ದಸರಾ2023:ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ…ಶಾಸಕ ಶ್ರೀವತ್ಸ ರಿಂದ ಉದ್ಘಾಟನೆ…

ಮೈಸೂರು ಆ19,Tv10 ಕನ್ನಡ

ದಸರಾ ವಸ್ತು ಪ್ರದರ್ಶನ ಆವರಣದಲ್ಲಿರುವ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಯೋಗ ದಸರಾ ಉಪಸಮಿತಿ ಆಯೋಜಿಸಿದ್ದ ರಾಜ್ಯಮಟ್ಟದ ದಸರಾ ಯೋಗಾಸನ ಸ್ಪರ್ಧೆಯನ್ನು ದೀಪ ಬೆಳಗುವುದರ ಮೂಲಕ ಶಾಸಕ ಶ್ರೀವತ್ಸ ಉದ್ಘಾಟಿಸಿದರು.ನಂತರ ಮಾತನಾಡಿ ಅವರು ಮೈಸೂರು ದಸರಾದ ಎಲ್ಲಾ ಕಾರ್ಯಕ್ರಮಗಳನ್ನು ಸರ್ಕಾರವು ಬಹಳ ಅಚ್ಚುಕಟ್ಟಾಗಿ ಆಯೋಜಿಸುತ್ತಿದ್ದು ದಸರಾ ಎಂದರೆ ಕಲೆ ಸಂಸ್ಕೃತಿ ಬಿಂಬಿಸುವುದರ ಜೊತೆಗೆ ಆರೋಗ್ಯದ ನಿಟ್ಟಿನಲ್ಲಿ ಯೋಗಕ್ಕೆ ಮೈಸೂರು ದಸರಾದಲ್ಲಿ ಬಹಳ ಪ್ರಾಮುಖ್ಯತೆ ನೀಡಲಾಗುತ್ತಿದೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿ ಯೋಗ ಪ್ರದರ್ಶಿಸುತ್ತಿರುವ ಎಲ್ಲ ಯೋಗಪಟುಗಳಿಗೆ ಶುಭ ಹಾರೈಸುತ್ತೇನೆ. ಯೋಗಕ್ಕೆ ಅತಿ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತದೆ. ಕಳೆದ ಬಾರಿ ಪ್ರಧಾನ ಮಂತ್ರಿಗಳು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಮೈಸೂರಿನಲ್ಲಿ ಆಚರಿಸಿದರು. ಮುಂದೆ ಚೀನಾದಲ್ಲಿ ನಡೆಯುವ ಒಲಂಪಿಕ್ ಕ್ರೀಡಾಕೂಟದಲ್ಲಿ ಯೋಗವನ್ನು ಕೂಡ ಸೇರಿಸಲಾಗಿದ್ದು ಅದರಲ್ಲಿ ಹೆಚ್ಚಿನ ಪದಕಗಳನ್ನು ಭಾರತವೇ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು

ನಂತರ ಮಾತನಾಡಿದ ಮಹಾನಗರ ಪಾಲಿಕೆಯ ಮಹಾಪೌರರಾದ ಶಿವ ಕುಮಾರ್ ಮೈಸೂರು ಸಾಂಸ್ಕೃತಿಕ, ಪಾರಂಪರಿಕ ನಗರಿಯಂತೆ ಯೋಗ ನಗರವು ಕೂಡ ಆಗಿದೆ. ದೇಶದ ಪ್ರಧಾನಿಯು ಯೋಗಕ್ಕೆ ಅತಿ ಹೆಚ್ಚು ಓತ್ತನ್ನು ನೀಡಿ ಇದರ ಕುರಿತಂತೆ ಸಂಶೋಧನೆಗೆ ಹಣಕಾಸುವನ್ನು ಬಿಡುಗಡೆ ಮಾಡಿ ಉತ್ತೇಜನ ನೀಡುತ್ತಿದ್ದಾರೆ. ಮೈಸೂರು ದಸರಾದಲ್ಲಿ ಯೋಗದ ಕುರಿತಂತೆ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ನಮ್ಮ ಹೆಮ್ಮೆ . ಯೋಗವನ್ನು ಪ್ರತಿಯೊಬ್ಬರು ಮಾಡಬೇಕು ಆಗ ಮಾತ್ರ ಯೋಗದ ಪ್ರಾಮುಖ್ಯತೆ ತಿಳಿಯುತ್ತದೆ. ಭಾಗವಹಿಸಿರುವ ಎಲ್ಲಾ ಯೋಗಪಟುಗಳಿಗೂ ಶುಭಾಶಯಗಳು ತಿಳಿಸಿದರು.

ದೈಹಿಕ ಶಿಕ್ಷಣ ಪರಿವೀಕ್ಷಕರಾದ ಡಾ.ಗಣೇಶ್ ಕುಮಾರ್ ರವರು ಮಾಹಿತಿ ನೀಡಿ ಈ ಸ್ಪರ್ಧೆಯು 8 ವರ್ಷದ ಬಾಲಕರಿಂದ 65 ವರ್ಷದ ಪುರುಷ ಮಹಿಳೆಯರು ಭಾಗವಹಿಸುತ್ತಿದ್ದು ಸ್ಪರ್ಧಿಗಳು ನೋಂದಣಿ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿತ್ತು. ಇಲ್ಲಿವರೆಗೆ 1425 ಸ್ಪರ್ಧಿಗಳು ಈಗಾಗಲೇ ನೊಂದಣಿಯಾಗಿದ್ದು ಸ್ಥಳದಲ್ಲೂ ಕೂಡ ನೊಂದಣಿ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಒಟ್ಟಾರೆ 1600 ಕೂ ಹೆಚ್ಚು ಸ್ಪರ್ಧಿಗಳು ರಾಜ್ಯದ ವಿವಿಧ ಜಿಲ್ಲೆಗಳಿಂದ ಭಾಗವಹಿಸುತ್ತಿದ್ದು. ವಯೋಮಾನದ ಅನುಗುಣವಾಗಿ ವಿವಿಧ ಯೋಗ ಆಸನಗಳನ್ನು ಮಾಡಲು ಅವಕಾಶ ಕಲ್ಪಿಸಿ ಕೊಡಲಾಗಿದೆ. 14 ವಿವಿಧ ವೇದಿಕೆಗಳಲ್ಲಿ ಸ್ಪರ್ಧೆಗಳು ನಡೆಯುತ್ತಿದ್ದು ಪ್ರತಿ ವೇದಿಕೆಗೆ ನಾಲ್ಕು ತೀರ್ಪುಗಾರರನ್ನು ಆಯೋಜಿಸಲಾಗಿದ್ದು. ಪ್ರತಿ ಸ್ಪರ್ಧಿಗೆ ತೀರ್ಪುಗಾರರು ನಿಗದಿಪಡಿಸಿರುವ ಐದು ಯೋಗಾಸನಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಅದರಲ್ಲಿ ಯಾರಿಗೆ ಅತಿ ಹೆಚ್ಚು ಅಂಕಗಳಿಸುತ್ತಾರೆ ಅವರನ್ನು ವಿಜೇತರು ಎಂದು ಘೋಷಿಸಲಾಗುತ್ತದೆ. ಮೊದಲು ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿಜೇತರಿಗೆ ನಗದು ಬಹುಮಾನ ನೀಡುತ್ತಿದ್ದು ಭಾಗವಹಿಸಿದ ಸ್ಪರ್ಧಿಗಳೆಲ್ಲರಿಗೂ ಪ್ರಾತಿನಿಧ್ಯ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಾಲಿಕೆಯ ಉಪ ಮಹಾಪೌರರಾದ ಡಾ. ಜಿ ರೂಪ, ಯೋಗ ದಸರಾ ಉಪಸಮಿತಿಯ ಡಿ.ಎಂ ರಾಣಿ , ಯೋಗ ದಸರಾ ಉಪಸಮಿತಿಯ ವಿಶೇಷ ಅಧಿಕಾರಿಯಾದ ಕೆ.ರಮ್ಯಾ, ಯೋಗ ದಸರಾ ಉಪಸಮಿತಿಯ ಕಾರ್ಯದರ್ಶಿ ಡಾ.ಪುಷ್ಪ, ಹಾಗೂ ಸಮಿತಿಯ ಎಲ್ಲಾ ಸದಸ್ಯರು ಹಾಜರಿದ್ದರು…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *