೊಲೀಸರ ಕಾರ್ಯಾಚರಣೆ…

  • Crime
  • September 27, 2023
  • No Comment
  • 507

ಹೆಚ್.ಡಿ.ಕೋಟೆ,ಸೆ27,Tv10 ಕನ್ನಡ

ಕೇರಳಾ ರಾಜ್ಯಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 100 ಕ್ಕೂ ಹೆಚ್ಚು ರಾಸುಗಳನ್ನ ರಕ್ಷಣೆ

ಮಾಡಲಾಗಿದೆ.ಹೆಚ್.ಡಿ.ಕೋಟೆ ತಾಲೂಕು ಅಂತರಸಂತೆಯಲ್ಲಿ ಘಟನೆ ನಡೆದಿದೆ.ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಅಂತರಸಂತೆ ಠಾಣೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.ಸ್ಥಳೀಯರು ನೀಡಿದ ಮಾಹಿತಿಯನ್ನ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ.2 ಕಂಟೈನರ್ ಹಾಗೂ 5 ಬೊಲೆರೋ ವಾಹನಗಳಲ್ಲಿ ಸಾಗಿಸಲಾಗುತ್ತಿದ್ದ ವೇಳೆ ದಾಳಿ ನಡೆಸಿದ್ದಾರೆ.ಬ್ಯಾರಿಕೇಡ್ ಗಳನ್ನ ಅಳವಡಿಸಿ ಪೊಲೀಸರು ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿ ಆಗಲು ಯತ್ನಿಸಿದ್ದಾರೆ.ಬದಯಾರಿಕೇಡ್ ಗಳ ಮೇಲೇ ವಾಹನ ಚಲಾಯಿಸಿ ಎಸ್ಕೇಪ್ ಆಗಲು ಯತ್ನಿಸಿದಾಗ ಪೊಲೀಸರು ಸಿನಮೀಯ ರೀತಿಯಲ್ಲಿ ಚೇಸ್ ಮಾಡಿ ವಾಹನಗಳನ್ನ ವಶಕ್ಕೆ ಪಡೆದಿದ್ದಾರೆ.ಇಬ್ಬರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈದ್ ಮಿಲಾದ್ ಹಬ್ಬ ಹಿನ್ನಲೆ ರಾಸುಗಳನ್ನ ಕೇರಳಾಕ್ಕೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.ಹಸು,ಎಮ್ಮ,ಕರುಗಳು ಸೇರಿದಂತೆ ನೂರಾರು ರಸುಗಳನ್ನ ರಕ್ಷಿಸಲಾಗಿದೆ.ಕೆಲವು ಹಸು ಹಾಗೂ ಎಮ್ಮೆಗಳು ನಿತ್ರಾಣಗೊಂಡ ಪರಿಸ್ಥಿತಿಯಲ್ಲಿ ಕಂಡು ಬಂದಿವೆ.ರಕ್ಷಿಸಲಾದ ರಾಸುಗಳನ್ನ ಮೈಸೂರಿನ ಪಿಂಜರಾಪೋಲ್ ಸಂಸ್ಥೆಗೆ ರವಾನಿಸಲು ಪೊಲೀಸರು ಸಿದ್ದತೆ ನಡೆಸಿದ್ದಾರೆ.ಅಂತರಸಂತೆ ಠಾಣೆ ಪೊಲೀಸರು ಆರೋಪಿಗಳನ್ನ ವಿಚಾರಣೆಗೆ ಒಳಪಡಿಸಿದ್ದಾರೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *