ಪುರಭವನದ ತಳಮಹಡಿ ಪಾರ್ಕಿಂಗ್ ಲೋಕಾರ್ಪಣೆ… ಡಾ.ಹೆಚ್.ಸಿ.ಮಹದೇವಪ್ಪ ರಿಂದ ಉದ್ಘಾಟನೆ…

ಮೈಸೂರು,ಅ18,Tv10 ಕನ್ನಡ

ಪುರಭವನದ ಆವರಣದಲ್ಲಿ ನಿರ್ಮಿಸಲಾದ ಅಂಡರ್ ಗ್ರೌಂಡ್ ಪಾರ್ಕಿಂಗ್ ನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಇಂದು ಉದ್ಘಾಟಿಸಿದರು.
ನಂತರ ಮಾತನಾಡಿ ನಗರಕ್ಕೆ ಬರುವ ಪ್ರವಾಸಿಗರು ಹಾಗೂ ಸ್ಥಳೀಯ ಜನರಿಗೆ ತಮ್ಮ ವಾಹನವನ್ನು ಪಾರ್ಕಿಂಗ್ ಮಾಡುವುದೇ ದೊಡ್ಡ ಸಮಸ್ಯೆಯಾಗಿತ್ತು. ಪ್ರಸ್ತುತ ವ್ಯವಸ್ಥಿತವಾಗಿ ನಿರ್ಮಿಸಿರುವ ವಾಹನ ನಿಲ್ದಾಣವು ಎಲ್ಲರಿಗೂ ಉಪಯೋಗವಾಗಲಿದ್ದು, ಸುಗಮ ಸಂಚಾರ ಸಾಧ್ಯವಾಗಲಿದೆ ಎಂದರು. ಸುಮಾರು 400 ಕ್ಕೂ ಹೆಚ್ಚ ವಾಹನಗಳನ್ನು ಪಾರ್ಕಿಂಗ್ ಮಾಡಬಹುದು. ಮುಂದಿನ ದಿನಗಳಲ್ಲಿ ಎರಡು ಸಾವಿರ ಸಾಮಾರ್ಥ್ಯದ ಪಾರ್ಕಿಂಗ್ ವ್ಯವಸ್ಥೆ ಮಾಡಿದರೆ ಹೆಚ್ಚಿನ ಜನರಿಗೆ ಅನುಕೂಲವಾಗಲಿದೆ. ಜನರು ತಮ್ಮ ವಾಹನವನ್ನು ಇಲ್ಲಿ ಪಾರ್ಕಿಗ್ ಮಾಡಿ ಯಾವುದೇ ಕಿರಿಕಿರಿ ಇಲ್ಲದೆ ನಿರಾಳವಾಗಿ ನಗರವನ್ನು ವೀಕ್ಷಣೆ ಮಾಡಬಹುದು ಎಂದು ಅಭಿಪ್ರಾಯ ಪಟ್ಟರು.

ಈ ನಿಲ್ದಾಣವು ಕಾರಣಾಂತರದಿಂದ ತಡವಾಗಿ ಉದ್ಘಾಟನೆಯಾಗಿದೆ. ಯಾವುದೇ ಕಾಮಗಾರಿ ಕೆಲಸವನ್ನು ಬದ್ಧತೆ ಇರುವ ಗುತ್ತಿಗೆದಾರನಿಗೆ ನೀಡಬೇಕು. ಅವಕಾಶವಂಚಿತರಿಗೆ ಯೋಗ್ಯವಾದ ಅನುಭವವಿರುವ ವ್ಯಕ್ತಿಗೆ ಕೆಲಸ ನೀಡಿ, ನಿಗದಿತ ಸಮಯಕ್ಕೆ ಕಾಮಗಾರಿ ಪೂರ್ಣಗೊಳಿಸುವಂತೆ ಹೇಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಕೆ.ಹರೀಶ್ ಗೌಡ, ಮೇಯರ್ ಶಿವಕುಮಾರ್, ಉಪಮೇಯರ್ ಡಾ.ಜಿ.ರೂಪ, ನಗರ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್, ಉಪ ಆಯುಕ್ತ ಜಿ.ಸೋಮಶೇಖರ್, ನಗರ ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *