ಮಗುವನ್ನ ಕೆರೆಗೆ ಎಸೆದು ಕೊಂದ ತಂದೆ ಅಂದರ್…ಸಾಕಲು ಆಗಲ್ಲ ಎಂದು ಕೃತ್ಯ…

ಪಿರಿಯಾಪಟ್ಟಣ,ಅ19,Tv10 ಕನ್ನಡ

ಸಾಕಲು ಆಗಲ್ಲ ಎಂಬ ಕಾರಣಕ್ಕೆ ಮಗುವನ್ನು ಕೆರೆಗೆ ಎಸೆದು ಕೊಲೆ ಮಾಡಿದ ಪಾಪಿ ತಂದೆ ಪೊಲೀಸರ ಅತಿಥಿಯಾಗಿದ್ದಾನೆ.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದೆ.
ಮಾಕೋಡು ಗ್ರಾಮದ ಗಣೇಶ್ (30) ಕೊಲೆ ಆರೋಪಿ.
ಒಂದು ವರೆ ವರ್ಷದ ಮಗುವನ್ನು ಕೆರೆಗೆ ಎಸೆದು‌ ಕೊಲೆ ಮಾಡಿದ್ದಾನೆ.
2014ರಲ್ಲಿ ಬೆಂಗಳೂರಿನ ದೇವನಹಳ್ಳಿ ತಾಲೂಕಿನ ದೊಡ್ಡಸನ್ನೆ ಗ್ರಾಮದ ನಾರಾಯಣ ಸ್ವಾಮಿ ಎಂಬುವವರ ಮಗಳು ಲಕ್ಷ್ಮೀ ಎಂಬುವವಳನ್ನು ಮದುವೆಯಾಗಿದ್ದ ಗಣೇಶ್
ದೇವನಹಳ್ಳಿಯಲ್ಲಿಯೆ ಹೆಂಡತಿಯೊಂದಿಗೆ ವಾಸವಿದ್ದ.ದಂಪತಿಗೆ
ಹಾರಿಕಾ ಮತ್ತು ದೀಕ್ಷಾ ಎಂಬ ಇಬ್ಬರು ಹೆಣ್ಣುಮಕ್ಕಳಿದ್ದವು.
ಮತ್ತೊಂದು ಗಂಡು ಮಗುವಿನ ಹೆರಿಗೆಯಲ್ಲಿ ಪತ್ನಿ ಲಕ್ಷ್ಮಿ ತೀರಿಕೊಂಡಿದ್ದಳು.
1.5 ವರ್ಷದ ಕುಮಾರ್ ಎಂಬ ಗಂಡುಮಗುವಿನೊಂದಿಗೆ ಮಾಕೋಡು ಗ್ರಾಮಕ್ಕೆ ಗಣೇಶ್ ವಾಪ್ಸಸಾಗಿದ್ದ.
ಹೆಣ್ಣುಮಕ್ಕಳನ್ನು ಅಜ್ಜಿ ತಾತ ಬಳಿ ಬಿಟ್ಟು ಗಂಡುಮಗುವನ್ನು ತನ್ನ ತಾಯಿಯೊಂದಿಗೆ ತಾನೇ ಸಾಕಿಕೊಂಡಿದ್ದ.
ಅನೇಕ ಬಾರಿ ನಮಗೆ ವಾಪಸ್ಸು ನೀಡುವಂತೆ ನಾವೇ ಸಾಕುವುದಾಗಿ ಅತ್ತೆ ತಿಳಿಸಿದ್ದರು.
ಮಗು ಸಾಕಲು ಆಗುತ್ತಿರಲಿಲ್ಲ ಎಂದು ಕೆರೆಗೆ ಎಸೆದಿರುವ ಪಾಪಿ ತಂದೆಯನ್ನು ಪಿರಿಯಾಪಟ್ಟಣ ಪೊಲೀಸರು ಬಂಧಿಸಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *