ನಿವೇಶನ ಕೊಡಿಸುವುದಾಗಿ ವಂಚನೆ…ಮಾಜಿ ಕಾರ್ಪೊರೇಟರ್ ಹಾಗೂ ನಿವೃತ್ತ ಡಿವೈಎಸ್ಪಿ ವಿರುದ್ದ FIR…

  • Crime
  • September 28, 2023
  • No Comment
  • 3153

ಮೈಸೂರು,ಸೆ29,Tv10 ಕನ್ನಡ

ನಿವೇಶನ ಕೊಡಿಸುವುದಾಗಿ ನಂಬಿಸಿ ನಕಲಿ ದಾಖಲೆಗಳನ್ನ ಸೃಷ್ಟಿಸಿ ಅಮಾಯಕರೊಬ್ಬರಿಗೆ 12 ಲಕ್ಷ ವಂಚಿಸಿದ ಆರೋಪದ ಮೇಲೆ ಮಾಜಿ ಕಾರ್ಪೊರೇಟರ್ ಸೋಮಸುಂದರ್ ಹಾಗೂ ನಿವೃತ್ತ ಡಿವೈಎಸ್ಪಿ ವಿಜಯ್ ಕುಮಾರ್ ವಿರುದ್ದ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಮೈಸೂರಿನ ಬೋಗಾದಿ ನಿವಾಸಿ ವೆಂಕಟರಾಜು ಎಂಬುವರು ನೀಡಿದ ದೂರಿನ ಆಧಾರದ ಮೇಲೆ FIR ದಾಖಲಾಗಿದ್ದು ಸೋಮಸುಂದರ್ ರನ್ನ ವಶಕ್ಕೆ ಪಡೆದಿರುವ ಲಕ್ಷ್ಮೀಪುರಂ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಬೀದಿಬದಿಯಲ್ಲಿ ಹೋಟೆಲ್ ನಡೆಸುತ್ತಿರುವ ವೆಂಟರಾಜು ಸ್ವಂತ ಮನೆ ನಿರ್ಮಿಸುವ ಕನಸು ಹೊತ್ತು ಸ್ನೇಹಿತ ದಿನೇಶ್ ಎಂಬಾತನ ಮೂಲಕ ನಿವೇಶನ ಪಡೆಯಲು ಸೋಮಸುಂದರ್ ರವರನ್ನ ಭೇಟಿ ಮಾಡಿದ್ದಾರೆ.ಮುಡಾದಲ್ಲಿ ನಿವೇಶನ ಕೊಡಿಸುವುದಾಗಿ ನಂಬಿಸಿದ ಸೋಮಸುಂದರ್ ಆನಂದನಗರ ಬಡಾವಣೆಗೆ ವೆಂಕಟರಾಜು ರನ್ನ ಕರೆದೊಯ್ದು ಯಾರದೋ ನಿವೇಶನದ ಮುಂದೆ ನಿಲ್ಲಿಸಿ ಫೋಟೋ ತೆಗೆದು ಮುಡಾದಲ್ಲಿ ಮಂಜೂರು ಮಾಡಿಸುವುದಾಗಿ ನಂಬಿಸಿದ್ದಾರೆ.ನಂತರ ಹಂತ ಹಂತವಾಗಿ ವೆಂಕಟರಾಜು ರಿಂದ ಸೋಮಸುಂದರ್ 12 ಲಕ್ಷ ಪಡೆದಿದ್ದಾರೆ.ಹಣ ಪಡೆದ ನಂತರ ವೆಂಕಟರಾಜು ರವರಿಗೆ ಮೈಸೂರು ಮಹಾನಗರ ಪಾಲಿಕೆಯಲ್ಲಿ ಸ್ವಯಂಘೋಷಿತ ಆಸ್ತಿ ತೆರಿಗೆ ಕಟ್ಟಿದಂತೆ,ಮುಡಾ ಹಾಗೂ ಮೈಸೂರು ಮಹಾನಗರ ಪಾಲಿಕೆಯಲ್ಲಿ ತೆರಿಗೆ ಹಣ ಪಾವತಿಸಿದಂತೆ ಸೇರಿ ಹಲವು ದಾಖಲೆಗಳನ್ನ ನೀಡಿ ನಂಬಿಸಿದ್ದಾರೆ.ನಂತರ ಸದರಿ ನಿವೇಶನಕ್ಕೆ ಖಾತೆ ಮಾಡಿಸಿಕೊಡುವಂತೆ ಕೇಳಿದಾಗ ಇಲ್ಲದ ಸಬೂಬುಗಳನ್ನ ಹೇಳಿ ವಿಳಂಬ ಮಾಡಿದ್ದಾರೆ.ಶಂಕೆಗೆ ಕಾರಣಾದ ಹಿನ್ನಲೆ ವೆಂಕಟರಾಜು ರವರು ಮುಡಾ ಹಾಗೂ ಮೈಸೂರು ಮಹಾನಗರ ಪಾಲಿಕೆಗೆ ತೆರಳಿ ಸೋಮಸುಂದರ್ ನೀಡಿರುವ ದಾಖಲೆಗಳನ್ನ ಪರಿಶೀಲನೆ ನಡೆಸಿದಾಗ ನಕಲಿ ಎಂದು ಖಚಿತವಾಗಿದೆ.

ತಮ್ಮ ಹಣ ಹಿಂದಿರುಗಿಸುವಂತೆ ವೆಂಕಟರಾಜು ಒತ್ತಡ ಹೇರಿದ್ದಾರೆ.ದಿನೇಶ್ ಹಾಗೂ ವೆಂಕಟರಾಜು ರನ್ನ ಖಾಸಗಿ ಹೋಟೆಲ್ ಒಂದಕ್ಕೆ ಕರೆಸಿ ಧಂಕಿ ಹಾಕಿದ್ದಾರೆ.ನಿವೃತ್ತ ಡಿವೈಎಸ್ಪಿ ಸಮ್ಮುಖದಲ್ಲಿ ದಿನೇಶ್ ಗೆ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆಂದು ವೆಂಕಟರಾಜು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.ಈ ಹಿನ್ನಲೆ ಸೋಮಸುಂದರ್ ಹಾಗೂ ವಿಜಯ್ ಕುಮಾರ್ ವಿರುದ್ದ FIR ದಾಖಲಾಗಿದೆ…

Spread the love

Related post

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…
BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು…

Leave a Reply

Your email address will not be published. Required fields are marked *