ದಸರಾ2023:ಪಾರಂಪರಿಕ ಟಾಂಗಾ ಸವಾರಿಗೆ ಚಾಲನೆ…ಸಚಿವ ಹೆಚ್.ಕೆ.ಪಾಟೀಲ್ ರಿಂದ ಉದ್ಘಾಟನೆ…

ಮೈಸೂರು,ಅ20,Tv10 ಕನ್ನಡ

ಜಗತ್ತು ಮೈಸೂರಿನತ್ತ ನೋಡಲು ಮೈಸೂರು ಮಹಾರಾಜರೇ ಕಾರಣ ಎಂದು
ಮೈಸೂರಿನಲ್ಲಿ ಸಚಿವ ಹೆಚ್. ಕೆ ಪಾಟೀಲ್ ಹೇಳಿದ್ದಾರೆ
ದಸರಾ ಪ್ರಯುಕ್ತ ಪಾರಂಪರಿಕ
ಟಾಂಗಾ ಸವಾರಿಯನ್ನ ಜಗನ್ಮೋಹನ ಅರಮನೆಯಲ್ಲಿ ಉದ್ಘಾಟಿಸಿದ ಸಚಿವ ಹೆಚ್.ಕೆ ಪಾಟೀಲ್ ನಂತರ ಮಾತನಾಡಿದರು.
ಟಾಂಗಾದಲ್ಲಿ ಸಾಂಸ್ಕೃತಿಕ ನಗರಿಯಲ್ಲಿ ಹೆಚ್.ಕೆ ಪಾಟೀಲ್ ಸವಾರಿ ಮಾಡಿದರು.
ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ವತಿಯಿಂದ ಪಾರಂಪರಿಕ ಉಡುಗೆಯಲ್ಲಿ ನೂತನ ದಂಪತಿಗಳಿಗಾಗಿ ಆಯೋಜಿಸಿದ್ದ ಪಾರಂಪರಿಕ ಟಾಂಗಸವಾರಿಯ ಕಾರ್ಯಕ್ರಮ ಇದಾಗಿದೆ.
ರಾಜ್ಯದಲ್ಲಿ ಒಟ್ಟು 25 ಸಾವಿರ ಪಾರಂಪರಿಕ ಕಟ್ಟಡಗಳು, ಸ್ಮಾರಕಗಳಿವೆ.
ಇವುಗಳಲ್ಲಿ 500 ರಿಂದ 600 ಪಾರಂಪರಿಕ ಕಟ್ಟಡಗಳನ್ನು ಸರ್ಕಾರ ಗುರುತಿಸಿದೆ. ಇನ್ನೂ 500 ಪಾರಂಪರಿಕ ಕಟ್ಟಡಗಳನ್ನು ಗುರುತಿಸಿ ಉಳಿಸಿ ಸಂರಕ್ಷಿಸಲು ಯೋಜನೆಯನ್ನು ರೂಪಿಸಲಾಗುತ್ತಿದೆ.
ಎಲ್ಲಾ ಪಾರಂಪರಿಕ ಕಟ್ಟಡಗಳಾಗಲಿ, ಸ್ಮಾರಕಗಳನ್ನಾಗಲಿ ಸರ್ಕಾರ ಒಂದೆ ಮಾಡಲು ಆಗಲ್ಲ.
ಅದಕ್ಕೆ ಜನಸಾಮಾನ್ಯರ ಅಭಿಮಾನ ಹಾಗೂ ಸಹಕಾರ ಬೇಕಾಗುತ್ತದೆ.
ಪಾರಂಪರಿಕ ಕಟ್ಟಡಗಳು, ಸ್ಮಾರಕಗಳು ನಿಮ್ಮ ಊರಿನಲ್ಲಿಯೇ ಇದ್ದರೆ ಅಂತಹ ಸ್ಮಾರಕವನ್ನೂ ರಕ್ಷಿಸುವ ಹಕ್ಕು ನಿಮಗಿರುತ್ತದೆ ಹಾಗೂ ದತ್ತು ತೆಗೆದುಕೊಂಡು ರಕ್ಷಿಸಬಹುದಾಗಿದೆ.
ಇಂತಹ ಕಟ್ಟಡಗಳನ್ನು ರಕ್ಷಿಸಲು ಜನರನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ನಮ್ಮ ಸ್ಮಾರಕಗಳ ದತ್ತು ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಅಮೇರಿಕಾದ ಅನಿವಾಸಿ ಭಾರತಿಯರೊಡನೆ ಆನ್ ಲೈನ್ ಮೂಲಕ (ಜೂಮ್ ಮಿಟಿಂಗ್) ಪಾರಂಪರಿಕ ಕಟ್ಟಡಗಳ ದತ್ತು ತೆಗೆದುಕೊಳ್ಳುವ ಸಂಬಂದ ಚರ್ಚಿಸಿದ್ದೇನೆ.
ಇದರಿಂದಾಗಿ ಸುಮಾರು 20 ಅನಿವಾಸಿ ಭಾರತೀಯರು ಪಾರಂಪರಿಕ ಕಟ್ಟಡಗಳನ್ನು ದತ್ತು ತೆಗೆದುಕೊಂಡು ಸಂರಕ್ಷಿಸುವ ಭರವಸೆ ನೀಡಿದ್ದಾರೆ ಎಂದರು…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *