ದಸರಾ 2023:ಉರ್ದು ಕವಿಗೋಷ್ಠಿ…ಡಾ.ಹೆಚ್.ಸಿ.ಎಂ.ರಿಂದ ಉದ್ಘಾಟನೆ…

ಮೈಸೂರು,ಅ19,Tv10 ಕನ್ನಡ

ವಿಶ್ವವಿಖ್ಯಾತ ದಸರಾ ಮಹೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಉರ್ದು ಕವಿಗೋಷ್ಠಿಯನ್ನ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉದ್ಘಾಟಿಸಿದರು.
ಮೈಸೂರಿನ ಕ್ಲಾಸಿಕ್ ಕನ್ವೆನ್ಷನಲ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಉರ್ದು ಕವಿಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು
ಭಾಷೆ ಎನ್ನುವುದು ನಮ್ಮ ಸಾಂಸ್ಕೃತಿಕ ಹಿನ್ನೆಲೆ ಮತ್ತು ಚರಿತ್ರೆಯನ್ನು ತಿಳಿಸುವಂತಹ ಒಂದು ಸಂಪರ್ಕ ಸಾಧನ. ಕವಿತೆ ಕವಿಗೂ ವ್ಯತ್ಯಾಸವಿಲ್ಲ. ಹಾಗೆಯೇ ರವಿ ಕಾಣದನ್ನು ಕವಿ ಕಂಡ ಎನ್ನುವ ಹಾಗೆ ಕವಿಯು ಯಾವ ಭಾಷೆಯನ್ನು ಬಳಸಿದರು ಆತನ ಸಾಹಿತ್ಯದ ಭಾವನೆ ಒಂದೇ ಆಗಿರುತ್ತದೆ. ಪ್ರಸ್ತುತವಾಗಿ ಜಾತಿ ಧರ್ಮಗಳ ವಿರುದ್ಧದ ಹೋರಾಟದಲ್ಲಿ ಸಮಾಜವು ಸಿಲುಕಿದೆ. ಇದನ್ನು ಸರಿದೂಗಿಸಿಕೊಂಡು ಹೋಗಲು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಸಾಧ್ಯವಾಗಿದೆ. ಪರಸ್ಪರ ಬೆರೆಯುವುದು ಮಾನವೀಯ ಮೌಲ್ಯಗಳನ್ನು ತಿಳಿದುಕೊಳ್ಳಲು ಮತ್ತು ಇತಿಹಾಸವನ್ನು ತಿಳಿಯಲು ಈ ರೀತಿಯ ಕವಿ ಗೋಷ್ಠಿಗಳನ್ನು ಹೆಚ್ಚು ಆಯೋಜಿಸಬೇಕು ಎಂದರು.ಸಾಹಿತ್ಯಕ್ಕೆ ಸಮಾಜದ ಸಮಸ್ಯೆಗಳ ಕುರಿತು ಹಾಗೂ ಸ್ನೇಹ ಸೌಹಾರ್ದ, ಬಾತೃತ್ವ ಮನೋಭಾವದ ಸಂದೇಶವನ್ನು ಇಡೀ ಸಮುದಾಯಕ್ಕೆ ಈ ಕವಿಗೋಷ್ಠಿಯ ಮೂಲಕ ತಿಳಿಯುವಂತಾಗಲಿ. ದಸರೆಯ ಉತ್ಸವ ಯಾವುದೇ ಧರ್ಮಕ್ಕೆ ಯಾವುದೇ ಜಾತಿಗೆ ಸೀಮಿತವಾಗಿಲ್ಲ. ಜನರಲ್ಲಿರುವ ಪ್ರತಿಭೆ, ಆಸಕ್ತಿ ಅನುಭವ, ಇವುಗಳನ್ನು ಗುರುತಿಸಿ ಬೆಳಕಿಗೆ ತರುವಂತಹ ಕೆಲಸವನ್ನು ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಮುದಾಯಗಳ ನಡುವೆ ಸಹೋದರತ್ವ ಮನೋಭಾವ ಸಾಂಸ್ಕೃತಿಕತೆಯ ಶ್ರೀಮಂತಿಕೆಯನ್ನು ಎತ್ತಿ ಹಿಡಿಯುವಂತಹ ಕೆಲಸವನ್ನು ಈ ಕವಿಗೋಷ್ಠಿ ಮಾಡಲಿ ಎಂದ ಅವರು ಘೋಷ್ಠಿಗೆ ಆಗಮಿಸಿರುವ ಎಲ್ಲಾ ಕವಿಗಳಿಗೂ ಶುಭಾಶಯ ತಿಳಿಸಿದರು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ನರಸಿಂಹರಾಜ ಕ್ಷೇತ್ರದ ಶಾಸಕರಾದ ತನ್ವೀರ್ ಸೇಟ್ ರವರು ಮಾತನಾಡಿ ಮೈಸೂರು ರಾಜರು ಕಲೆ ಮತ್ತು ಸಾಹಿತ್ಯಕ್ಕೆ ನೀಡುತ್ತಿದ್ದ ಕೊಡುಗೆಯನ್ನು ಈಗಿನ ದಸರಾ ಮಹೋತ್ಸವದಲ್ಲೂ ಕೂಡ ನಿರ್ವಹಿಸಿಕೊಂಡು ಬಂದಿದ್ದೇವೆ. ದಸರಾದ ಕವಿಗೋಷ್ಠಿಯಲ್ಲಿ ಉರ್ದು ಕವಿಗೋಷ್ಠಿ ವಿಭಿನ್ನ ಕಾರ್ಯಕ್ರಮವಾಗಿದೆ. ಹೆಚ್ ಸಿ ಮಹದೇವಪ್ಪ ರವರು
ಉರ್ದು ಭಾಷೆಗೆ ಉತ್ತಮ ಪ್ರಾಮುಖ್ಯತೆ ನೀಡುತ್ತಿದ್ದು ಇದರ ಕುರಿತಂತೆ ಈ ಹಿಂದೆಯೂ ಕೂಡ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಈ ಕವಿ ಗೋಷ್ಠಿಗೆ ವಿವಿಧ ರಾಜ್ಯಗಳಿಂದ ಖ್ಯಾತ ಕವಿಗಳು ಆಗಮಿಸಿದ್ದು ಈ ಗೋಷ್ಠಿಯು ವಿಶಿಷ್ಟವಾದ ಮತ್ತು ವಿನೂತನವಾದ ಕಾರ್ಯಕ್ರಮವಾಗಿದೆ ಎಂದರು

ಕಾರ್ಯಕ್ರಮದಲ್ಲಿ ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಡಾ.ದಾಸೇಗೌಡ, ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಎಸ್ ವಿಜಯ್ ಕುಮಾರಿ ಕರಿಕಲ್ , ಪ್ರೊಫೆಸರ್ ಮುಲ್ಜಾಫರ್ ಅಜಾದಿ , ಬಾಲಿವುಡ್ ನಟರಾದ ರಜಾ ಮುರಾದ್, ಖ್ಯಾತ ಉರ್ದು ಕವಿಗಳಾದ ಬ್ರಾರ್ ಖಾಶೀಫ್,‌ ಜಮೀಲ್ ಅಸ್ಕರ್, ಕಾರ್ಯಕ್ರಮದಲ್ಲಿ ಹಾಜರಿದ್ದರು.

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *