ನಿವೇಶನ ಕೊಡಿಸುವುದಾಗಿ ವಂಚನೆ…ಮಾಜಿ ಕಾರ್ಪೊರೇಟರ್ ಹಾಗೂ ನಿವೃತ್ತ ಡಿವೈಎಸ್ಪಿ ವಿರುದ್ದ FIR…

  • Crime
  • September 28, 2023
  • No Comment
  • 3176

ಮೈಸೂರು,ಸೆ29,Tv10 ಕನ್ನಡ

ನಿವೇಶನ ಕೊಡಿಸುವುದಾಗಿ ನಂಬಿಸಿ ನಕಲಿ ದಾಖಲೆಗಳನ್ನ ಸೃಷ್ಟಿಸಿ ಅಮಾಯಕರೊಬ್ಬರಿಗೆ 12 ಲಕ್ಷ ವಂಚಿಸಿದ ಆರೋಪದ ಮೇಲೆ ಮಾಜಿ ಕಾರ್ಪೊರೇಟರ್ ಸೋಮಸುಂದರ್ ಹಾಗೂ ನಿವೃತ್ತ ಡಿವೈಎಸ್ಪಿ ವಿಜಯ್ ಕುಮಾರ್ ವಿರುದ್ದ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಮೈಸೂರಿನ ಬೋಗಾದಿ ನಿವಾಸಿ ವೆಂಕಟರಾಜು ಎಂಬುವರು ನೀಡಿದ ದೂರಿನ ಆಧಾರದ ಮೇಲೆ FIR ದಾಖಲಾಗಿದ್ದು ಸೋಮಸುಂದರ್ ರನ್ನ ವಶಕ್ಕೆ ಪಡೆದಿರುವ ಲಕ್ಷ್ಮೀಪುರಂ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಬೀದಿಬದಿಯಲ್ಲಿ ಹೋಟೆಲ್ ನಡೆಸುತ್ತಿರುವ ವೆಂಟರಾಜು ಸ್ವಂತ ಮನೆ ನಿರ್ಮಿಸುವ ಕನಸು ಹೊತ್ತು ಸ್ನೇಹಿತ ದಿನೇಶ್ ಎಂಬಾತನ ಮೂಲಕ ನಿವೇಶನ ಪಡೆಯಲು ಸೋಮಸುಂದರ್ ರವರನ್ನ ಭೇಟಿ ಮಾಡಿದ್ದಾರೆ.ಮುಡಾದಲ್ಲಿ ನಿವೇಶನ ಕೊಡಿಸುವುದಾಗಿ ನಂಬಿಸಿದ ಸೋಮಸುಂದರ್ ಆನಂದನಗರ ಬಡಾವಣೆಗೆ ವೆಂಕಟರಾಜು ರನ್ನ ಕರೆದೊಯ್ದು ಯಾರದೋ ನಿವೇಶನದ ಮುಂದೆ ನಿಲ್ಲಿಸಿ ಫೋಟೋ ತೆಗೆದು ಮುಡಾದಲ್ಲಿ ಮಂಜೂರು ಮಾಡಿಸುವುದಾಗಿ ನಂಬಿಸಿದ್ದಾರೆ.ನಂತರ ಹಂತ ಹಂತವಾಗಿ ವೆಂಕಟರಾಜು ರಿಂದ ಸೋಮಸುಂದರ್ 12 ಲಕ್ಷ ಪಡೆದಿದ್ದಾರೆ.ಹಣ ಪಡೆದ ನಂತರ ವೆಂಕಟರಾಜು ರವರಿಗೆ ಮೈಸೂರು ಮಹಾನಗರ ಪಾಲಿಕೆಯಲ್ಲಿ ಸ್ವಯಂಘೋಷಿತ ಆಸ್ತಿ ತೆರಿಗೆ ಕಟ್ಟಿದಂತೆ,ಮುಡಾ ಹಾಗೂ ಮೈಸೂರು ಮಹಾನಗರ ಪಾಲಿಕೆಯಲ್ಲಿ ತೆರಿಗೆ ಹಣ ಪಾವತಿಸಿದಂತೆ ಸೇರಿ ಹಲವು ದಾಖಲೆಗಳನ್ನ ನೀಡಿ ನಂಬಿಸಿದ್ದಾರೆ.ನಂತರ ಸದರಿ ನಿವೇಶನಕ್ಕೆ ಖಾತೆ ಮಾಡಿಸಿಕೊಡುವಂತೆ ಕೇಳಿದಾಗ ಇಲ್ಲದ ಸಬೂಬುಗಳನ್ನ ಹೇಳಿ ವಿಳಂಬ ಮಾಡಿದ್ದಾರೆ.ಶಂಕೆಗೆ ಕಾರಣಾದ ಹಿನ್ನಲೆ ವೆಂಕಟರಾಜು ರವರು ಮುಡಾ ಹಾಗೂ ಮೈಸೂರು ಮಹಾನಗರ ಪಾಲಿಕೆಗೆ ತೆರಳಿ ಸೋಮಸುಂದರ್ ನೀಡಿರುವ ದಾಖಲೆಗಳನ್ನ ಪರಿಶೀಲನೆ ನಡೆಸಿದಾಗ ನಕಲಿ ಎಂದು ಖಚಿತವಾಗಿದೆ.

ತಮ್ಮ ಹಣ ಹಿಂದಿರುಗಿಸುವಂತೆ ವೆಂಕಟರಾಜು ಒತ್ತಡ ಹೇರಿದ್ದಾರೆ.ದಿನೇಶ್ ಹಾಗೂ ವೆಂಕಟರಾಜು ರನ್ನ ಖಾಸಗಿ ಹೋಟೆಲ್ ಒಂದಕ್ಕೆ ಕರೆಸಿ ಧಂಕಿ ಹಾಕಿದ್ದಾರೆ.ನಿವೃತ್ತ ಡಿವೈಎಸ್ಪಿ ಸಮ್ಮುಖದಲ್ಲಿ ದಿನೇಶ್ ಗೆ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆಂದು ವೆಂಕಟರಾಜು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.ಈ ಹಿನ್ನಲೆ ಸೋಮಸುಂದರ್ ಹಾಗೂ ವಿಜಯ್ ಕುಮಾರ್ ವಿರುದ್ದ FIR ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *