ಮೈಸೂರು:ಸರಣಿ ಅಪಘಾತ…ಎರಡು ಬಸ್ ಹಾಗೂ ಕಾರು ನಜ್ಜುಗುಜ್ಜು…15 ಕ್ಕೂ ಹೆಚ್ಚು ಮಂದಿಗೆ ಗಾಯ…ಉರುಳಿ ಬಿದ್ದ ದಸರಾ ಲೈಟಿಂಗ್ ಕಮಾನು…

ಮೈಸೂರು:ಸರಣಿ ಅಪಘಾತ…ಎರಡು ಬಸ್ ಹಾಗೂ ಕಾರು ನಜ್ಜುಗುಜ್ಜು…15 ಕ್ಕೂ ಹೆಚ್ಚು ಮಂದಿಗೆ ಗಾಯ…ಉರುಳಿ ಬಿದ್ದ ದಸರಾ ಲೈಟಿಂಗ್ ಕಮಾನು…

ಮೈಸೂರು,ಅ13,Tv10 ಕನ್ನಡ

ಎರಡು ಬಸ್ ಹಾಗೂ ಒಂದು ಕಾರ್ ನಡುವೆ ನಡೆದ ಅಪಘಾತದಲ್ಲಿ 15 ಕ್ಕೂ ಹೆಚ್ಚುಮಂದಿ ಗಾಯಗೊಂಡ ಘಟನೆ ಮೈಸೂರಿನ ಮಣಿಪಾಲ್ ಆಸ್ಪತ್ರೆ ಬಳಿ ನಡೆದಿದೆ.ಢಿಕ್ಕಿ ಹೊಡೆದ ರಭಸಕ್ಕೆ ನಿಯಂತ್ರಣ ಕಳೆದುಕೊಂಡ ಬಸ್ ದಸರಾ ಲೈಟಿಂಗ್ ಹಾಕಲು ಅಳವಡಿಸಲಾಗಿದ್ದ ಕಮಾನಿಗೆ ಢಿಕ್ಕಿ ಹೊಡೆದಿದೆ.ಕಬ್ಬಿಣದ ಕಮಾನು ಬಸ್ ಮೇಲೆ ಉರುಳಿ ಬಿದ್ದಿದೆ.

ಇಂದು ಬೆಳಿಗ್ಗೆ ಸುಮಾರು 7.30 ರ ಸಮಯದಲ್ಲಿ ಘಟನೆ ನಡೆದಿದೆ.ಮೈಸೂರಿನಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ಸೇಲಂ ನಿಂದ ಮೈಸೂರಿನತ್ತ ಬರುತ್ತಿದ್ದ ತಮಿಳುನಾಡಿನ ಬಸ್ ಗೆ ಢಿಕ್ಕಿ ಹೊಡೆದಿದೆ.ಈ ಮಧ್ಯೆ ಸಾಗುತ್ತಿದ್ದ ಇನೋವಾ ಕಾರ್ ಸಿಲುಕಿದೆ.ಢಿಕ್ಕಿ ಹೊಡೆದ ರಭಸಕ್ಕೆ ಮೂರು ವಾಹನಗಳೂ ನಜ್ಜುಗುಜ್ಜಾಗಿದೆ.ಮೂರು ವಾಹನಗಳ ಪೈಕಿ ಸುಮಾರು 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.ಅಪಘಾತದ ಪರಿಣಾಮ ಕೆಲ ಸಮಯ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ.ಎನ್.ಆರ್.ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆ.ಎಸ್.ಆರ್.ಟಿ.ಸಿ.ಬಸ್ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *