ಬೆಂಗಳೂರು:ಪಟಾಕಿ ದುರಂತ…13 ಮಂದಿ ಸಜೀವ ದಹನ…

  • Crime
  • October 8, 2023
  • No Comment
  • 297

ಬೆಂಗಳೂರು,ಅ7,Tv10 ಕನ್ನಡ

ಪಟಾಕಿ ದುರಂತದಲ್ಲಿ 13 ಕಾರ್ಮಿಕರು ಸಜೀವ ದಹನವಾದ ಘಟನೆ ಬೆಂಗಳೂರಿನ ಆನೇಕಲ್ ನ ಅತ್ತಿಬೆಲೆಯಲ್ಲಿ ನಡೆದಿದೆ.ಇಂದು ಮಧ್ಯಾಹ್ನ ಪಟಾಕಿ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡು 13 ಮಂದಿ ನಾಪತ್ತೆಯಾಗಿದ್ದರು.
ಆದರೆ, ನಾಪತ್ತೆಯಾಗಿದ್ದ 13 ಕಾರ್ಮಿಕರು ಸಜೀವ ದಹನವಾಗಿದ್ದು, ಮೃತದೇಹಗಳನ್ನು ಹೊರಗೆ ತೆಗೆಯಲಾಗುತ್ತಿದೆ.
ದೀಪಾವಳಿ ಹಬ್ಬಕ್ಕಾಗಿ ಮಳಿಗೆಯಲ್ಲಿ ಹೆಚ್ಚು ಪಟಾಕಿಗಳನ್ನು ಶೇಖರಣೆ ಮಾಡಲಾಗಿತ್ತು.ಆದರೆ ಏಕಾಏಕಿ ಪಟಾಕಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ದುರಂತ ಸಂಭವಿಸಿದೆ.
ಮಳಿಗೆಯಲ್ಲಿ 20 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ನವೀನ್ ಎಂಬುವರಿಗೆ ಸೇರಿದ ಪಟಾಕಿ ಮಳಿಗೆಯಲ್ಲಿ ದುರಂತ ನಡೆದಿದೆ. ಪಟಾಕಿ ಬಾಕ್ಸ್‌ಗಳನ್ನು ತಂದು ಲಾರಿಯಿಂದ ಅನ್‌ಲೋಡ್‌ ಮಾಡುವಾಗ ಈ ಅವಘಡ ಸಂಭವಿಸಿದೆ.
ಮಳಿಗೆ ಪಕ್ಕದಲ್ಲಿಯೇ ಇದ್ದ ಗೋದಾಮಿಗೂ ಬೆಂಕಿ ತಗುಲಿದೆ. ಅಕ್ಕ-ಪಕ್ಕದಲ್ಲಿದ್ದ ನಾಲ್ಕೈದು ಅಂಗಡಿಗಳು, ಒಂದು ಕ್ಯಾಂಟರ್ ಸೇರಿದಂತೆ ನಾಲ್ಕೈದು ವಾಹನಗಳು ಸುಟ್ಟು ಭಸ್ಮವಾಗಿವೆ.
ಹೆದ್ದಾರಿ ಪಕ್ಕದಲ್ಲಿಯೇ ಪಟಾಕಿ ಮಳಿಗೆ ಇರುವುದರಿಂದ ನೂರಾರು ಜನರು ಜಮಾಯಿಸಿದ್ದರು. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಸಾಹಸ ಪಟ್ಟಿದ್ದಾರೆ.
ಪಟಾಕಿ ಮಳಿಗೆಯಲ್ಲಿ ಬೆಂಕಿ ತೀವ್ರತೆ ಹೆಚ್ಚಾಗುತ್ತಿದ್ದು, ಸಹಾಯಕ್ಕೆ ತಮಿಳುನಾಡು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದಾರೆ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಸ್ಥಳೀಯ ತಹಸೀಲ್ದಾರ್ ಶಿವಪ್ಪ ಲಮಾಣಿ, ಜಿಲ್ಲಾ ಅಗ್ನಿಶಾಮಕ ದಳ ಅಧಿಕಾರಿ ನಾಗೇಶ್ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *