ಕುವೆಂಪುನಗರ ಪೊಲೀಸರ ಕಾರ್ಯಾಚರಣೆ…ಬಾಗಿಲು ಮೀಟಿ ಕಳುವು ಮಾಡುತ್ತಿದ್ದ ಖತರ್ ನಾಕ್ ಕಳ್ಳನ ಬಂಧನ…

  • Crime
  • October 12, 2023
  • No Comment
  • 710

ಮೈಸೂರು,ಅ12,Tv10 ಕನ್ನಡ

ಮನೆ ಬಾಗಿಲು ಮೀಟಿ ಕನ್ನ ಕಳುವು ಮಾಡುತ್ತಿದ್ದ ಕತರ್ ನಾಕ್ ಕಳ್ಳನನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತನಿಂದ 1.5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಪದಾರ್ಥಗಳನ್ನ ವಶಪಡಿಸಿಕೊಂಡಿದ್ದಾರೆ.ಅಲ್ಲದೆ ಕಳ್ಳತನದ ಹಣದಲ್ಲಿ ಖರೀದಿಸಿದ್ದ ಟಾಟಾ ಗೂಡ್ಸ್ ವಾಹನವನ್ನೂ ಸಹ ವಶಪಡಿಸಿಕೊಂಡಿದ್ದಾರೆ.ಯೆರಗನಹಳ್ಳಿ ನಿವಾಸಿ ಕೃಷ್ಣಮೂರ್ತಿ(35) ಬಂಧಿತ ಆರೋಪಿ.ಈ ಹಿಂದೆ ಆರೋಪಿ ಕೃಷ್ಣಮೂರ್ತಿ ಶ್ರೀರಾಂಪುರ ಬಡಾವಣೆಯ ಎಸ್.ಬಿ.ಎಂ.ಕಾಲೋನಿಯಲ್ಲಿರುವ ನಂಜುಂಡಸ್ವಾಮಿ ಎಂಬುವರಿಗೆ ಸೇರಿದ ಮನೆ ಬಾಗಿಲು ಮೀಟಿ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದ.ಈ ಕುರಿತಂತೆ ಕುವೆಂಪು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಕಾರ್ಯೋನ್ಮುಖರಾದ ಕುವೆಂಪುನಗರ ಠಾಣೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಬಂಧಿಸಿದ್ದಾರೆ.ಕುವೆಂಪುನಗರ ಠಾಣೆಯ ಎರಡು ಕನ್ನಕಳುವು ಪ್ರಕರಣ ಹಾಗೂ ಮೇಟಗಳ್ಳಿ ಠಾಣೆಯ ಎರಡು ಕನ್ನಕಳುವು ಪ್ರಕರಣ ಪತ್ತೆಯಾಗಿದೆ.

ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಕೆ.ಆರ್.ವಿಭಾಗದ ಎಸಿಪಿ ಗಂಗಾಧರ ಸ್ವಾಮಿ ಉಸ್ತುವಾರಿಯಲ್ಲಿ ಕುವೆಂಪುನಗರ ಠಾಣೆ ನಿರೀಕ್ಷಕರಾದ ಅರುಣ್ ರವರ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಗೋಪಾಲ್ ಹಾಗೂ ರಾಧಾ ಮತ್ತು ಸಿಬ್ಬಂದಿಗಳಾದ ಆನಂದ್,ಮಂಜುನಾಥ್,ಹಜರತ್ ಆಲಿ,ಪುಟ್ಟಪ್ಪ,ಸುರೇಶ್ ಹಾಗೂ ನಾಗೇಶ್ ರವರು ಆರೋಪಿಯನ್ನ ಬಂಧಿಸುವ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ.ಕಾರ್ಯಾಚರಣೆಯನ್ನ ಡಿಸಿಪಿ ಮುತ್ತುರಾಜ್ ಹಾಗೂ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ರವರು ಪ್ರಶಂಸಿಸಿರುತ್ತಾರೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *