ಸಾಂಪ್ರದಾಯಿಕ ಹೆಸರಲ್ಲಿ ಅದ್ದೂರಿ ದಸರಾ ಬೇಡ…ರೈತ ಮುಖಂಡ ಕುರುಬೂರು ಶಾಂತಕುಮಾರ್…

ಮೈಸೂರು,ಅ9,Tv10 ಕನ್ನಡ

ಸಾಂಪ್ರದಾಯಿಕ ದಸರಾ ಹೆಸರಿನಲ್ಲಿ ಅದ್ದೂರಿ ದಸರಾ ನಡೆಸುವುದು ಬೇಡ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.

ಮಳೆ, ಬೆಳೆ ಇಲ್ಲದೆ ಬರದ ಕಾರ್ಮೋಡ ಮೂಡಿರುವ ಹಿನ್ನೆಲೆಯಲ್ಲಿ ರಾಜ್ಯದ ನೂರಾರು ತಾಲೂಕುಗಳು ಬರಪೀಡಿತ ಪ್ರದೇಶವಾಗಿ ಲಕ್ಷಾಂತರ ರೈತರು ಬೆಳೆ ಇಲ್ಲದೆ ಜೀವನ ನಡೆಸಲು ಕಂಗಾಲಾಗಿದ್ದಾರೆ. ವಿಶ್ವವಿಖ್ಯಾತ ದಸರಾ ಮಹೋತ್ಸವದ ಪೂಜಾ ಕಾರ್ಯಕ್ರಮಗಳು ಎಂದಿನಂತೆ ನಡೆಯಲಿ. ದಸರಾ ಮಹೋತ್ಸವದ ಹೆಸರಿನಲ್ಲಿ ನೂರಕ್ಕೂ ಹೆಚ್ಚು ಕಿ.ಮೀ ವ್ಯಾಪ್ತಿಯಲ್ಲಿ ವಿದ್ಯುತ್ ದೀಪಗಳನ್ನು ಅಲಂಕರಿಸಿ ಝಗಮಗಿಸಿದರೆ ರೈತನ ನೋವು ನಿವಾರಣೆಯಾಗುವುದಿಲ್ಲ. ಮೈಸೂರು ನಗರ ಹೊರತುಪಡಿಸಿ ಎಲ್ಲಾ ತಾಲೂಕುಗಳು ಮಂಡ್ಯ ಚಾಮರಾಜನಗರ ಹಾಸನ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳು ಬರಪೀಡಿತವಾಗಿದೆ. ಮೈಸೂರಿನ ನಗರದಲ್ಲಿ ವಿದ್ಯುತ್ ದೀಪಾಲಂಕರ ಮಾಡಿ ಹಾಗೂ ಯುವ ದಸಾ ಹೆಸರಿನಲ್ಲಿ ಹೊರರಾಜ್ಯದ ಕಲಾವಿದರನ್ನು ತರಿಸಿ ಕೇಕೆಹಾಕಿ ಅವರಿಗೆ ಲಕ್ಷಾಂತರ ನೀಡಿ ನಮ್ಮ ರೈತರಿಗೆ ಅವಮಾನ ಮಾಡಬೇಡಿ. ಹುಲಿ ಚಿರತೆಗಳ ದಾಳಿಯಿಂದ ರೈತರ ಮಕ್ಕಳು ಜೀವ ಕಳೆದುಕೊಂಡಿದ್ದಾರೆ. ನಮ್ಮ ರೈತರ ನೋವಿಗೆ ಸ್ಪಂದಿಸಬೇಕಾದರೆ ಸರಳ ಹಾಗೂ ಸಾಂಪ್ರದಾಯಿಕ ದಸರಾ ಮಾತ್ರ ನಡೆಸಲಿ. ನಾಡಿನ ಕಲೆ ಹಾಗೂ ಸಂಸ್ಕೃತಿಯನ್ನು ಬಿಂಬಿಸುವ ಉತ್ಸವವಾಗಬೇಕು. ದಸರಾ ಮಹೋತ್ಸವದಲ್ಲಿ ರೈತ ದಸರಾ ಸೇರಿದಂತೆ ವಿವಿಧ ಉತ್ಸವಗಳು ಸರಳವಾಗಿ ನಡೆಯಲಿ. ನವರಾತ್ರಿ ಉತ್ಸವ ಸರಳವಾಗಿ ಆಚರಿಸಿ ಚಾಮುಂಡೇಶ್ವರಿ ದೇವಿಗೆ ಪೂಜಾ ಕೈಂಕರ್ಯಗಳು ನಡೆದು ಸಕಾಲಕ್ಕೆ ಮಳೆ ಬೆಳೆ ಬಂದು ರೈತರು ಸಮೃದ್ಧಿಯಾಗಿ ಬೆಳೆ ಬೆಳೆಯುವಂತಾಗಲಿ. ಸರ್ಕಾರ ಈಗಲಾದರೂ ಎಚ್ಚೆತ್ತು ಸರಳ ಹಾಗೂ ಸಾಂಪ್ರದಾಯಿಕ ದಸರಾ ಮಹೋತ್ಸವ ನಡೆಸಲಿ ಎಂದು
ಕುರುಬೂರು ಶಾಂತಕುಮಾರ್ ಸಲಹೆ ನೀಡಿದ್ದಾರೆ…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *