ಪುರಭವನದ ತಳಮಹಡಿ ಪಾರ್ಕಿಂಗ್ ಲೋಕಾರ್ಪಣೆ… ಡಾ.ಹೆಚ್.ಸಿ.ಮಹದೇವಪ್ಪ ರಿಂದ ಉದ್ಘಾಟನೆ…

ಮೈಸೂರು,ಅ18,Tv10 ಕನ್ನಡ

ಪುರಭವನದ ಆವರಣದಲ್ಲಿ ನಿರ್ಮಿಸಲಾದ ಅಂಡರ್ ಗ್ರೌಂಡ್ ಪಾರ್ಕಿಂಗ್ ನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಇಂದು ಉದ್ಘಾಟಿಸಿದರು.
ನಂತರ ಮಾತನಾಡಿ ನಗರಕ್ಕೆ ಬರುವ ಪ್ರವಾಸಿಗರು ಹಾಗೂ ಸ್ಥಳೀಯ ಜನರಿಗೆ ತಮ್ಮ ವಾಹನವನ್ನು ಪಾರ್ಕಿಂಗ್ ಮಾಡುವುದೇ ದೊಡ್ಡ ಸಮಸ್ಯೆಯಾಗಿತ್ತು. ಪ್ರಸ್ತುತ ವ್ಯವಸ್ಥಿತವಾಗಿ ನಿರ್ಮಿಸಿರುವ ವಾಹನ ನಿಲ್ದಾಣವು ಎಲ್ಲರಿಗೂ ಉಪಯೋಗವಾಗಲಿದ್ದು, ಸುಗಮ ಸಂಚಾರ ಸಾಧ್ಯವಾಗಲಿದೆ ಎಂದರು. ಸುಮಾರು 400 ಕ್ಕೂ ಹೆಚ್ಚ ವಾಹನಗಳನ್ನು ಪಾರ್ಕಿಂಗ್ ಮಾಡಬಹುದು. ಮುಂದಿನ ದಿನಗಳಲ್ಲಿ ಎರಡು ಸಾವಿರ ಸಾಮಾರ್ಥ್ಯದ ಪಾರ್ಕಿಂಗ್ ವ್ಯವಸ್ಥೆ ಮಾಡಿದರೆ ಹೆಚ್ಚಿನ ಜನರಿಗೆ ಅನುಕೂಲವಾಗಲಿದೆ. ಜನರು ತಮ್ಮ ವಾಹನವನ್ನು ಇಲ್ಲಿ ಪಾರ್ಕಿಗ್ ಮಾಡಿ ಯಾವುದೇ ಕಿರಿಕಿರಿ ಇಲ್ಲದೆ ನಿರಾಳವಾಗಿ ನಗರವನ್ನು ವೀಕ್ಷಣೆ ಮಾಡಬಹುದು ಎಂದು ಅಭಿಪ್ರಾಯ ಪಟ್ಟರು.

ಈ ನಿಲ್ದಾಣವು ಕಾರಣಾಂತರದಿಂದ ತಡವಾಗಿ ಉದ್ಘಾಟನೆಯಾಗಿದೆ. ಯಾವುದೇ ಕಾಮಗಾರಿ ಕೆಲಸವನ್ನು ಬದ್ಧತೆ ಇರುವ ಗುತ್ತಿಗೆದಾರನಿಗೆ ನೀಡಬೇಕು. ಅವಕಾಶವಂಚಿತರಿಗೆ ಯೋಗ್ಯವಾದ ಅನುಭವವಿರುವ ವ್ಯಕ್ತಿಗೆ ಕೆಲಸ ನೀಡಿ, ನಿಗದಿತ ಸಮಯಕ್ಕೆ ಕಾಮಗಾರಿ ಪೂರ್ಣಗೊಳಿಸುವಂತೆ ಹೇಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಕೆ.ಹರೀಶ್ ಗೌಡ, ಮೇಯರ್ ಶಿವಕುಮಾರ್, ಉಪಮೇಯರ್ ಡಾ.ಜಿ.ರೂಪ, ನಗರ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್, ಉಪ ಆಯುಕ್ತ ಜಿ.ಸೋಮಶೇಖರ್, ನಗರ ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *