ಸಾಂಪ್ರದಾಯಿಕ ಹೆಸರಲ್ಲಿ ಅದ್ದೂರಿ ದಸರಾ ಬೇಡ…ರೈತ ಮುಖಂಡ ಕುರುಬೂರು ಶಾಂತಕುಮಾರ್…

ಮೈಸೂರು,ಅ9,Tv10 ಕನ್ನಡ

ಸಾಂಪ್ರದಾಯಿಕ ದಸರಾ ಹೆಸರಿನಲ್ಲಿ ಅದ್ದೂರಿ ದಸರಾ ನಡೆಸುವುದು ಬೇಡ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.

ಮಳೆ, ಬೆಳೆ ಇಲ್ಲದೆ ಬರದ ಕಾರ್ಮೋಡ ಮೂಡಿರುವ ಹಿನ್ನೆಲೆಯಲ್ಲಿ ರಾಜ್ಯದ ನೂರಾರು ತಾಲೂಕುಗಳು ಬರಪೀಡಿತ ಪ್ರದೇಶವಾಗಿ ಲಕ್ಷಾಂತರ ರೈತರು ಬೆಳೆ ಇಲ್ಲದೆ ಜೀವನ ನಡೆಸಲು ಕಂಗಾಲಾಗಿದ್ದಾರೆ. ವಿಶ್ವವಿಖ್ಯಾತ ದಸರಾ ಮಹೋತ್ಸವದ ಪೂಜಾ ಕಾರ್ಯಕ್ರಮಗಳು ಎಂದಿನಂತೆ ನಡೆಯಲಿ. ದಸರಾ ಮಹೋತ್ಸವದ ಹೆಸರಿನಲ್ಲಿ ನೂರಕ್ಕೂ ಹೆಚ್ಚು ಕಿ.ಮೀ ವ್ಯಾಪ್ತಿಯಲ್ಲಿ ವಿದ್ಯುತ್ ದೀಪಗಳನ್ನು ಅಲಂಕರಿಸಿ ಝಗಮಗಿಸಿದರೆ ರೈತನ ನೋವು ನಿವಾರಣೆಯಾಗುವುದಿಲ್ಲ. ಮೈಸೂರು ನಗರ ಹೊರತುಪಡಿಸಿ ಎಲ್ಲಾ ತಾಲೂಕುಗಳು ಮಂಡ್ಯ ಚಾಮರಾಜನಗರ ಹಾಸನ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳು ಬರಪೀಡಿತವಾಗಿದೆ. ಮೈಸೂರಿನ ನಗರದಲ್ಲಿ ವಿದ್ಯುತ್ ದೀಪಾಲಂಕರ ಮಾಡಿ ಹಾಗೂ ಯುವ ದಸಾ ಹೆಸರಿನಲ್ಲಿ ಹೊರರಾಜ್ಯದ ಕಲಾವಿದರನ್ನು ತರಿಸಿ ಕೇಕೆಹಾಕಿ ಅವರಿಗೆ ಲಕ್ಷಾಂತರ ನೀಡಿ ನಮ್ಮ ರೈತರಿಗೆ ಅವಮಾನ ಮಾಡಬೇಡಿ. ಹುಲಿ ಚಿರತೆಗಳ ದಾಳಿಯಿಂದ ರೈತರ ಮಕ್ಕಳು ಜೀವ ಕಳೆದುಕೊಂಡಿದ್ದಾರೆ. ನಮ್ಮ ರೈತರ ನೋವಿಗೆ ಸ್ಪಂದಿಸಬೇಕಾದರೆ ಸರಳ ಹಾಗೂ ಸಾಂಪ್ರದಾಯಿಕ ದಸರಾ ಮಾತ್ರ ನಡೆಸಲಿ. ನಾಡಿನ ಕಲೆ ಹಾಗೂ ಸಂಸ್ಕೃತಿಯನ್ನು ಬಿಂಬಿಸುವ ಉತ್ಸವವಾಗಬೇಕು. ದಸರಾ ಮಹೋತ್ಸವದಲ್ಲಿ ರೈತ ದಸರಾ ಸೇರಿದಂತೆ ವಿವಿಧ ಉತ್ಸವಗಳು ಸರಳವಾಗಿ ನಡೆಯಲಿ. ನವರಾತ್ರಿ ಉತ್ಸವ ಸರಳವಾಗಿ ಆಚರಿಸಿ ಚಾಮುಂಡೇಶ್ವರಿ ದೇವಿಗೆ ಪೂಜಾ ಕೈಂಕರ್ಯಗಳು ನಡೆದು ಸಕಾಲಕ್ಕೆ ಮಳೆ ಬೆಳೆ ಬಂದು ರೈತರು ಸಮೃದ್ಧಿಯಾಗಿ ಬೆಳೆ ಬೆಳೆಯುವಂತಾಗಲಿ. ಸರ್ಕಾರ ಈಗಲಾದರೂ ಎಚ್ಚೆತ್ತು ಸರಳ ಹಾಗೂ ಸಾಂಪ್ರದಾಯಿಕ ದಸರಾ ಮಹೋತ್ಸವ ನಡೆಸಲಿ ಎಂದು
ಕುರುಬೂರು ಶಾಂತಕುಮಾರ್ ಸಲಹೆ ನೀಡಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *