ದಸರಾ 2023:ಉರ್ದು ಕವಿಗೋಷ್ಠಿ…ಡಾ.ಹೆಚ್.ಸಿ.ಎಂ.ರಿಂದ ಉದ್ಘಾಟನೆ…

ಮೈಸೂರು,ಅ19,Tv10 ಕನ್ನಡ

ವಿಶ್ವವಿಖ್ಯಾತ ದಸರಾ ಮಹೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಉರ್ದು ಕವಿಗೋಷ್ಠಿಯನ್ನ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉದ್ಘಾಟಿಸಿದರು.
ಮೈಸೂರಿನ ಕ್ಲಾಸಿಕ್ ಕನ್ವೆನ್ಷನಲ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಉರ್ದು ಕವಿಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು
ಭಾಷೆ ಎನ್ನುವುದು ನಮ್ಮ ಸಾಂಸ್ಕೃತಿಕ ಹಿನ್ನೆಲೆ ಮತ್ತು ಚರಿತ್ರೆಯನ್ನು ತಿಳಿಸುವಂತಹ ಒಂದು ಸಂಪರ್ಕ ಸಾಧನ. ಕವಿತೆ ಕವಿಗೂ ವ್ಯತ್ಯಾಸವಿಲ್ಲ. ಹಾಗೆಯೇ ರವಿ ಕಾಣದನ್ನು ಕವಿ ಕಂಡ ಎನ್ನುವ ಹಾಗೆ ಕವಿಯು ಯಾವ ಭಾಷೆಯನ್ನು ಬಳಸಿದರು ಆತನ ಸಾಹಿತ್ಯದ ಭಾವನೆ ಒಂದೇ ಆಗಿರುತ್ತದೆ. ಪ್ರಸ್ತುತವಾಗಿ ಜಾತಿ ಧರ್ಮಗಳ ವಿರುದ್ಧದ ಹೋರಾಟದಲ್ಲಿ ಸಮಾಜವು ಸಿಲುಕಿದೆ. ಇದನ್ನು ಸರಿದೂಗಿಸಿಕೊಂಡು ಹೋಗಲು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಸಾಧ್ಯವಾಗಿದೆ. ಪರಸ್ಪರ ಬೆರೆಯುವುದು ಮಾನವೀಯ ಮೌಲ್ಯಗಳನ್ನು ತಿಳಿದುಕೊಳ್ಳಲು ಮತ್ತು ಇತಿಹಾಸವನ್ನು ತಿಳಿಯಲು ಈ ರೀತಿಯ ಕವಿ ಗೋಷ್ಠಿಗಳನ್ನು ಹೆಚ್ಚು ಆಯೋಜಿಸಬೇಕು ಎಂದರು.ಸಾಹಿತ್ಯಕ್ಕೆ ಸಮಾಜದ ಸಮಸ್ಯೆಗಳ ಕುರಿತು ಹಾಗೂ ಸ್ನೇಹ ಸೌಹಾರ್ದ, ಬಾತೃತ್ವ ಮನೋಭಾವದ ಸಂದೇಶವನ್ನು ಇಡೀ ಸಮುದಾಯಕ್ಕೆ ಈ ಕವಿಗೋಷ್ಠಿಯ ಮೂಲಕ ತಿಳಿಯುವಂತಾಗಲಿ. ದಸರೆಯ ಉತ್ಸವ ಯಾವುದೇ ಧರ್ಮಕ್ಕೆ ಯಾವುದೇ ಜಾತಿಗೆ ಸೀಮಿತವಾಗಿಲ್ಲ. ಜನರಲ್ಲಿರುವ ಪ್ರತಿಭೆ, ಆಸಕ್ತಿ ಅನುಭವ, ಇವುಗಳನ್ನು ಗುರುತಿಸಿ ಬೆಳಕಿಗೆ ತರುವಂತಹ ಕೆಲಸವನ್ನು ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಮುದಾಯಗಳ ನಡುವೆ ಸಹೋದರತ್ವ ಮನೋಭಾವ ಸಾಂಸ್ಕೃತಿಕತೆಯ ಶ್ರೀಮಂತಿಕೆಯನ್ನು ಎತ್ತಿ ಹಿಡಿಯುವಂತಹ ಕೆಲಸವನ್ನು ಈ ಕವಿಗೋಷ್ಠಿ ಮಾಡಲಿ ಎಂದ ಅವರು ಘೋಷ್ಠಿಗೆ ಆಗಮಿಸಿರುವ ಎಲ್ಲಾ ಕವಿಗಳಿಗೂ ಶುಭಾಶಯ ತಿಳಿಸಿದರು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ನರಸಿಂಹರಾಜ ಕ್ಷೇತ್ರದ ಶಾಸಕರಾದ ತನ್ವೀರ್ ಸೇಟ್ ರವರು ಮಾತನಾಡಿ ಮೈಸೂರು ರಾಜರು ಕಲೆ ಮತ್ತು ಸಾಹಿತ್ಯಕ್ಕೆ ನೀಡುತ್ತಿದ್ದ ಕೊಡುಗೆಯನ್ನು ಈಗಿನ ದಸರಾ ಮಹೋತ್ಸವದಲ್ಲೂ ಕೂಡ ನಿರ್ವಹಿಸಿಕೊಂಡು ಬಂದಿದ್ದೇವೆ. ದಸರಾದ ಕವಿಗೋಷ್ಠಿಯಲ್ಲಿ ಉರ್ದು ಕವಿಗೋಷ್ಠಿ ವಿಭಿನ್ನ ಕಾರ್ಯಕ್ರಮವಾಗಿದೆ. ಹೆಚ್ ಸಿ ಮಹದೇವಪ್ಪ ರವರು
ಉರ್ದು ಭಾಷೆಗೆ ಉತ್ತಮ ಪ್ರಾಮುಖ್ಯತೆ ನೀಡುತ್ತಿದ್ದು ಇದರ ಕುರಿತಂತೆ ಈ ಹಿಂದೆಯೂ ಕೂಡ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಈ ಕವಿ ಗೋಷ್ಠಿಗೆ ವಿವಿಧ ರಾಜ್ಯಗಳಿಂದ ಖ್ಯಾತ ಕವಿಗಳು ಆಗಮಿಸಿದ್ದು ಈ ಗೋಷ್ಠಿಯು ವಿಶಿಷ್ಟವಾದ ಮತ್ತು ವಿನೂತನವಾದ ಕಾರ್ಯಕ್ರಮವಾಗಿದೆ ಎಂದರು

ಕಾರ್ಯಕ್ರಮದಲ್ಲಿ ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಡಾ.ದಾಸೇಗೌಡ, ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಎಸ್ ವಿಜಯ್ ಕುಮಾರಿ ಕರಿಕಲ್ , ಪ್ರೊಫೆಸರ್ ಮುಲ್ಜಾಫರ್ ಅಜಾದಿ , ಬಾಲಿವುಡ್ ನಟರಾದ ರಜಾ ಮುರಾದ್, ಖ್ಯಾತ ಉರ್ದು ಕವಿಗಳಾದ ಬ್ರಾರ್ ಖಾಶೀಫ್,‌ ಜಮೀಲ್ ಅಸ್ಕರ್, ಕಾರ್ಯಕ್ರಮದಲ್ಲಿ ಹಾಜರಿದ್ದರು.

Spread the love

Related post

ರೌಡಿ ಶೀಟರ್ ಬರ್ಬರ ಹತ್ಯೆ…ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆ…ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ…

ರೌಡಿ ಶೀಟರ್ ಬರ್ಬರ ಹತ್ಯೆ…ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆ…ಸ್ಥಳಕ್ಕೆ ಹಿರಿಯ ಪೊಲೀಸ್…

ಮೈಸೂರು,ಮಾ14,Tv10 ಕನ್ನಡ ಮೈಸೂರು ತಾಲೂಕು ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹನಗಳ್ಳಿಯ ತೋಟದ ಮನೆಯಲ್ಲಿ ರೌಡಿ ಶೀಟರ್ ಬರ್ಭರ ಹತ್ಯೆಯಾಗಿದೆ.ದೊರೆಸ್ವಾಮಿ.ಆ.ಸೂರ್ಯ ಮೃತ ರೌಡಿ ಶೀಟರ್.ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆಯಾಗಿದೆ.ಮಾರಕಾಸ್ತ್ರದಿಂದ…
ಪ್ರತಾಪ್ ಸಿಂಹ ಟಿಕೆಟ್ ಕಳೆದುಕೊಂಡು ಇಂದಿಗೆ ಒಂದು ವರ್ಷ…ಜನರ ಪ್ರೀತಿ ವಿಶ್ವಾಸಕ್ಕೆ ಫಿದಾ…

ಪ್ರತಾಪ್ ಸಿಂಹ ಟಿಕೆಟ್ ಕಳೆದುಕೊಂಡು ಇಂದಿಗೆ ಒಂದು ವರ್ಷ…ಜನರ ಪ್ರೀತಿ ವಿಶ್ವಾಸಕ್ಕೆ…

ಮೈಸೂರು,ಮಾ14,Tv10 ಕನ್ನಡ ಸಂಸದ ಸ್ಥಾನದ ಟಿಕೆಟ್ ಕಳೆದುಕೊಂಡು ಇವತ್ತಿಗೆ ಒಂದು ವರ್ಷವಾಯಿತುಆದರೆ ಕಾರ್ಯಕರ್ತರ ಪ್ರೀತಿ, ಜನರ ಆಶೀರ್ವಾದ, ಪ್ರೋತ್ಸಾಹ ಇವತ್ತಿಗೂ ಹಾಗೇ ಇದೆ ಎಂದುಸಾಮಾಜಿಕ ಜಾಲತಾಣದಲ್ಲಿ ಮಾಜಿ‌ ಸಂಸದ…
ಟ್ರೇಡಿಂಗ್ ನಲ್ಲಿ ಹೆಚ್ಚಿನ ಲಾಭದ ಆಮಿಷ…17 ಲಕ್ಷ ವಂಚನೆ…

ಟ್ರೇಡಿಂಗ್ ನಲ್ಲಿ ಹೆಚ್ಚಿನ ಲಾಭದ ಆಮಿಷ…17 ಲಕ್ಷ ವಂಚನೆ…

ಮೈಸೂರು,ಮಾ13,Tv10 ಕನ್ನಡ ಟ್ರೇಡಿಂಗ್ ನಲ್ಲಿ ಹೆಚ್ಚಿನ ಅಭಾಂಶ ಬರುವುದಾಗಿ ನಂಬಿಸಿ ಮೈಸೂರಿನ ವ್ಯಕ್ತಿಯೊಬ್ಬರಿಗೆ 17 ಲಕ್ಷಕ್ಕೆ ಪಂಗನಾಮ ಹಾಕಿದ್ದಾರೆ.ಕುಂಬಾರಕೊಪ್ಪಲಿನ ನಿವಾಸಿ ವಿನಯ್ ಕುಮಾರ್ ಎಂಬುವರೇ ಹಣ ಕಳೆದುಕೊಂಡವರು.ಇನ್ಸ್ ಸ್ಟಾಗ್ರಾಂ…

Leave a Reply

Your email address will not be published. Required fields are marked *