ದಸರಾ2023:ಕೇಂದ್ರ ಕಾರಾಗೃಹವಾಸಿಗಳಿಗೆ ಯೋಗಾಭ್ಯಾಸ…

ಮೈಸೂರು,ಅ20,Tv10 ಕನ್ನಡ

ಕಾರಾಗೃಹಗಳು ಬಂದಿಕಾನೆ ಆಗಬಾರದು, ಪರಿವರ್ತನೆಯ ತಾಣವಾಗಬೇಕು. ಕಾರಾಗೃಹಗಳು ಅಪರಾಧಿಗಳಿಗೆ ದಂಡನೆ ಶಿಕ್ಷೆ ಬಂಧನಗಳನ್ನು ನೀಡುತ್ತಿಲ್ಲ ಬದಲಾಗಿ ಮನಃಪರಿವರ್ತನೆಗೆ ಅವಕಾಶ ಮಾಡಿಕೊಟ್ಟು ಸಮಾಜದಲ್ಲಿ ಶಾಂತಿಯನ್ನು ನಡೆಸುವಂತಹ ಕೆಲಸಗಳನ್ನು ಕಾರಾಗೃಹಗಳು ಮಾಡುತ್ತಿವೆ ಎಂದು ಮೈಸೂರು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಅಧೀಕ್ಷಕರಾದ ಬಿ.ಎಸ್ ರಮೇಶ್ ಅವರು ತಿಳಿಸಿದರು.

ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮೈಸೂರು ಜಿಲ್ಲಾ ಕಾರಾಗೃಹದಲ್ಲಿ ಯೋಗದಸರಾ ಉಪ ಸಮಿತಿಯಿಂದ ಆಯೋಜಿಸಿದ್ದ ಕಾರಾಗೃಹ ವಾಸಿಗಳಿಗೆ ವಿಶಿಷ್ಟ ಯೋಗಭ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆರೋಗ್ಯ ತನ್ನಿಂದ ತಾನೇ ಬರುವಂತಹ ವಸ್ತುವಲ್ಲ ಅದಕ್ಕೆ ನಿರ್ವಹಣೆಯ ಅವಶ್ಯಕತೆ ಇದೆ. ನಮ್ಮ ದೇಹ ಮತ್ತು ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಯೋಗ ಅತಿ ಅವಶ್ಯಕ. ನಾಡ ಹಬ್ಬ ಮೈಸೂರು ದಸರಾ ಸವಿ ನೆನಪು ಕಟ್ಟಿಕೊಳ್ಳಲು ಇಂದು ನಮ್ಮ ಕಾರಾಗೃಹದಲ್ಲಿ ವಿಶಿಷ್ಟ ಯೋಗ ಅಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಒಂದು ವಿನೂತನ ಪ್ರಯತ್ನ ಎಂದರು.
ದಸರಾ ಉತ್ಸವದ ಜೊತೆಗೆ ಯೋಗದ ಉಪ ಸಮಿತಿ ಈ ಬಾರಿ ಯೋಗ ಉತ್ಸವವನ್ನು ಮಾಡುತ್ತಿದೆ.ನಾಡಹಬ್ಬ ದಸರಾದಲ್ಲಿ ಪಾಲ್ಗೊಳ್ಳುವ ಸಲುವಾಗಿ ಇಂದು ಯೋಗಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರಾಗೃಹದಲ್ಲಿ ವಾಸಿಸುವ ನೀವುಗಳು ಅಲ್ಪ ಕಾಲಕ್ಕೆ ಮಾತ್ರ ಇಲ್ಲಿ ವಾಸಿಸುತ್ತೀರಾ. ಹಾಗಾಗಿ ಯಾವುದು ಕ್ಷಣಾರ್ಧದಲ್ಲಿ ಮಾಡಿದ ತಪ್ಪಿಗೆ ಸೆರೆಮನೆಯ ವಾಸವನ್ನು ಅನುಭವಿಸುತ್ತಿದ್ದೀರಿ. ಇಲ್ಲಿಂದ ಹೊರಡುವ ಮುನ್ನ ಮನಃಪರಿವರ್ತನೆ ಮಾಡಿಕೊಂಡು ಪ್ರತಿಯೊಬ್ಬರು ಸಮಾಜಕ್ಕೆ ಒಳ್ಳೆಯದನ್ನು ಬಯಸುವಂತಹ ಮನಸ್ಸನ್ನು ಇಟ್ಟು ಹೊರಡಬೇಕು. ವಿವಿಧ ಸಂಘ ಸಂಸ್ಥೆಗಳ ಅಡಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ನಿಮ್ಮಲ್ಲಿರುವ ಒಳ್ಳೆಯ ಗುಣಗಳನ್ನು ಪೋಷಣೆ ಮಾಡಿ ಸಮಾಜಕ್ಕೆ ಉತ್ತಮ ನಾಗರಿಕರನ್ನಾಗಿ ಮಾಡುವ ಪ್ರಯತ್ನವನ್ನು ಇಂದಿನ ಕಾರಾಗೃಹಗಳು ಮಾಡುತ್ತಿವೆ ಎಂದರು.

ಕಳೆದ ಒಂದು ತಿಂಗಳಿಂದ ಕಾರಾಗೃಹದಲ್ಲಿ ಯೋಗ ತರಬೇತಿಯನ್ನು SPYSS ಸಂಸ್ಥೆಯಿಂದ ನೀಡಲಾಗಿತ್ತು. ಸುಮಾರು 300 ಸೆರೆಮನೆ ವಾಸಿಗರು ಎರಡು ಗಂಟೆಗಳ ಕಾಲ ಯೋಗವನ್ನು ಅಭ್ಯಾಸ ಮಾಡಿದರು. ಚಾಮರಾಜನಗರ ಜಿಲ್ಲಾ ಆಡಳಿತ, ಆಯುಷ್ ಸಂಸ್ಥೆಯ ಸದಸ್ಯರು, ದಸರಾ ಯೋಗ ಉಪಸಮಿತಿಯ ಸದಸ್ಯರು ಎಲ್ಲರೂ ಕೂಡ ಯೋಗ ಮಾಡಿ ಸಿಹಿ ಹಂಚಿ ಯೋಗ ದಸರಾವನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮೈಸೂರು ಕಾರಾಗೃಹದ ಕಾರ್ಯನಿರ್ವಾಹದ ದಾಮೋದರ್ ,ಯೋಗ ದಸರಾ ಉಪ ಸಮಿತಿಯ ಉಪಾಧ್ಯಕ್ಷರಾದ ಮಹೇಶ್, ಭೂ ದಾಖಲೆಗಳ ಉಪ ನಿರ್ದೇಶಕರಾದ ಕೆ ರಮ್ಯಾ, ಯೋಗ ದಸರಾ ಉಪ ಸಮಿತಿಯ ಕಾರ್ಯಧ್ಯಕ್ಷರಾದ ಡಿ.ಎಮ್ ರಾಣಿ, ಹಾಗೂ ಕಾರ್ಯದರ್ಶಿ ಡಾ.ಪುಷ್ಪಾ, ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯರು, ಯೋಗ ಶಿಕ್ಷಣ ಮತ್ತು ಸಂಶೋಧನೆಯ ಸದಸ್ಯರು, ಮತ್ತು ಯೋಗ ದಸರಾ ಉಪ ಸಮಿತಿಯ ಸದಸ್ಯರು ಹಾಜರಿದ್ದರು…

ದಸರಾ2023:ಕೇಂದ್ರ ಕಾರಾಗೃಹವಾಸಿಗಳಿಗೆ ಯೋಗಾಭ್ಯಾಸ…

ಮೈಸೂರು,ಅ20,Tv10 ಕನ್ನಡ

ಕಾರಾಗೃಹಗಳು ಬಂದಿಕಾನೆ ಆಗಬಾರದು, ಪರಿವರ್ತನೆಯ ತಾಣವಾಗಬೇಕು. ಕಾರಾಗೃಹಗಳು ಅಪರಾಧಿಗಳಿಗೆ ದಂಡನೆ ಶಿಕ್ಷೆ ಬಂಧನಗಳನ್ನು ನೀಡುತ್ತಿಲ್ಲ ಬದಲಾಗಿ ಮನಃಪರಿವರ್ತನೆಗೆ ಅವಕಾಶ ಮಾಡಿಕೊಟ್ಟು ಸಮಾಜದಲ್ಲಿ ಶಾಂತಿಯನ್ನು ನಡೆಸುವಂತಹ ಕೆಲಸಗಳನ್ನು ಕಾರಾಗೃಹಗಳು ಮಾಡುತ್ತಿವೆ ಎಂದು ಮೈಸೂರು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಅಧೀಕ್ಷಕರಾದ ಬಿ.ಎಸ್ ರಮೇಶ್ ಅವರು ತಿಳಿಸಿದರು.

ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮೈಸೂರು ಜಿಲ್ಲಾ ಕಾರಾಗೃಹದಲ್ಲಿ ಯೋಗದಸರಾ ಉಪ ಸಮಿತಿಯಿಂದ ಆಯೋಜಿಸಿದ್ದ ಕಾರಾಗೃಹ ವಾಸಿಗಳಿಗೆ ವಿಶಿಷ್ಟ ಯೋಗಭ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆರೋಗ್ಯ ತನ್ನಿಂದ ತಾನೇ ಬರುವಂತಹ ವಸ್ತುವಲ್ಲ ಅದಕ್ಕೆ ನಿರ್ವಹಣೆಯ ಅವಶ್ಯಕತೆ ಇದೆ. ನಮ್ಮ ದೇಹ ಮತ್ತು ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಯೋಗ ಅತಿ ಅವಶ್ಯಕ. ನಾಡ ಹಬ್ಬ ಮೈಸೂರು ದಸರಾ ಸವಿ ನೆನಪು ಕಟ್ಟಿಕೊಳ್ಳಲು ಇಂದು ನಮ್ಮ ಕಾರಾಗೃಹದಲ್ಲಿ ವಿಶಿಷ್ಟ ಯೋಗ ಅಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಒಂದು ವಿನೂತನ ಪ್ರಯತ್ನ ಎಂದರು.
ದಸರಾ ಉತ್ಸವದ ಜೊತೆಗೆ ಯೋಗದ ಉಪ ಸಮಿತಿ ಈ ಬಾರಿ ಯೋಗ ಉತ್ಸವವನ್ನು ಮಾಡುತ್ತಿದೆ.ನಾಡಹಬ್ಬ ದಸರಾದಲ್ಲಿ ಪಾಲ್ಗೊಳ್ಳುವ ಸಲುವಾಗಿ ಇಂದು ಯೋಗಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರಾಗೃಹದಲ್ಲಿ ವಾಸಿಸುವ ನೀವುಗಳು ಅಲ್ಪ ಕಾಲಕ್ಕೆ ಮಾತ್ರ ಇಲ್ಲಿ ವಾಸಿಸುತ್ತೀರಾ. ಹಾಗಾಗಿ ಯಾವುದು ಕ್ಷಣಾರ್ಧದಲ್ಲಿ ಮಾಡಿದ ತಪ್ಪಿಗೆ ಸೆರೆಮನೆಯ ವಾಸವನ್ನು ಅನುಭವಿಸುತ್ತಿದ್ದೀರಿ. ಇಲ್ಲಿಂದ ಹೊರಡುವ ಮುನ್ನ ಮನಃಪರಿವರ್ತನೆ ಮಾಡಿಕೊಂಡು ಪ್ರತಿಯೊಬ್ಬರು ಸಮಾಜಕ್ಕೆ ಒಳ್ಳೆಯದನ್ನು ಬಯಸುವಂತಹ ಮನಸ್ಸನ್ನು ಇಟ್ಟು ಹೊರಡಬೇಕು. ವಿವಿಧ ಸಂಘ ಸಂಸ್ಥೆಗಳ ಅಡಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ನಿಮ್ಮಲ್ಲಿರುವ ಒಳ್ಳೆಯ ಗುಣಗಳನ್ನು ಪೋಷಣೆ ಮಾಡಿ ಸಮಾಜಕ್ಕೆ ಉತ್ತಮ ನಾಗರಿಕರನ್ನಾಗಿ ಮಾಡುವ ಪ್ರಯತ್ನವನ್ನು ಇಂದಿನ ಕಾರಾಗೃಹಗಳು ಮಾಡುತ್ತಿವೆ ಎಂದರು.

ಕಳೆದ ಒಂದು ತಿಂಗಳಿಂದ ಕಾರಾಗೃಹದಲ್ಲಿ ಯೋಗ ತರಬೇತಿಯನ್ನು SPYSS ಸಂಸ್ಥೆಯಿಂದ ನೀಡಲಾಗಿತ್ತು. ಸುಮಾರು 300 ಸೆರೆಮನೆ ವಾಸಿಗರು ಎರಡು ಗಂಟೆಗಳ ಕಾಲ ಯೋಗವನ್ನು ಅಭ್ಯಾಸ ಮಾಡಿದರು. ಚಾಮರಾಜನಗರ ಜಿಲ್ಲಾ ಆಡಳಿತ, ಆಯುಷ್ ಸಂಸ್ಥೆಯ ಸದಸ್ಯರು, ದಸರಾ ಯೋಗ ಉಪಸಮಿತಿಯ ಸದಸ್ಯರು ಎಲ್ಲರೂ ಕೂಡ ಯೋಗ ಮಾಡಿ ಸಿಹಿ ಹಂಚಿ ಯೋಗ ದಸರಾವನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮೈಸೂರು ಕಾರಾಗೃಹದ ಕಾರ್ಯನಿರ್ವಾಹದ ದಾಮೋದರ್ ,ಯೋಗ ದಸರಾ ಉಪ ಸಮಿತಿಯ ಉಪಾಧ್ಯಕ್ಷರಾದ ಮಹೇಶ್, ಭೂ ದಾಖಲೆಗಳ ಉಪ ನಿರ್ದೇಶಕರಾದ ಕೆ ರಮ್ಯಾ, ಯೋಗ ದಸರಾ ಉಪ ಸಮಿತಿಯ ಕಾರ್ಯಧ್ಯಕ್ಷರಾದ ಡಿ.ಎಮ್ ರಾಣಿ, ಹಾಗೂ ಕಾರ್ಯದರ್ಶಿ ಡಾ.ಪುಷ್ಪಾ, ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯರು, ಯೋಗ ಶಿಕ್ಷಣ ಮತ್ತು ಸಂಶೋಧನೆಯ ಸದಸ್ಯರು, ಮತ್ತು ಯೋಗ ದಸರಾ ಉಪ ಸಮಿತಿಯ ಸದಸ್ಯರು ಹಾಜರಿದ್ದರು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *