ಮೈಸೂರು:ಸರಣಿ ಅಪಘಾತ…ಎರಡು ಬಸ್ ಹಾಗೂ ಕಾರು ನಜ್ಜುಗುಜ್ಜು…15 ಕ್ಕೂ ಹೆಚ್ಚು ಮಂದಿಗೆ ಗಾಯ…ಉರುಳಿ ಬಿದ್ದ ದಸರಾ ಲೈಟಿಂಗ್ ಕಮಾನು…

ಮೈಸೂರು:ಸರಣಿ ಅಪಘಾತ…ಎರಡು ಬಸ್ ಹಾಗೂ ಕಾರು ನಜ್ಜುಗುಜ್ಜು…15 ಕ್ಕೂ ಹೆಚ್ಚು ಮಂದಿಗೆ ಗಾಯ…ಉರುಳಿ ಬಿದ್ದ ದಸರಾ ಲೈಟಿಂಗ್ ಕಮಾನು…

ಮೈಸೂರು,ಅ13,Tv10 ಕನ್ನಡ

ಎರಡು ಬಸ್ ಹಾಗೂ ಒಂದು ಕಾರ್ ನಡುವೆ ನಡೆದ ಅಪಘಾತದಲ್ಲಿ 15 ಕ್ಕೂ ಹೆಚ್ಚುಮಂದಿ ಗಾಯಗೊಂಡ ಘಟನೆ ಮೈಸೂರಿನ ಮಣಿಪಾಲ್ ಆಸ್ಪತ್ರೆ ಬಳಿ ನಡೆದಿದೆ.ಢಿಕ್ಕಿ ಹೊಡೆದ ರಭಸಕ್ಕೆ ನಿಯಂತ್ರಣ ಕಳೆದುಕೊಂಡ ಬಸ್ ದಸರಾ ಲೈಟಿಂಗ್ ಹಾಕಲು ಅಳವಡಿಸಲಾಗಿದ್ದ ಕಮಾನಿಗೆ ಢಿಕ್ಕಿ ಹೊಡೆದಿದೆ.ಕಬ್ಬಿಣದ ಕಮಾನು ಬಸ್ ಮೇಲೆ ಉರುಳಿ ಬಿದ್ದಿದೆ.

ಇಂದು ಬೆಳಿಗ್ಗೆ ಸುಮಾರು 7.30 ರ ಸಮಯದಲ್ಲಿ ಘಟನೆ ನಡೆದಿದೆ.ಮೈಸೂರಿನಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ಸೇಲಂ ನಿಂದ ಮೈಸೂರಿನತ್ತ ಬರುತ್ತಿದ್ದ ತಮಿಳುನಾಡಿನ ಬಸ್ ಗೆ ಢಿಕ್ಕಿ ಹೊಡೆದಿದೆ.ಈ ಮಧ್ಯೆ ಸಾಗುತ್ತಿದ್ದ ಇನೋವಾ ಕಾರ್ ಸಿಲುಕಿದೆ.ಢಿಕ್ಕಿ ಹೊಡೆದ ರಭಸಕ್ಕೆ ಮೂರು ವಾಹನಗಳೂ ನಜ್ಜುಗುಜ್ಜಾಗಿದೆ.ಮೂರು ವಾಹನಗಳ ಪೈಕಿ ಸುಮಾರು 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.ಅಪಘಾತದ ಪರಿಣಾಮ ಕೆಲ ಸಮಯ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ.ಎನ್.ಆರ್.ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆ.ಎಸ್.ಆರ್.ಟಿ.ಸಿ.ಬಸ್ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *