ನಿವೇಶನ ಕೊಡಿಸುವುದಾಗಿ ವಂಚನೆ…ಮಾಜಿ ಕಾರ್ಪೊರೇಟರ್ ಹಾಗೂ ನಿವೃತ್ತ ಡಿವೈಎಸ್ಪಿ ವಿರುದ್ದ FIR…

  • Crime
  • September 28, 2023
  • No Comment
  • 3333

ಮೈಸೂರು,ಸೆ29,Tv10 ಕನ್ನಡ

ನಿವೇಶನ ಕೊಡಿಸುವುದಾಗಿ ನಂಬಿಸಿ ನಕಲಿ ದಾಖಲೆಗಳನ್ನ ಸೃಷ್ಟಿಸಿ ಅಮಾಯಕರೊಬ್ಬರಿಗೆ 12 ಲಕ್ಷ ವಂಚಿಸಿದ ಆರೋಪದ ಮೇಲೆ ಮಾಜಿ ಕಾರ್ಪೊರೇಟರ್ ಸೋಮಸುಂದರ್ ಹಾಗೂ ನಿವೃತ್ತ ಡಿವೈಎಸ್ಪಿ ವಿಜಯ್ ಕುಮಾರ್ ವಿರುದ್ದ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಮೈಸೂರಿನ ಬೋಗಾದಿ ನಿವಾಸಿ ವೆಂಕಟರಾಜು ಎಂಬುವರು ನೀಡಿದ ದೂರಿನ ಆಧಾರದ ಮೇಲೆ FIR ದಾಖಲಾಗಿದ್ದು ಸೋಮಸುಂದರ್ ರನ್ನ ವಶಕ್ಕೆ ಪಡೆದಿರುವ ಲಕ್ಷ್ಮೀಪುರಂ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಬೀದಿಬದಿಯಲ್ಲಿ ಹೋಟೆಲ್ ನಡೆಸುತ್ತಿರುವ ವೆಂಟರಾಜು ಸ್ವಂತ ಮನೆ ನಿರ್ಮಿಸುವ ಕನಸು ಹೊತ್ತು ಸ್ನೇಹಿತ ದಿನೇಶ್ ಎಂಬಾತನ ಮೂಲಕ ನಿವೇಶನ ಪಡೆಯಲು ಸೋಮಸುಂದರ್ ರವರನ್ನ ಭೇಟಿ ಮಾಡಿದ್ದಾರೆ.ಮುಡಾದಲ್ಲಿ ನಿವೇಶನ ಕೊಡಿಸುವುದಾಗಿ ನಂಬಿಸಿದ ಸೋಮಸುಂದರ್ ಆನಂದನಗರ ಬಡಾವಣೆಗೆ ವೆಂಕಟರಾಜು ರನ್ನ ಕರೆದೊಯ್ದು ಯಾರದೋ ನಿವೇಶನದ ಮುಂದೆ ನಿಲ್ಲಿಸಿ ಫೋಟೋ ತೆಗೆದು ಮುಡಾದಲ್ಲಿ ಮಂಜೂರು ಮಾಡಿಸುವುದಾಗಿ ನಂಬಿಸಿದ್ದಾರೆ.ನಂತರ ಹಂತ ಹಂತವಾಗಿ ವೆಂಕಟರಾಜು ರಿಂದ ಸೋಮಸುಂದರ್ 12 ಲಕ್ಷ ಪಡೆದಿದ್ದಾರೆ.ಹಣ ಪಡೆದ ನಂತರ ವೆಂಕಟರಾಜು ರವರಿಗೆ ಮೈಸೂರು ಮಹಾನಗರ ಪಾಲಿಕೆಯಲ್ಲಿ ಸ್ವಯಂಘೋಷಿತ ಆಸ್ತಿ ತೆರಿಗೆ ಕಟ್ಟಿದಂತೆ,ಮುಡಾ ಹಾಗೂ ಮೈಸೂರು ಮಹಾನಗರ ಪಾಲಿಕೆಯಲ್ಲಿ ತೆರಿಗೆ ಹಣ ಪಾವತಿಸಿದಂತೆ ಸೇರಿ ಹಲವು ದಾಖಲೆಗಳನ್ನ ನೀಡಿ ನಂಬಿಸಿದ್ದಾರೆ.ನಂತರ ಸದರಿ ನಿವೇಶನಕ್ಕೆ ಖಾತೆ ಮಾಡಿಸಿಕೊಡುವಂತೆ ಕೇಳಿದಾಗ ಇಲ್ಲದ ಸಬೂಬುಗಳನ್ನ ಹೇಳಿ ವಿಳಂಬ ಮಾಡಿದ್ದಾರೆ.ಶಂಕೆಗೆ ಕಾರಣಾದ ಹಿನ್ನಲೆ ವೆಂಕಟರಾಜು ರವರು ಮುಡಾ ಹಾಗೂ ಮೈಸೂರು ಮಹಾನಗರ ಪಾಲಿಕೆಗೆ ತೆರಳಿ ಸೋಮಸುಂದರ್ ನೀಡಿರುವ ದಾಖಲೆಗಳನ್ನ ಪರಿಶೀಲನೆ ನಡೆಸಿದಾಗ ನಕಲಿ ಎಂದು ಖಚಿತವಾಗಿದೆ.

ತಮ್ಮ ಹಣ ಹಿಂದಿರುಗಿಸುವಂತೆ ವೆಂಕಟರಾಜು ಒತ್ತಡ ಹೇರಿದ್ದಾರೆ.ದಿನೇಶ್ ಹಾಗೂ ವೆಂಕಟರಾಜು ರನ್ನ ಖಾಸಗಿ ಹೋಟೆಲ್ ಒಂದಕ್ಕೆ ಕರೆಸಿ ಧಂಕಿ ಹಾಕಿದ್ದಾರೆ.ನಿವೃತ್ತ ಡಿವೈಎಸ್ಪಿ ಸಮ್ಮುಖದಲ್ಲಿ ದಿನೇಶ್ ಗೆ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆಂದು ವೆಂಕಟರಾಜು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.ಈ ಹಿನ್ನಲೆ ಸೋಮಸುಂದರ್ ಹಾಗೂ ವಿಜಯ್ ಕುಮಾರ್ ವಿರುದ್ದ FIR ದಾಖಲಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *