ದಸರಾ2023:ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ…ಶಾಸಕ ಶ್ರೀವತ್ಸ ರಿಂದ ಉದ್ಘಾಟನೆ…

ಮೈಸೂರು ಆ19,Tv10 ಕನ್ನಡ

ದಸರಾ ವಸ್ತು ಪ್ರದರ್ಶನ ಆವರಣದಲ್ಲಿರುವ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಯೋಗ ದಸರಾ ಉಪಸಮಿತಿ ಆಯೋಜಿಸಿದ್ದ ರಾಜ್ಯಮಟ್ಟದ ದಸರಾ ಯೋಗಾಸನ ಸ್ಪರ್ಧೆಯನ್ನು ದೀಪ ಬೆಳಗುವುದರ ಮೂಲಕ ಶಾಸಕ ಶ್ರೀವತ್ಸ ಉದ್ಘಾಟಿಸಿದರು.ನಂತರ ಮಾತನಾಡಿ ಅವರು ಮೈಸೂರು ದಸರಾದ ಎಲ್ಲಾ ಕಾರ್ಯಕ್ರಮಗಳನ್ನು ಸರ್ಕಾರವು ಬಹಳ ಅಚ್ಚುಕಟ್ಟಾಗಿ ಆಯೋಜಿಸುತ್ತಿದ್ದು ದಸರಾ ಎಂದರೆ ಕಲೆ ಸಂಸ್ಕೃತಿ ಬಿಂಬಿಸುವುದರ ಜೊತೆಗೆ ಆರೋಗ್ಯದ ನಿಟ್ಟಿನಲ್ಲಿ ಯೋಗಕ್ಕೆ ಮೈಸೂರು ದಸರಾದಲ್ಲಿ ಬಹಳ ಪ್ರಾಮುಖ್ಯತೆ ನೀಡಲಾಗುತ್ತಿದೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿ ಯೋಗ ಪ್ರದರ್ಶಿಸುತ್ತಿರುವ ಎಲ್ಲ ಯೋಗಪಟುಗಳಿಗೆ ಶುಭ ಹಾರೈಸುತ್ತೇನೆ. ಯೋಗಕ್ಕೆ ಅತಿ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತದೆ. ಕಳೆದ ಬಾರಿ ಪ್ರಧಾನ ಮಂತ್ರಿಗಳು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಮೈಸೂರಿನಲ್ಲಿ ಆಚರಿಸಿದರು. ಮುಂದೆ ಚೀನಾದಲ್ಲಿ ನಡೆಯುವ ಒಲಂಪಿಕ್ ಕ್ರೀಡಾಕೂಟದಲ್ಲಿ ಯೋಗವನ್ನು ಕೂಡ ಸೇರಿಸಲಾಗಿದ್ದು ಅದರಲ್ಲಿ ಹೆಚ್ಚಿನ ಪದಕಗಳನ್ನು ಭಾರತವೇ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು

ನಂತರ ಮಾತನಾಡಿದ ಮಹಾನಗರ ಪಾಲಿಕೆಯ ಮಹಾಪೌರರಾದ ಶಿವ ಕುಮಾರ್ ಮೈಸೂರು ಸಾಂಸ್ಕೃತಿಕ, ಪಾರಂಪರಿಕ ನಗರಿಯಂತೆ ಯೋಗ ನಗರವು ಕೂಡ ಆಗಿದೆ. ದೇಶದ ಪ್ರಧಾನಿಯು ಯೋಗಕ್ಕೆ ಅತಿ ಹೆಚ್ಚು ಓತ್ತನ್ನು ನೀಡಿ ಇದರ ಕುರಿತಂತೆ ಸಂಶೋಧನೆಗೆ ಹಣಕಾಸುವನ್ನು ಬಿಡುಗಡೆ ಮಾಡಿ ಉತ್ತೇಜನ ನೀಡುತ್ತಿದ್ದಾರೆ. ಮೈಸೂರು ದಸರಾದಲ್ಲಿ ಯೋಗದ ಕುರಿತಂತೆ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ನಮ್ಮ ಹೆಮ್ಮೆ . ಯೋಗವನ್ನು ಪ್ರತಿಯೊಬ್ಬರು ಮಾಡಬೇಕು ಆಗ ಮಾತ್ರ ಯೋಗದ ಪ್ರಾಮುಖ್ಯತೆ ತಿಳಿಯುತ್ತದೆ. ಭಾಗವಹಿಸಿರುವ ಎಲ್ಲಾ ಯೋಗಪಟುಗಳಿಗೂ ಶುಭಾಶಯಗಳು ತಿಳಿಸಿದರು.

ದೈಹಿಕ ಶಿಕ್ಷಣ ಪರಿವೀಕ್ಷಕರಾದ ಡಾ.ಗಣೇಶ್ ಕುಮಾರ್ ರವರು ಮಾಹಿತಿ ನೀಡಿ ಈ ಸ್ಪರ್ಧೆಯು 8 ವರ್ಷದ ಬಾಲಕರಿಂದ 65 ವರ್ಷದ ಪುರುಷ ಮಹಿಳೆಯರು ಭಾಗವಹಿಸುತ್ತಿದ್ದು ಸ್ಪರ್ಧಿಗಳು ನೋಂದಣಿ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿತ್ತು. ಇಲ್ಲಿವರೆಗೆ 1425 ಸ್ಪರ್ಧಿಗಳು ಈಗಾಗಲೇ ನೊಂದಣಿಯಾಗಿದ್ದು ಸ್ಥಳದಲ್ಲೂ ಕೂಡ ನೊಂದಣಿ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಒಟ್ಟಾರೆ 1600 ಕೂ ಹೆಚ್ಚು ಸ್ಪರ್ಧಿಗಳು ರಾಜ್ಯದ ವಿವಿಧ ಜಿಲ್ಲೆಗಳಿಂದ ಭಾಗವಹಿಸುತ್ತಿದ್ದು. ವಯೋಮಾನದ ಅನುಗುಣವಾಗಿ ವಿವಿಧ ಯೋಗ ಆಸನಗಳನ್ನು ಮಾಡಲು ಅವಕಾಶ ಕಲ್ಪಿಸಿ ಕೊಡಲಾಗಿದೆ. 14 ವಿವಿಧ ವೇದಿಕೆಗಳಲ್ಲಿ ಸ್ಪರ್ಧೆಗಳು ನಡೆಯುತ್ತಿದ್ದು ಪ್ರತಿ ವೇದಿಕೆಗೆ ನಾಲ್ಕು ತೀರ್ಪುಗಾರರನ್ನು ಆಯೋಜಿಸಲಾಗಿದ್ದು. ಪ್ರತಿ ಸ್ಪರ್ಧಿಗೆ ತೀರ್ಪುಗಾರರು ನಿಗದಿಪಡಿಸಿರುವ ಐದು ಯೋಗಾಸನಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಅದರಲ್ಲಿ ಯಾರಿಗೆ ಅತಿ ಹೆಚ್ಚು ಅಂಕಗಳಿಸುತ್ತಾರೆ ಅವರನ್ನು ವಿಜೇತರು ಎಂದು ಘೋಷಿಸಲಾಗುತ್ತದೆ. ಮೊದಲು ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿಜೇತರಿಗೆ ನಗದು ಬಹುಮಾನ ನೀಡುತ್ತಿದ್ದು ಭಾಗವಹಿಸಿದ ಸ್ಪರ್ಧಿಗಳೆಲ್ಲರಿಗೂ ಪ್ರಾತಿನಿಧ್ಯ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಾಲಿಕೆಯ ಉಪ ಮಹಾಪೌರರಾದ ಡಾ. ಜಿ ರೂಪ, ಯೋಗ ದಸರಾ ಉಪಸಮಿತಿಯ ಡಿ.ಎಂ ರಾಣಿ , ಯೋಗ ದಸರಾ ಉಪಸಮಿತಿಯ ವಿಶೇಷ ಅಧಿಕಾರಿಯಾದ ಕೆ.ರಮ್ಯಾ, ಯೋಗ ದಸರಾ ಉಪಸಮಿತಿಯ ಕಾರ್ಯದರ್ಶಿ ಡಾ.ಪುಷ್ಪ, ಹಾಗೂ ಸಮಿತಿಯ ಎಲ್ಲಾ ಸದಸ್ಯರು ಹಾಜರಿದ್ದರು…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *