ಬೆಂಗಳೂರು:ಪಟಾಕಿ ದುರಂತ…13 ಮಂದಿ ಸಜೀವ ದಹನ…

  • Crime
  • October 8, 2023
  • No Comment
  • 307

ಬೆಂಗಳೂರು,ಅ7,Tv10 ಕನ್ನಡ

ಪಟಾಕಿ ದುರಂತದಲ್ಲಿ 13 ಕಾರ್ಮಿಕರು ಸಜೀವ ದಹನವಾದ ಘಟನೆ ಬೆಂಗಳೂರಿನ ಆನೇಕಲ್ ನ ಅತ್ತಿಬೆಲೆಯಲ್ಲಿ ನಡೆದಿದೆ.ಇಂದು ಮಧ್ಯಾಹ್ನ ಪಟಾಕಿ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡು 13 ಮಂದಿ ನಾಪತ್ತೆಯಾಗಿದ್ದರು.
ಆದರೆ, ನಾಪತ್ತೆಯಾಗಿದ್ದ 13 ಕಾರ್ಮಿಕರು ಸಜೀವ ದಹನವಾಗಿದ್ದು, ಮೃತದೇಹಗಳನ್ನು ಹೊರಗೆ ತೆಗೆಯಲಾಗುತ್ತಿದೆ.
ದೀಪಾವಳಿ ಹಬ್ಬಕ್ಕಾಗಿ ಮಳಿಗೆಯಲ್ಲಿ ಹೆಚ್ಚು ಪಟಾಕಿಗಳನ್ನು ಶೇಖರಣೆ ಮಾಡಲಾಗಿತ್ತು.ಆದರೆ ಏಕಾಏಕಿ ಪಟಾಕಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ದುರಂತ ಸಂಭವಿಸಿದೆ.
ಮಳಿಗೆಯಲ್ಲಿ 20 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ನವೀನ್ ಎಂಬುವರಿಗೆ ಸೇರಿದ ಪಟಾಕಿ ಮಳಿಗೆಯಲ್ಲಿ ದುರಂತ ನಡೆದಿದೆ. ಪಟಾಕಿ ಬಾಕ್ಸ್‌ಗಳನ್ನು ತಂದು ಲಾರಿಯಿಂದ ಅನ್‌ಲೋಡ್‌ ಮಾಡುವಾಗ ಈ ಅವಘಡ ಸಂಭವಿಸಿದೆ.
ಮಳಿಗೆ ಪಕ್ಕದಲ್ಲಿಯೇ ಇದ್ದ ಗೋದಾಮಿಗೂ ಬೆಂಕಿ ತಗುಲಿದೆ. ಅಕ್ಕ-ಪಕ್ಕದಲ್ಲಿದ್ದ ನಾಲ್ಕೈದು ಅಂಗಡಿಗಳು, ಒಂದು ಕ್ಯಾಂಟರ್ ಸೇರಿದಂತೆ ನಾಲ್ಕೈದು ವಾಹನಗಳು ಸುಟ್ಟು ಭಸ್ಮವಾಗಿವೆ.
ಹೆದ್ದಾರಿ ಪಕ್ಕದಲ್ಲಿಯೇ ಪಟಾಕಿ ಮಳಿಗೆ ಇರುವುದರಿಂದ ನೂರಾರು ಜನರು ಜಮಾಯಿಸಿದ್ದರು. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಸಾಹಸ ಪಟ್ಟಿದ್ದಾರೆ.
ಪಟಾಕಿ ಮಳಿಗೆಯಲ್ಲಿ ಬೆಂಕಿ ತೀವ್ರತೆ ಹೆಚ್ಚಾಗುತ್ತಿದ್ದು, ಸಹಾಯಕ್ಕೆ ತಮಿಳುನಾಡು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದಾರೆ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಸ್ಥಳೀಯ ತಹಸೀಲ್ದಾರ್ ಶಿವಪ್ಪ ಲಮಾಣಿ, ಜಿಲ್ಲಾ ಅಗ್ನಿಶಾಮಕ ದಳ ಅಧಿಕಾರಿ ನಾಗೇಶ್ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *