ಮೈಸೂರು:ಸರಣಿ ಅಪಘಾತ…ಎರಡು ಬಸ್ ಹಾಗೂ ಕಾರು ನಜ್ಜುಗುಜ್ಜು…15 ಕ್ಕೂ ಹೆಚ್ಚು ಮಂದಿಗೆ ಗಾಯ…ಉರುಳಿ ಬಿದ್ದ ದಸರಾ ಲೈಟಿಂಗ್ ಕಮಾನು…

ಮೈಸೂರು:ಸರಣಿ ಅಪಘಾತ…ಎರಡು ಬಸ್ ಹಾಗೂ ಕಾರು ನಜ್ಜುಗುಜ್ಜು…15 ಕ್ಕೂ ಹೆಚ್ಚು ಮಂದಿಗೆ ಗಾಯ…ಉರುಳಿ ಬಿದ್ದ ದಸರಾ ಲೈಟಿಂಗ್ ಕಮಾನು…

ಮೈಸೂರು:ಸರಣಿ ಅಪಘಾತ…ಎರಡು ಬಸ್ ಹಾಗೂ ಕಾರು ನಜ್ಜುಗುಜ್ಜು…15 ಕ್ಕೂ ಹೆಚ್ಚು ಮಂದಿಗೆ ಗಾಯ…ಉರುಳಿ ಬಿದ್ದ ದಸರಾ ಲೈಟಿಂಗ್ ಕಮಾನು…

ಮೈಸೂರು,ಅ13,Tv10 ಕನ್ನಡ

ಎರಡು ಬಸ್ ಹಾಗೂ ಒಂದು ಕಾರ್ ನಡುವೆ ನಡೆದ ಅಪಘಾತದಲ್ಲಿ 15 ಕ್ಕೂ ಹೆಚ್ಚುಮಂದಿ ಗಾಯಗೊಂಡ ಘಟನೆ ಮೈಸೂರಿನ ಮಣಿಪಾಲ್ ಆಸ್ಪತ್ರೆ ಬಳಿ ನಡೆದಿದೆ.ಢಿಕ್ಕಿ ಹೊಡೆದ ರಭಸಕ್ಕೆ ನಿಯಂತ್ರಣ ಕಳೆದುಕೊಂಡ ಬಸ್ ದಸರಾ ಲೈಟಿಂಗ್ ಹಾಕಲು ಅಳವಡಿಸಲಾಗಿದ್ದ ಕಮಾನಿಗೆ ಢಿಕ್ಕಿ ಹೊಡೆದಿದೆ.ಕಬ್ಬಿಣದ ಕಮಾನು ಬಸ್ ಮೇಲೆ ಉರುಳಿ ಬಿದ್ದಿದೆ.

ಇಂದು ಬೆಳಿಗ್ಗೆ ಸುಮಾರು 7.30 ರ ಸಮಯದಲ್ಲಿ ಘಟನೆ ನಡೆದಿದೆ.ಮೈಸೂರಿನಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ಸೇಲಂ ನಿಂದ ಮೈಸೂರಿನತ್ತ ಬರುತ್ತಿದ್ದ ತಮಿಳುನಾಡಿನ ಬಸ್ ಗೆ ಢಿಕ್ಕಿ ಹೊಡೆದಿದೆ.ಈ ಮಧ್ಯೆ ಸಾಗುತ್ತಿದ್ದ ಇನೋವಾ ಕಾರ್ ಸಿಲುಕಿದೆ.ಢಿಕ್ಕಿ ಹೊಡೆದ ರಭಸಕ್ಕೆ ಮೂರು ವಾಹನಗಳೂ ನಜ್ಜುಗುಜ್ಜಾಗಿದೆ.ಮೂರು ವಾಹನಗಳ ಪೈಕಿ ಸುಮಾರು 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.ಅಪಘಾತದ ಪರಿಣಾಮ ಕೆಲ ಸಮಯ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ.ಎನ್.ಆರ್.ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆ.ಎಸ್.ಆರ್.ಟಿ.ಸಿ.ಬಸ್ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ…

Spread the love

Related post

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ… ಮಂಡ್ಯ,ಮೇ13,Tv10 ಕನ್ನಡ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಬಾಲಕಿಯರ ಕ್ರೀಡಾ ವಸತಿನಿಲಯಕ್ಕೆ ಭೇಟಿ ನೀಡಿ…
ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ…
ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ…

Leave a Reply

Your email address will not be published. Required fields are marked *