ಸರ್ಕಾರಿ ಹಾಗೂ ಪಿಟಿಸಿಎಲ್ ಜಮೀನುಗಳನ್ನ ಗುರುತಿಸಿ ಭೂಮಿ ತತ್ರಾಂಶದಲ್ಲಿ ದಾಖಲಿಸಲು ಅಂತಿಮ ಗಡುವು…ಸರ್ಕಾರದಿಂದಮಹತ್ವದ ಆದೇಶ…

ಮೈಸೂರು,ಅ2,Tv10 ಕನ್ನಡ

ಸರ್ಕಾರಿ ಜಮೀನು ಹಾಗೂ ಪಿಟಿಸಿಎಲ್ ಜಮೀನುಗಳ ರಕ್ಷಣೆಗೆ ಸರ್ಕಾರ ಸಜ್ಜಾಗಿದೆ.ಅಕ್ರಮವಾಗಿ ಭೂವರ್ತನೆ ಮಾಡಿಕೊಳ್ಳುವುದು,ಖರಾಬು ಹಾಗೂ ಗೋಮಾಳ ಜಮೀನುಗಳನ್ನ ಕಬಳಿಸುವವರ ವಿರುದ್ದ ಸರ್ಕಾರ ಸಮರ ಸಾರಿದೆ.ಸರ್ಕಾರದ ಹಿತಾಸಕ್ತಿ ಒಳಗೊಂಡು ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುವ ಜಮೀನುಗಳು ಹಾಗೂ ಪಿಟಿಸಿಎಲ್ ಕಾಯ್ದೆಗೆ ಒಳಪಡುವ ಜಮೀನುಗಳು,ಪ್ರಾಥಮಿಕ ಅಧಿಸೂಚನೆ ಹಾಗೂ ಅಂತಿ ಅಧಿಸೂಚನೆ ಹೊರಡಿಸಿರುವಂತಹ ಜಮೀನುಗಳನ್ನ ಗುರುತಿಸಿ ಪಟ್ಟಿಮಾಡಿ ಭೂಮಿ ತತ್ರಾಂಶದಲ್ಲಿ ಪಹಣಿಗಳನ್ನ ಫ್ಲಾಗ್ ಮಾಡಲು ಸೆಪ್ಟೆಂಬರ್ 30 ಕ್ಕೆ ನಿಗದಿ ಪಡಿಸಲಾಗಿತ್ತು.ಇದುವರೆಗೆ ಈ ಕಾರ್ಯ ಪೂರ್ಣಗೊಳ್ಳದ ಹಿನ್ನಲೆ ಕಂದಾಯ ಆಯುಕ್ತಾಲಯವು ಗಡುವನ್ನ ವಿಸ್ತರಿಸಿದೆ.ಅಕ್ಟೋಬರ್ 16,2023 ರ ಒಳಗೆ ತತ್ರಾಂಶದಲ್ಲಿ ದಾಖಲಿಸಿ ಫ್ಲಾಗ್ ಮಾಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ.ಹಾಗೊಂದು ವೇಳೆ ಫ್ಲಾಗ್ ಮಾಡುವ ಕೆಲಸವನ್ನ ಬಾಕಿ ಉಳಿಸಿದ್ದಲ್ಲಿ ಆಯಾ ತಹಸೀಲ್ದಾರ್ ಗಳನ್ಮ ನೇರ ಹೊಣೆಗಾರರನ್ನಾಗಿ ಮಾಡುವುದಾಗಿ ಖಡಕ್ ಸೂಚನೆ ನೀಡಲಾಗಿದೆ…

Spread the love

Related post

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…

Leave a Reply

Your email address will not be published. Required fields are marked *