ಸಾಂಪ್ರದಾಯಿಕ ಹೆಸರಲ್ಲಿ ಅದ್ದೂರಿ ದಸರಾ ಬೇಡ…ರೈತ ಮುಖಂಡ ಕುರುಬೂರು ಶಾಂತಕುಮಾರ್…

ಮೈಸೂರು,ಅ9,Tv10 ಕನ್ನಡ

ಸಾಂಪ್ರದಾಯಿಕ ದಸರಾ ಹೆಸರಿನಲ್ಲಿ ಅದ್ದೂರಿ ದಸರಾ ನಡೆಸುವುದು ಬೇಡ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.

ಮಳೆ, ಬೆಳೆ ಇಲ್ಲದೆ ಬರದ ಕಾರ್ಮೋಡ ಮೂಡಿರುವ ಹಿನ್ನೆಲೆಯಲ್ಲಿ ರಾಜ್ಯದ ನೂರಾರು ತಾಲೂಕುಗಳು ಬರಪೀಡಿತ ಪ್ರದೇಶವಾಗಿ ಲಕ್ಷಾಂತರ ರೈತರು ಬೆಳೆ ಇಲ್ಲದೆ ಜೀವನ ನಡೆಸಲು ಕಂಗಾಲಾಗಿದ್ದಾರೆ. ವಿಶ್ವವಿಖ್ಯಾತ ದಸರಾ ಮಹೋತ್ಸವದ ಪೂಜಾ ಕಾರ್ಯಕ್ರಮಗಳು ಎಂದಿನಂತೆ ನಡೆಯಲಿ. ದಸರಾ ಮಹೋತ್ಸವದ ಹೆಸರಿನಲ್ಲಿ ನೂರಕ್ಕೂ ಹೆಚ್ಚು ಕಿ.ಮೀ ವ್ಯಾಪ್ತಿಯಲ್ಲಿ ವಿದ್ಯುತ್ ದೀಪಗಳನ್ನು ಅಲಂಕರಿಸಿ ಝಗಮಗಿಸಿದರೆ ರೈತನ ನೋವು ನಿವಾರಣೆಯಾಗುವುದಿಲ್ಲ. ಮೈಸೂರು ನಗರ ಹೊರತುಪಡಿಸಿ ಎಲ್ಲಾ ತಾಲೂಕುಗಳು ಮಂಡ್ಯ ಚಾಮರಾಜನಗರ ಹಾಸನ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳು ಬರಪೀಡಿತವಾಗಿದೆ. ಮೈಸೂರಿನ ನಗರದಲ್ಲಿ ವಿದ್ಯುತ್ ದೀಪಾಲಂಕರ ಮಾಡಿ ಹಾಗೂ ಯುವ ದಸಾ ಹೆಸರಿನಲ್ಲಿ ಹೊರರಾಜ್ಯದ ಕಲಾವಿದರನ್ನು ತರಿಸಿ ಕೇಕೆಹಾಕಿ ಅವರಿಗೆ ಲಕ್ಷಾಂತರ ನೀಡಿ ನಮ್ಮ ರೈತರಿಗೆ ಅವಮಾನ ಮಾಡಬೇಡಿ. ಹುಲಿ ಚಿರತೆಗಳ ದಾಳಿಯಿಂದ ರೈತರ ಮಕ್ಕಳು ಜೀವ ಕಳೆದುಕೊಂಡಿದ್ದಾರೆ. ನಮ್ಮ ರೈತರ ನೋವಿಗೆ ಸ್ಪಂದಿಸಬೇಕಾದರೆ ಸರಳ ಹಾಗೂ ಸಾಂಪ್ರದಾಯಿಕ ದಸರಾ ಮಾತ್ರ ನಡೆಸಲಿ. ನಾಡಿನ ಕಲೆ ಹಾಗೂ ಸಂಸ್ಕೃತಿಯನ್ನು ಬಿಂಬಿಸುವ ಉತ್ಸವವಾಗಬೇಕು. ದಸರಾ ಮಹೋತ್ಸವದಲ್ಲಿ ರೈತ ದಸರಾ ಸೇರಿದಂತೆ ವಿವಿಧ ಉತ್ಸವಗಳು ಸರಳವಾಗಿ ನಡೆಯಲಿ. ನವರಾತ್ರಿ ಉತ್ಸವ ಸರಳವಾಗಿ ಆಚರಿಸಿ ಚಾಮುಂಡೇಶ್ವರಿ ದೇವಿಗೆ ಪೂಜಾ ಕೈಂಕರ್ಯಗಳು ನಡೆದು ಸಕಾಲಕ್ಕೆ ಮಳೆ ಬೆಳೆ ಬಂದು ರೈತರು ಸಮೃದ್ಧಿಯಾಗಿ ಬೆಳೆ ಬೆಳೆಯುವಂತಾಗಲಿ. ಸರ್ಕಾರ ಈಗಲಾದರೂ ಎಚ್ಚೆತ್ತು ಸರಳ ಹಾಗೂ ಸಾಂಪ್ರದಾಯಿಕ ದಸರಾ ಮಹೋತ್ಸವ ನಡೆಸಲಿ ಎಂದು
ಕುರುಬೂರು ಶಾಂತಕುಮಾರ್ ಸಲಹೆ ನೀಡಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *